Israel ದಾಳಿ ಇನ್ನಷ್ಟು ತೀವ್ರ; 43 ಸಾವಿರಕ್ಕೂ ಹೆಚ್ಚು ಬ*ಲಿ: ವಿಶ್ವಸಂಸ್ಥೆ ತೀವ್ರ ಕಳವಳ

ಇಸ್ರೇಲಿ ಸಂಸ್ಥೆಗಳ ವಿರುದ್ಧ ಸಾಂಸ್ಕೃತಿಕ ಬಹಿಷ್ಕಾರ ಆರಂಭ...

Team Udayavani, Oct 28, 2024, 8:19 PM IST

ISREL

ಟೆಲ್ ಅವೀವ್ : ಮಧ್ಯಪ್ರಾಚ್ಯದಲ್ಲಿ ಸಂಘರ್ಷ ದಿನದಿಂದ ದಿನಕ್ಕೆ ತೀವ್ರವಾಗುತ್ತಿದ್ದು, ಉತ್ತರ ಗಾಜಾದಲ್ಲಿ ಇಸ್ರೇಲ್‌ನ 24 ದಿನಗಳ ಮಿಲಿಟರಿ ಕಾರ್ಯಾಚರಣೆಯಲ್ಲಿ ಸೋಮವಾರದ ವರೆಗೆ (ಅ 28)1,000 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಆರೋಗ್ಯ ಅಧಿಕಾರಿಗಳ ಪ್ರಕಾರ ಮೃತರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು ಎಂದು ಹೇಳಲಾಗಿದೆ.

ಲೆಬನಾನ್‌ನ ಆರೋಗ್ಯ ಸಚಿವಾಲಯದ ಪ್ರಕಾರ ಇಸ್ರೇಲಿ ಜೆಟ್‌ಗಳು ಟೈರ್ ನಗರವ ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದು ಕನಿಷ್ಠ ಏಳು ಮಂದಿ ಸಾವನ್ನಪ್ಪಿ 17 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.ಇಸ್ರೇಲಿ ಪಡೆಗಳು ಗಾಜಾದಲ್ಲಿ ಕನಿಷ್ಠ 53 ಜನರನ್ನು ಮತ್ತು ಲೆಬನಾನ್‌ನಲ್ಲಿ 21 ಜನರನ್ನು ಭಾನುವಾರ ನಡೆಸಿದ ಭಾರೀ ದಾಳಿಯಲ್ಲಿ ಹತ್ಯೆಗೈದಿವೆ ಎಂದು ವರದಿಯಾಗಿದೆ.

ಕಳೆದ ವಾರ ದಕ್ಷಿಣ ಲೆಬನಾನ್‌ನಲ್ಲಿ ಮೂವರು ಪತ್ರಕರ್ತರ ಸಾವಿಗೆ ಕಾರಣವಾದ ಇಸ್ರೇಲಿ ದಾಳಿಯ ಬಗ್ಗೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಗೆ ದೂರು ಸಲ್ಲಿಸಿರುವುದಾಗಿ ಲೆಬನಾನ್ ಸೋಮವಾರ ಪ್ರಕಟಿಸಿದೆ.

ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್ ಅವರು ಉತ್ತರ ಗಾಜಾದಲ್ಲಿ ಸಂಭವಿಸುತ್ತಿರುವ ಸಾವು, ಗಾಯ ಮತ್ತು ವಿನಾಶದ ಭೀಕರತೆಯ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ.

ಗಾಜಾದಲ್ಲಿ, 2023 ಅಕ್ಟೋಬರ್ 7 ರಿಂದ ಇಸ್ರೇಲಿ ದಾಳಿಯಲ್ಲಿ ಕನಿಷ್ಠ 43,020 ಜನರು ಸಾವನ್ನಪ್ಪಿದ್ದಾರೆ ಮತ್ತು 101,110 ಜನರು ಗಾಯಗೊಂಡಿದ್ದಾರೆ. ಹಮಾಸ್-ನೇತೃತ್ವದ ದಾಳಿಯ ಸಮಯದಲ್ಲಿ ಇಸ್ರೇಲ್‌ನ ಅಂದಾಜು 1,139 ಜನರು ಕೊಲ್ಲಲ್ಪಟ್ಟರು ಮತ್ತು 200 ಕ್ಕೂ ಹೆಚ್ಚು ಜನರು ಒತ್ತೆಯಾಳಾಗಿದ್ದಾರೆ.

ಲೆಬನಾನ್‌ನಲ್ಲಿ, ಗಾಜಾದಲ್ಲಿ ಸಂಘರ್ಷ ಪ್ರಾರಂಭವಾದಾಗಿನಿಂದ ಇಸ್ರೇಲಿ ದಾಳಿಯಲ್ಲಿ 127 ಮಕ್ಕಳು ಸೇರಿದಂತೆ ಕನಿಷ್ಠ 2,574 ಜನರು ಸಾವನ್ನಪ್ಪಿದ್ದಾರೆ ಮತ್ತು 12,001 ಮಂದಿ ಗಾಯಗೊಂಡಿದ್ದಾರೆ.

ಲೆಬನಾನ್‌ನ ಹೆಜ್ಬುಲ್ಲಾ ಉಗ್ರ ಸಂಘಟನೆ ತನ್ನ ಡ್ರೋನ್ ಇಸ್ರೇಲ್ ನ ಯುಡಿಫತ್ ಮಿಲಿಟರಿ ಇಂಡಸ್ಟ್ರೀಸ್ ಕಂಪನಿಗೆ ತನ್ನ ಗುರಿಯನ್ನು ನಿಖರವಾಗಿ ಹೊಡೆದಿದೆ” ಎಂದು ಹೇಳಿದೆ.ಲೆಬನಾನ್‌ನ ವಾಝಾನಿ ಗ್ರಾಮದ ಪಶ್ಚಿಮದಲ್ಲಿರುವ ಅಲ್-ಒಮ್ರಾ ಪ್ರದೇಶದಲ್ಲಿ ಇಸ್ರೇಲಿ ಸೈನಿಕರನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ ಎಂದು ಉಗ್ರರ ಗುಂಪು ಹೇಳಿಕೊಂಡಿದೆ.

ಗಾಜಾದಲ್ಲಿ 100 ಕ್ಕೂ ಹೆಚ್ಚು ಹಮಾಸ್ ಉಗ್ರಗಾಮಿಗಳನ್ನು ಬಂಧಿಸಲಾಗಿದೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ. ಇಸ್ರೇಲ್‌ ದಾಳಿಗೆ ಪ್ರತಿಕ್ರಿಯಿಸಲು ನಾವು ಲಭ್ಯವಿರುವ ಎಲ್ಲಾ ಸಾಧನಗಳನ್ನು ಬಳಸುತ್ತೇವೆ ಎಂದು ಇರಾನ್ ಹೇಳಿಕೊಂಡಿದೆ.

ಇಸ್ರೇಲಿ ಸಂಸ್ಥೆಗಳ ವಿರುದ್ಧ ಸಾಂಸ್ಕೃತಿಕ ಬಹಿಷ್ಕಾರ ಆರಂಭ
1,100 ಕ್ಕೂ ಹೆಚ್ಚು ಲೇಖಕರು ಇಸ್ರೇಲಿ ಪ್ರಕಾಶಕರ ವಿರುದ್ಧ ಸಾಮೂಹಿಕ ಬಹಿಷ್ಕಾರವನ್ನು ಹಾಕಿದ್ದಾರೆ ಎಂದು ಗುಂಪುಗಳ ಒಕ್ಕೂಟವು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಇದು ಇಸ್ರೇಲಿ ಸಂಸ್ಥೆಗಳ ವಿರುದ್ಧದ ಅತಿದೊಡ್ಡ ಸಾಂಸ್ಕೃತಿಕ ಬಹಿಷ್ಕಾರವಾಗಿದೆ, “ಸಹಿ ಮಾಡಿದವರು ವರ್ಣಭೇದ ನೀತಿ ಮತ್ತು ಸ್ಥಳಾಂತರದೊಂದಿಗಿನ ಸಂಬಂಧವನ್ನು ಪ್ರಶ್ನಿಸದೆ ಇಸ್ರೇಲಿ ಸಂಸ್ಥೆಗಳೊಂದಿಗೆ ಉತ್ತಮ ಆತ್ಮಸಾಕ್ಷಿಯೊಂದಿಗೆ ತೊಡಗಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಸಹಿ ಮಾಡಿದವರಲ್ಲಿ ನೊಬೆಲ್ ಪ್ರಶಸ್ತಿ, ಬೂಕರ್ ಪ್ರಶಸ್ತಿ, ಪುಲಿಟ್ಜಾರ್ ಪ್ರಶಸ್ತಿ ಮತ್ತು ರಾಷ್ಟ್ರೀಯ ಪುಸ್ತಕ ಪ್ರಶಸ್ತಿ ವಿಜೇತರು ಸೇರಿದ್ದಾರೆ.

ಟಾಪ್ ನ್ಯೂಸ್

Puturu-Bike

Putturu: ಮುಕ್ರಂಪಾಡಿ ಸಮೀಪ ಅಪಘಾತ; ಓರ್ವ ಗಂಭೀರ

iskon-Thirupathi

Hoax Call: ತಿರುಪತಿಯಲ್ಲಿ ಹೋಟೆಲ್‌ಗಳ ಬಳಿಕ ಈಗ ಇಸ್ಕಾನ್‌ ದೇಗುಲಕ್ಕೂ ಬೆದರಿಕೆ ಸಂದೇಶ!

BYV-yathnal

Waqf Property: ಶಾಸಕ ಯತ್ನಾಳ್‌ ಆಕ್ರೋಶ ಬೆನ್ನಲ್ಲೇ ಬಿಜೆಪಿ ‘ವಕ್ಫ್ ತಂಡ’ ಪುನಾರಚನೆ

1-snehamayi

MUDA case;ದೂರಿಗೆ ಪೂರಕವಾಗಿ ಇ.ಡಿ.ಗೆ ‘ವಿಡಿಯೋ ಸಾಕ್ಷ್ಯ’ ನೀಡಿದ ಸ್ನೇಹಮಯಿ ಕೃಷ್ಣ

Beluru

Sagara: ಶರಾವತಿ ಮುಳುಗಡೆ ಸಂತ್ರಸ್ತರಿಗೆ ಸರ್ಕಾರದಿಂದ ಶೀಘ್ರವೇ ಪರಿಹಾರ: ಶಾಸಕ ಬೇಳೂರು

4

Panambur: ಮಾದಕ ವಸ್ತು ಸಾಗಾಟ-ಮಾರಾಟ ಪ್ರಕರಣ; ವಿದೇಶಿ ಪ್ರಜೆ ಸೇರಿ 6 ಆರೋಪಿಗಳ ಸೆರೆ

ISREL

Israel ದಾಳಿ ಇನ್ನಷ್ಟು ತೀವ್ರ; 43 ಸಾವಿರಕ್ಕೂ ಹೆಚ್ಚು ಬ*ಲಿ: ವಿಶ್ವಸಂಸ್ಥೆ ತೀವ್ರ ಕಳವಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-NAAS

NASA; ಮಂಗಳನ ಮೇಲೆ ಹಸುರು ಪ್ರದೇಶ: ಜೀವಕಳೆ ಶಂಕೆ

1-iran-1

Israel ಸರ್ಜಿಕಲ್‌ ಸ್ಟ್ರೈಕ್‌: ಇರಾನ್‌ ಗೌಪ್ಯ ನೆಲೆ ಧ್ವಂಸ!

ISREL-3

War in 2025: ಬಾಬಾ ವಂಗಾ, ನಾಸ್ಟ್ರಾಡಾಮಸ್‌ ಒಂದೇ ಥರದ ಭವಿಷ್ಯ

JioHotstar domain: ಜಿಯೋ ಹಾಟ್‌ಸ್ಟಾರ್‌ ಡೊಮೈನ್‌ ನಮ್ಮದು: ದುಬೈ ಮಕ್ಕಳ ವಾದ!

JioHotstar domain: ಜಿಯೋ ಹಾಟ್‌ಸ್ಟಾರ್‌ ಡೊಮೈನ್‌ ನಮ್ಮದು: ದುಬೈ ಮಕ್ಕಳ ವಾದ!

10

ಲಾಡೆನ್‌ ಅಡಗಿದ್ದ ಪಾಕ್‌ನ ಜಾಗದಲ್ಲೇ “ಉಗ್ರ’ ತರಬೇತಿ!

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Puturu-Bike

Putturu: ಮುಕ್ರಂಪಾಡಿ ಸಮೀಪ ಅಪಘಾತ; ಓರ್ವ ಗಂಭೀರ

4

Belthangady: ಮನೆಯಿಂದ ನಗದು, ಚಿನ್ನಾಭರಣ ಕಳವು

3

Mangaluru: ಅಪಘಾತದ ಬಳಿಕ ಕಾರು ಚಾಲಕನಿಗೆ ಲೋಹದ ಪಂಚ್‌ ನಿಂದ ಹಲ್ಲೆ, ಪೆಪ್ಪರ್‌ ಸ್ಪ್ರೇ!

crime

Padubidri: ಪಾದಯಾತ್ರಿಗಳಿಗೆ ಮೋಟಾರು ಬೈಕ್‌ ಢಿಕ್ಕಿ; ಇಬ್ಬರಿಗೆ ಗಾಯ

iskon-Thirupathi

Hoax Call: ತಿರುಪತಿಯಲ್ಲಿ ಹೋಟೆಲ್‌ಗಳ ಬಳಿಕ ಈಗ ಇಸ್ಕಾನ್‌ ದೇಗುಲಕ್ಕೂ ಬೆದರಿಕೆ ಸಂದೇಶ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.