ಇರಾನ್‌ – ಅಮೆರಿಕ ಸಂಘರ್ಷ : ಚಿನ್ನ ಮಾರುಕಟ್ಟೆ ದುಬಾರಿ, ಸಂಕಷ್ಟಗಳ ಸರಣಿ ಆರಂಭ ?


Team Udayavani, Jan 6, 2020, 10:59 PM IST

Iran-War-6-1

ಇರಾನ್‌ ಹಾಗೂ ಅಮೆರಿಕ ನಡುವೆ ತಲೆದೋರಿರುವ ಯುದ್ಧದ ಪರಿಸ್ಥಿತಿಯಿಂದ ಭಾರತಕ್ಕೆ ಸಂಕಷ್ಟ ಬಂದೊದಗಿದೆ. ತೈಲ ಬೆಲೆಯೂ ಏರಿಕೆಯಾಗಲಾರಂಭಿಸಿದೆ. ಸದ್ಯ ಚಿನ್ನದ ಬೆಲೆ ಗಗನಕ್ಕೇರಿದ್ದು, ಸಾರ್ವಕಾಲಿಕ ದಾಖಲೆ ಬರೆದಿದೆ. ಚಿನ್ನ ಮಾರುಕಟ್ಟೆ ದಿನೇ ದಿನೆ ದುಬಾರಿಯಾಗುತ್ತಾ ಸಾಗಿದೆ. 24 ಕ್ಯಾರೆಟ್‌ ಚಿನ್ನದ ದರದಲ್ಲಿ ಸೋಮವಾರ 780 ರೂ. ಏರಿಕೆಯಾಗಿದೆ. ಮತ್ತೂಂದೆಡೆ ರೂಪಾಯಿ ಮೌಲ್ಯವೂ ಕುಸಿಯುತ್ತಿದ್ದು, ಬೆಲೆ ಏರಿಕೆ ಬಿಸಿ ಹೆಚ್ಚಾಗತೊಡಗಿದೆ.

ಸೋಮವಾರ ಎಷ್ಟಾಯಿತು?
24 ಕ್ಯಾರೆಟ್‌ ಚಿನ್ನದ ದರದಲ್ಲಿ 780 ರೂ. ಏರಿಕೆಯಾಗಿದೆ. ಈ ಮೂಲಕ ಬೆಳ್ಳಿ ದರ 50 ಸಾವಿರ ಗಡಿ ದಾಟಿದೆ. ಬೆಂಗಳೂರಲ್ಲಿ 10 ಗ್ರಾಂ., 24 ಕ್ಯಾರೆಟ್‌ ಚಿನ್ನದ ಇಂದಿನ ದರ 42,230 ರೂ. ನಿಗದಿಯಾಗಿದೆ. ಮುಂಬಯಿ ಮಾರುಕಟ್ಟೆಯಲ್ಲಿ 10 ಗ್ರಾಂ. 24 ಕ್ಯಾರೆಟ್‌ ಚಿನ್ನದ ಇಂದಿನ ದರ 42,135 ರೂ.ಗೆ ಏರಿದೆ. ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ 42,110 ರೂ.ಗೆ ವಹಿವಾಟು ನಡೆದಿದೆ.

ತೈಲ ಬೆಲೆ ಏರಿಕೆ
ಇರಾನ್‌ ಮೇಲೆ ಅಮೆರಿಕ ದಾಳಿ ನಡೆಸಿದ ಬೆನ್ನಲ್ಲೇ ಕಚ್ಚಾ ತೈಲದ ಬೆಲೆ ದಿಢೀರ್‌ ಏರಿಕೆಯಾಗಿದೆ. ಬ್ರೆಂಟ್‌ ಕಚ್ಚಾ ತೈಲದ ಬೆಲೆ ಶೇ.4.39ರಷ್ಟು ಏರಿಕೆಯಾಗಿದ್ದು ಒಂದು ಬ್ಯಾರೆಲ್‌ ಕಚ್ಚಾ ತೈಲದ ಬೆಲೆ 69.16 ಡಾಲರ್‌ (ಅಂದಾಜು 4,900 ರೂ.) ತಲುಪಿದೆ. ಈ ಹಿಂದೆ ಒಂದು ಬ್ಯಾರೆಲ್‌ ಕಚ್ಚಾ ತೈಲದ ಬೆಲೆ 66.25 ಡಾಲರ್‌ (ಅಂದಾಜು 4,700 ರೂ.) ಇತ್ತು.

ಭಾರತಕ್ಕೆ ಭಾರೀ ಹೊಡೆತ
ಅಮೆರಿಕ ಮತ್ತು ಇರಾನ್‌ ಸಂಘರ್ಷದಿಂದಾಗಿ ಭಾರತ ಭಾರೀ ಸಮಸ್ಯೆ ಎದುರಿಸಲಿದೆ. ಈಗಾಗಲೇ ಬ್ರೆಂಟ್‌ ಕಚ್ಚಾ ತೈಲದ ಬೆಲೆ ಡಾಲರ್‌ಗೆ ಶೇ 4.5ರಷ್ಟು ಏರಿಕೆಯಾಗಿ, 68.23 ಡಾಲರ್‌ಗೆ (4,895 ರೂ.) ತಲುಪಿದೆ. ಚಿನ್ನ ಮತ್ತು ಬೆಳ್ಳಿಗೆ ಬೇಡಿಕೆ ಹೆಚ್ಚಳವಾಗಿ, ಅವುಗಳ ಬೆಲೆಯೂ ಏರಿಕೆಯಾಗಿದೆ.

ಅಪಾಯ ಇದ್ದೇ ಇದೆ
ಕೊಲ್ಲಿಯಲ್ಲಿ ಸಂಘರ್ಷ ಶಮನವಾಗದೇ ಇದ್ದರೆ ಎರಡನೇ ಹಂತದ ಪರಿಣಾಮಗಳನ್ನು ಎದುರಿಸಲು ಭಾರತ ಸಜ್ಜಾಗಬೇಕಾಗುತ್ತದೆ. ತೈಲ ಆಮದಿನ ಮೇಲೆ ದೇಶವು ಮಾಡಬೇಕಾದ ವೆಚ್ಚ ದುಪ್ಪಟ್ಟಾಗಲಿದೆ. ಅಗತ್ಯ ಇರುವ ತೈಲದ ಶೇ. 80ಕ್ಕಿಂತ ಹೆಚ್ಚು ಭಾಗವನ್ನು ಭಾರತವು ಆಮದು ಮಾಡಿಕೊಳ್ಳುತ್ತಿರುವುದರಿಂದ ಸಮಸ್ಯೆಯ ತೀವ್ರತೆ ಹೆಚ್ಚಾಗಲಿದೆ.

ಮುಂಗಡ ಪತ್ರಕ್ಕೆ ಹಿನ್ನಡೆ ಸಾಧ್ಯತೆ
ಕೇಂದ್ರ ಸರಕಾರ ತನ್ನ ವಾರ್ಷಿಕ ಮುಂಗಡ ಪತ್ರವನ್ನು ತಯಾರಿಸುವ ಸಂದರ್ಭದಲ್ಲಿಯೇ ಈ ಬಿಕ್ಕಟ್ಟು ಸೃಷ್ಠಿಯಾಗಿದೆ. ಹಾಗಾಗಿ, ದೊಡ್ಡ ಮಟ್ಟದ ತೆರಿಗೆ ವಿನಾಯಿತಿ, ಅರ್ಥ ವ್ಯವಸ್ಥೆಯ ಚೇತರಿಕೆಗೆ ಕೈಗೊಳ್ಳಬಹುದಾದ ಕ್ರಮಗಳನ್ನು ನಾವು ನಿರೀಕ್ಷೆ ಮಾಡುವಂತಿಲ್ಲ. ಆಕರ್ಷಕ ವಿನಾಯಿತಿಗಳು ಈ ಬಜೆಟ್‌ನಲ್ಲಿ ಕಂಡುಬರುವುದು ಕಷ್ಟ ಎಂದು ಹೇಳಲಾಗುತ್ತಿದೆ. ತೈಲದ ಮೇಲೆ ಮಾಡುತ್ತಿರುವ ವೆಚ್ಚ ಹೆಚ್ಚುತ್ತಿರುವುದರ ಬಗ್ಗೆ ಆರ್‌ಬಿಐ ಈಗಾಗಲೇ ಕಳವಳ ವ್ಯಕ್ತಪಡಿಸಿದೆ.

ಇಂಧನ ಹೆಚ್ಚು ಅಪಾಯ ಯಾಕೆ?
ಸಂಘರ್ಷ ಮುಂದುವರಿದರೆ ಇರಾನ್‌ನಿಂದ ತೈಲ ಪೂರೈಕೆಗೆ ತೊಡಕಾಗಬಹುದು. ಅಮೆರಿಕದಿಂದ ಭಾರತಕ್ಕೆ ಜಲ ಮಾರ್ಗದ ಮೂಲಕ ಆಗುವ ತೈಲ ಪೊರೈಕೆಯನ್ನು ಇರಾನ್‌ ಗುರಿ ಮಾಡಿಕೊಳ್ಳುವ ಅಪಾಯವೂ ಇದೆ. ಈಗಾಗಲೇ ಇರಾನ್‌ನಿಂದ ತೈಲ ಖರೀದಿ ಮಾಡಬಾರದು ಎಂದು ಭಾರತದ ಮೇಲೆ ಅಮೆರಿಕ ಒತ್ತಡ ಹೇರುತ್ತಲೇ ಬಂದಿದೆ.

ಇರಾನ್‌ ನಡೆ ಕುತೂಹಲ
ಹತ್ಯೆ ಬಳಿಕ ಬ್ಯಾರೆಲ್‌ ಕಚ್ಚಾ ತೈಲದ ಬೆಲೆ ಶೇ. 4ರಷ್ಟು ಏರಿಕೆ ಆಗಿದೆ. ಅಮೆರಿಕಕ್ಕೆ ಪ್ರತೀಕಾರ ತೀರಿಸಬೇಕು ಎನ್ನುತ್ತಿರುವ ಇರಾನ್‌ ಮೇಲೆ ಕೆಲವು ಆಯ್ಕೆಗಳಿವೆ. ಹರ್ಮಜ್‌ ಜಲಸಂಧಿಯನ್ನು ಮುಚ್ಚುವುದು. ಪರ್ಷಿಯನ್‌ ರಾಷ್ಟ್ರಗಳಿಂದ ತೈಲ ಬರುವುದಕ್ಕೆ ಇರುವ ಏಕೈಕ ಸಮುದ್ರ ಮಾರ್ಗ ಇದು. ಎರಡು ವರ್ಷಗಳ ಹಿಂದೆ ಅಮೆರಿಕವು ಇರಾನ್‌ ಮೇಲೆ ಆರ್ಥಿಕ ದಿಗ್ಬಂಧನ ಹಾಕಿದಾಗ ಹೀಗೇ ಮಾಡಲಾಗಿತ್ತು.

ಇಂಧನ ಬೆಲೆ ಏರಿಕೆ; ಹಲವು ಸಮಸ್ಯೆಗೆ ಕಾರಣ
ಭಾರತಕ್ಕೆ ತೈಲ ಪೂರೈಸುವ ಪ್ರಮುಖ ದೇಶಗಳಲ್ಲಿ ಇರಾನ್‌ ಕೂಡ ಒಂದು. 2018-19ರಲ್ಲಿ ಇರಾನ್‌ನಿಂದ 2.3 ಕೋಟಿ ಟನ್‌ ತೈಲ ಆಮದಾಗಿದೆ. ಇದು, ಹಿಂದಿನ ವರ್ಷಕ್ಕೆ ಹೋಲಿಸಿದರೆ ಶೇ. 5ರಷ್ಟು ಹೆಚ್ಚು ಎಂಬುದು ಗಮನಾರ್ಹ. ಭಾರತಕ್ಕೆ ಇರಾಕ್‌ ಮತ್ತು ಸೌದಿ ಅರೇಬಿಯಾದ ಅತಿ ಹೆಚ್ಚು ತೈಲ ಪೂರೈಸುವ ದೇಶವಾಗಿದ್ದು, ಬಳಿಕದ ಸ್ಥಾನದಲ್ಲಿ ಇರಾನ್‌ ಇದೆ.

ಡಿಸೆಂಬರ್‌ 2ರ ಬಳಿಕ ಕಚ್ಚಾ ತೈಲದ ಬೆಲೆ ಶೇ. 14ರಷ್ಟು ಏರಿಕೆಯಾಗಿದೆ. ಹಾಗಾಗಿ, ಈಗಿನ ಪರಿಸ್ಥಿತಿಯೇ ಭಾರತದ ಬಜೆಟ್‌ ಲೆಕ್ಕಾಚಾರವನ್ನು ಏರುಪೇರಾಗಿಸಬಹುದು. ಸೌದಿಯ ಅರಾಮ್ಕೊ ಕಂಪನಿಯ ಮೇಲೆ ಕಳೆದ ಸೆಪ್ಟೆಂಬರ್‌ನಲ್ಲಿ ಡ್ರೋನ್‌ ದಾಳಿಯಾದಾಗ ಕಚ್ಚಾ ತೈಲ ಬೆಲೆ ಬ್ಯಾರಲ್‌ ಒಂದಕ್ಕೆ 71.95 ಡಾಲರ್‌ ಏರಿಕೆಯಾಗಿತ್ತು ಎಂಬುದನ್ನು ಇಲ್ಲಿ ಸ್ಮರಿಸಬಹುದು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.