Israel-Hamas war ಗಾಜಾದ ಮತ್ತೊಂದು ಆಸ್ಪತ್ರೆಗೆ ಇಸ್ರೇಲ್‌ ಲಗ್ಗೆ

ಆಸ್ಪತ್ರೆಯ ಆವರಣದಲ್ಲಿಯೇ ಬಿರುಸಿನ ಕಾಳಗ; ಕ್ಷಿಪಣಿ ಅಪ್ಪಳಿಸಿ ಕನಿಷ್ಠ 12 ಮಂದಿ ಸಾವು

Team Udayavani, Nov 21, 2023, 12:58 AM IST

Israel-Hamas war ಗಾಜಾದ ಮತ್ತೊಂದು ಆಸ್ಪತ್ರೆಗೆ ಇಸ್ರೇಲ್‌ ಲಗ್ಗೆ

ಖಾನ್‌ ಯೂನಿಸ್‌/ಟೆಲ್‌ ಅವೀವ್‌: ಉತ್ತರ ಗಾಜಾದ ಇಂಡೋನೇಷ್ಯಾ ಆಸ್ಪತ್ರೆ ಬಳಿ ಸೋಮವಾರ ಹಮಾಸ್‌ ಉಗ್ರರು ಮತ್ತು ಇಸ್ರೇಲ್‌ ನಡುವೆ ಕದನ ಸ್ಫೋಟಗೊಂಡಿದೆ. ಆಸ್ಪತ್ರೆಯ ಎರಡನೇ ಮಹಡಿಗೆ ಕ್ಷಿಪಣಿ ಅಪ್ಪಳಿ ಕನಿಷ್ಠ 12 ಮಂದಿ ಅಸುನೀಗಿದ್ದಾರೆ. ಈ ಘಟನೆಯ ಬಳಿಕ ಅಲ್ಲಿ ಕಂಡು ಕೇಳರಿಯದ ರೀತಿಯಲ್ಲಿ ಯುದ್ಧ ಆರಂಭವಾಗಿದೆ.

ಗಾಜಾ ಪಟ್ಟಿಯ ಅತ್ಯಂತ ದೊಡ್ಡ ಆಸ್ಪತ್ರೆ ಅಲ್‌-ಶಿಫಾ ಆಸ್ಪತ್ರೆಗೆ ಇಸ್ರೇಲ್‌ ಸೇನೆ ನುಗ್ಗಿದ ಬಳಿಕ ಹೊಸ ಬೆಳವಣಿಗೆ ನಡೆದಿದೆ. ಈ ಆತಂಕಕಾರಿ ಬೆಳವಣಿಗೆಯ ನಡುವೆ ಅಲ್‌-ಶಿಫಾ ಆಸ್ಪತ್ರೆಯಲ್ಲಿ ಇದ್ದ 31ರ ಪೈಕಿ 28 ನವಜಾತ ಶಿಶುಗಳನ್ನು ಈಜಿಪ್ಟ್ ಗೆ ಸುರಕ್ಷಿತವಾಗಿ ತಂದು ಚಿಕಿತ್ಸೆ ನೀಡಲಾಗುತ್ತಿದೆ. ಅದಕ್ಕೆ ಪ್ಯಾಲೆಸ್ತೀನ್‌ ರೆಡ್‌ ಕ್ರಾಸ್‌ ಸಂಘಟನೆ ನೆರವು ನೀಡಿದೆ. ಇದಾದ ಬಳಿಕ ಉತ್ತರ ಗಾಜಾದ ಇಂಡೋನೇಷ್ಯಾ ಆಸ್ಪತ್ರೆಯಲ್ಲಿ ಕಾಳಗ ಸ್ಫೋಟಗೊಂಡಿದೆ.

ಸುರಂಗ ನಾಶ
ಉತ್ತರ ಗಾಜಾದ ಬೆಟ್‌ ಹೆನೌನ್‌ ಎಂಬಲ್ಲಿ ಹಮಾಸ್‌ ಹೊಂದಿರುವ ರಹಸ್ಯ ಸುರಂಗ ಜಾಲಗಳ ಪೈಕಿ ಒಂದನ್ನು ನಾಶ ಮಾಡಿರುವುದಾಗಿ ಇಸ್ರೇಲ್‌ ಘೋಷಿಸಿದೆ.

ಮೊದಲ ತಾತ್ಕಾಲಿಕ ಆಸ್ಪತ್ರೆ
ಅ. 7ರಂದು ಹಮಾಸ್‌ ಉಗ್ರರು ದಾಳಿ ನಡೆಸಿದಕ್ಕೆ ಪ್ರತೀಕಾರವಾಗಿ ಇಸ್ರೇಲ್‌ ಸೇನೆ ದಾಳಿ ನಡೆಸಿದ ಬಳಿಕ ಇದೇ ಮೊದಲ ಬಾರಿಗೆ ಗಾಜಾದಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ನೀಡಲು ತಾತ್ಕಾಲಿಕ ಆಸ್ಪತ್ರೆ ಸ್ಥಾಪಿಸಲಾಗುತ್ತಿದೆ. ಅದಕ್ಕೆ ಜೋರ್ಡಾನ್‌ ನೆರವು ನೀಡಿದೆ. ಹೆಚ್ಚಿನ ಪ್ರಮಾಣದಲ್ಲಿ ದಾಳಿಗೆ ಒಳಗಾಗಿರುವ ಖಾನ್‌ ಯೂನಿಸ್‌ ಎಂಬ ಸ್ಥಳದಲ್ಲಿ ಅದನ್ನು ಸ್ಥಾಪಿಸಲಾಗುತ್ತಿದೆ.

ಅಲ್‌-ಶಿಫಾ ಆಸ್ಪತ್ರೆಯಲ್ಲೇ ಒತ್ತೆಯಾಳುಗಳು
ಉಗ್ರ ಸಂಘಟನೆ ಹಮಾಸ್‌ ಗಾಜಾದ ಅತಿದೊಡ್ಡ ಆಸ್ಪತ್ರೆ ಅಲ್‌-ಶಿಫಾದ ಅಡಿಯಲ್ಲಿಯೇ 240ಕ್ಕೂ ಅಧಿಕ ವಿದೇಶಿ ಪ್ರಜೆಗಳನ್ನು ಒತ್ತೆಯಾಳಾಗಿ ಇರಿಸಿ ಕೊಂಡಿದೆ ಎಂಬ ಪ್ರಬಲ ಶಂಕೆ ವ್ಯಕ್ತವಾಗಿದೆ.

ಜತೆಗೆ 55 ಸುರಂಗಗಳನ್ನು ಉಗ್ರರು ನಿರ್ಮಿಸಿದ್ದಾರೆ ಎಂದೂ ಇಸ್ರೇಲ್‌ ಹೇಳಿಕೊಂಡಿದೆ. ಈ ಸಂಬಂಧ ವೀಡಿಯೋ ಗಳನ್ನು ಇಸ್ರೇಲ್‌ ಸೇನೆ ಬಿಡುಗಡೆ ಮಾಡಿದೆ.

ಈ ಬಗ್ಗೆ ಟ್ವೀಟ್‌ ಮಾಡಿದ ಇಸ್ರೇಲ್‌ ಸೇನೆ, ಅಲ್‌-ಶಿಫಾ ಆಸ್ಪತ್ರೆಯಲ್ಲಿಯೇ ಒತ್ತೆಯಾಳುಗಳನ್ನು ಇರಿಸಲಾಗಿದೆ ಎಂಬ ಅಂಶ ಬಯಲಾಗಿದೆ. ಆಸ್ಪತ್ರೆಯನ್ನು ಉಗ್ರ ಸಂಘಟನೆ ತನ್ನ ಮೂಲ ಸೌಕರ್ಯ ವ್ಯವಸ್ಥೆ ಪಡೆದುಕೊಳ್ಳುವ ಸ್ಥಳವನ್ನಾಗಿ ಮಾರ್ಪಾಡು ಮಾಡಿಕೊಂಡಿದೆ ಎಂದಿದೆ. ಆದರೆ ಹಮಾಸ್‌ ಈ ಆರೋಪವನ್ನು ತಿರಸ್ಕರಿಸಿದೆ.

ಇಸ್ರೇಲ್‌ ಸಂಪರ್ಕದ ಹಡಗುಗಳೇ ಗುರಿ: ಹೌತಿ ಎಚ್ಚರಿಕೆ ಯೆಮೆನ್‌ನ ಹೌತಿ ಬಂಡುಕೋರರು ರವಿವಾರ ವಶಪಡಿಸಿಕೊಂಡಿರುವ, ಭಾರತದತ್ತ ಬರು ತ್ತಿದ್ದ ಸರಕು ಸಾಗಣೆ ಹಡಗಿನಲ್ಲಿ 25 ಮಂದಿ ಸಿಬಂದಿ ಇರುವುದು ದೃಢಪಟ್ಟಿದೆ. ಮುಂದಿನ ದಿನಗಳಲ್ಲಿ ಇಸ್ರೇಲ್‌ ಜತೆಗೆ ಮಿತ್ರತ್ವ ಹೊಂದಿರುವ ದೇಶಗಳ ಮತ್ತು ಇಸ್ರೇಲಿ ಮಾಲಕತ್ವ ಹೊಂದಿರುವ ಹಡುಗಳನ್ನೇ ಗುರಿ ಮಾಡಿ ದಾಳಿ ಮಾಡು ವುದಾಗಿ ಬಂಡುಕೋರರು ಹೇಳಿದ್ದಾರೆ.

ಟಾಪ್ ನ್ಯೂಸ್

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Ajekar-mahajar

Ajekar Case Follow Up: ನಿಧಾನಗತಿಯ ಸಾವಿಗೆ ಎರಡು ವಿಷದ ಬಾಟಲಿ ಖರೀದಿಸಿದ್ದ ದಿಲೀಪ್‌

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-NAAS

NASA; ಮಂಗಳನ ಮೇಲೆ ಹಸುರು ಪ್ರದೇಶ: ಜೀವಕಳೆ ಶಂಕೆ

1-iran-1

Israel ಸರ್ಜಿಕಲ್‌ ಸ್ಟ್ರೈಕ್‌: ಇರಾನ್‌ ಗೌಪ್ಯ ನೆಲೆ ಧ್ವಂಸ!

ISREL-3

War in 2025: ಬಾಬಾ ವಂಗಾ, ನಾಸ್ಟ್ರಾಡಾಮಸ್‌ ಒಂದೇ ಥರದ ಭವಿಷ್ಯ

JioHotstar domain: ಜಿಯೋ ಹಾಟ್‌ಸ್ಟಾರ್‌ ಡೊಮೈನ್‌ ನಮ್ಮದು: ದುಬೈ ಮಕ್ಕಳ ವಾದ!

JioHotstar domain: ಜಿಯೋ ಹಾಟ್‌ಸ್ಟಾರ್‌ ಡೊಮೈನ್‌ ನಮ್ಮದು: ದುಬೈ ಮಕ್ಕಳ ವಾದ!

10

ಲಾಡೆನ್‌ ಅಡಗಿದ್ದ ಪಾಕ್‌ನ ಜಾಗದಲ್ಲೇ “ಉಗ್ರ’ ತರಬೇತಿ!

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.