Israel ದಾಳಿ ಇನ್ನಷ್ಟು ತೀವ್ರ; 43 ಸಾವಿರಕ್ಕೂ ಹೆಚ್ಚು ಬ*ಲಿ: ವಿಶ್ವಸಂಸ್ಥೆ ತೀವ್ರ ಕಳವಳ

ಇಸ್ರೇಲಿ ಸಂಸ್ಥೆಗಳ ವಿರುದ್ಧ ಸಾಂಸ್ಕೃತಿಕ ಬಹಿಷ್ಕಾರ ಆರಂಭ...

Team Udayavani, Oct 28, 2024, 8:19 PM IST

ISREL

ಟೆಲ್ ಅವೀವ್ : ಮಧ್ಯಪ್ರಾಚ್ಯದಲ್ಲಿ ಸಂಘರ್ಷ ದಿನದಿಂದ ದಿನಕ್ಕೆ ತೀವ್ರವಾಗುತ್ತಿದ್ದು, ಉತ್ತರ ಗಾಜಾದಲ್ಲಿ ಇಸ್ರೇಲ್‌ನ 24 ದಿನಗಳ ಮಿಲಿಟರಿ ಕಾರ್ಯಾಚರಣೆಯಲ್ಲಿ ಸೋಮವಾರದ ವರೆಗೆ (ಅ 28)1,000 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಆರೋಗ್ಯ ಅಧಿಕಾರಿಗಳ ಪ್ರಕಾರ ಮೃತರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು ಎಂದು ಹೇಳಲಾಗಿದೆ.

ಲೆಬನಾನ್‌ನ ಆರೋಗ್ಯ ಸಚಿವಾಲಯದ ಪ್ರಕಾರ ಇಸ್ರೇಲಿ ಜೆಟ್‌ಗಳು ಟೈರ್ ನಗರವ ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದು ಕನಿಷ್ಠ ಏಳು ಮಂದಿ ಸಾವನ್ನಪ್ಪಿ 17 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.ಇಸ್ರೇಲಿ ಪಡೆಗಳು ಗಾಜಾದಲ್ಲಿ ಕನಿಷ್ಠ 53 ಜನರನ್ನು ಮತ್ತು ಲೆಬನಾನ್‌ನಲ್ಲಿ 21 ಜನರನ್ನು ಭಾನುವಾರ ನಡೆಸಿದ ಭಾರೀ ದಾಳಿಯಲ್ಲಿ ಹತ್ಯೆಗೈದಿವೆ ಎಂದು ವರದಿಯಾಗಿದೆ.

ಕಳೆದ ವಾರ ದಕ್ಷಿಣ ಲೆಬನಾನ್‌ನಲ್ಲಿ ಮೂವರು ಪತ್ರಕರ್ತರ ಸಾವಿಗೆ ಕಾರಣವಾದ ಇಸ್ರೇಲಿ ದಾಳಿಯ ಬಗ್ಗೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಗೆ ದೂರು ಸಲ್ಲಿಸಿರುವುದಾಗಿ ಲೆಬನಾನ್ ಸೋಮವಾರ ಪ್ರಕಟಿಸಿದೆ.

ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್ ಅವರು ಉತ್ತರ ಗಾಜಾದಲ್ಲಿ ಸಂಭವಿಸುತ್ತಿರುವ ಸಾವು, ಗಾಯ ಮತ್ತು ವಿನಾಶದ ಭೀಕರತೆಯ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ.

ಗಾಜಾದಲ್ಲಿ, 2023 ಅಕ್ಟೋಬರ್ 7 ರಿಂದ ಇಸ್ರೇಲಿ ದಾಳಿಯಲ್ಲಿ ಕನಿಷ್ಠ 43,020 ಜನರು ಸಾವನ್ನಪ್ಪಿದ್ದಾರೆ ಮತ್ತು 101,110 ಜನರು ಗಾಯಗೊಂಡಿದ್ದಾರೆ. ಹಮಾಸ್-ನೇತೃತ್ವದ ದಾಳಿಯ ಸಮಯದಲ್ಲಿ ಇಸ್ರೇಲ್‌ನ ಅಂದಾಜು 1,139 ಜನರು ಕೊಲ್ಲಲ್ಪಟ್ಟರು ಮತ್ತು 200 ಕ್ಕೂ ಹೆಚ್ಚು ಜನರು ಒತ್ತೆಯಾಳಾಗಿದ್ದಾರೆ.

ಲೆಬನಾನ್‌ನಲ್ಲಿ, ಗಾಜಾದಲ್ಲಿ ಸಂಘರ್ಷ ಪ್ರಾರಂಭವಾದಾಗಿನಿಂದ ಇಸ್ರೇಲಿ ದಾಳಿಯಲ್ಲಿ 127 ಮಕ್ಕಳು ಸೇರಿದಂತೆ ಕನಿಷ್ಠ 2,574 ಜನರು ಸಾವನ್ನಪ್ಪಿದ್ದಾರೆ ಮತ್ತು 12,001 ಮಂದಿ ಗಾಯಗೊಂಡಿದ್ದಾರೆ.

ಲೆಬನಾನ್‌ನ ಹೆಜ್ಬುಲ್ಲಾ ಉಗ್ರ ಸಂಘಟನೆ ತನ್ನ ಡ್ರೋನ್ ಇಸ್ರೇಲ್ ನ ಯುಡಿಫತ್ ಮಿಲಿಟರಿ ಇಂಡಸ್ಟ್ರೀಸ್ ಕಂಪನಿಗೆ ತನ್ನ ಗುರಿಯನ್ನು ನಿಖರವಾಗಿ ಹೊಡೆದಿದೆ” ಎಂದು ಹೇಳಿದೆ.ಲೆಬನಾನ್‌ನ ವಾಝಾನಿ ಗ್ರಾಮದ ಪಶ್ಚಿಮದಲ್ಲಿರುವ ಅಲ್-ಒಮ್ರಾ ಪ್ರದೇಶದಲ್ಲಿ ಇಸ್ರೇಲಿ ಸೈನಿಕರನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ ಎಂದು ಉಗ್ರರ ಗುಂಪು ಹೇಳಿಕೊಂಡಿದೆ.

ಗಾಜಾದಲ್ಲಿ 100 ಕ್ಕೂ ಹೆಚ್ಚು ಹಮಾಸ್ ಉಗ್ರಗಾಮಿಗಳನ್ನು ಬಂಧಿಸಲಾಗಿದೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ. ಇಸ್ರೇಲ್‌ ದಾಳಿಗೆ ಪ್ರತಿಕ್ರಿಯಿಸಲು ನಾವು ಲಭ್ಯವಿರುವ ಎಲ್ಲಾ ಸಾಧನಗಳನ್ನು ಬಳಸುತ್ತೇವೆ ಎಂದು ಇರಾನ್ ಹೇಳಿಕೊಂಡಿದೆ.

ಇಸ್ರೇಲಿ ಸಂಸ್ಥೆಗಳ ವಿರುದ್ಧ ಸಾಂಸ್ಕೃತಿಕ ಬಹಿಷ್ಕಾರ ಆರಂಭ
1,100 ಕ್ಕೂ ಹೆಚ್ಚು ಲೇಖಕರು ಇಸ್ರೇಲಿ ಪ್ರಕಾಶಕರ ವಿರುದ್ಧ ಸಾಮೂಹಿಕ ಬಹಿಷ್ಕಾರವನ್ನು ಹಾಕಿದ್ದಾರೆ ಎಂದು ಗುಂಪುಗಳ ಒಕ್ಕೂಟವು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಇದು ಇಸ್ರೇಲಿ ಸಂಸ್ಥೆಗಳ ವಿರುದ್ಧದ ಅತಿದೊಡ್ಡ ಸಾಂಸ್ಕೃತಿಕ ಬಹಿಷ್ಕಾರವಾಗಿದೆ, “ಸಹಿ ಮಾಡಿದವರು ವರ್ಣಭೇದ ನೀತಿ ಮತ್ತು ಸ್ಥಳಾಂತರದೊಂದಿಗಿನ ಸಂಬಂಧವನ್ನು ಪ್ರಶ್ನಿಸದೆ ಇಸ್ರೇಲಿ ಸಂಸ್ಥೆಗಳೊಂದಿಗೆ ಉತ್ತಮ ಆತ್ಮಸಾಕ್ಷಿಯೊಂದಿಗೆ ತೊಡಗಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಸಹಿ ಮಾಡಿದವರಲ್ಲಿ ನೊಬೆಲ್ ಪ್ರಶಸ್ತಿ, ಬೂಕರ್ ಪ್ರಶಸ್ತಿ, ಪುಲಿಟ್ಜಾರ್ ಪ್ರಶಸ್ತಿ ಮತ್ತು ರಾಷ್ಟ್ರೀಯ ಪುಸ್ತಕ ಪ್ರಶಸ್ತಿ ವಿಜೇತರು ಸೇರಿದ್ದಾರೆ.

ಟಾಪ್ ನ್ಯೂಸ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

ರಷ್ಯಾ-ಉಕ್ರೇನ್‌ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ

ರಷ್ಯಾ-ಉಕ್ರೇನ್‌ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

13

Uv Fusion: ಅಪ್ಪ ಅಂದರೆ ಅನಂತ ಪ್ರೀತಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.