![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 7, 2022, 10:10 PM IST
ಗಾಜಾ ಸಿಟಿ: ಗಾಜಾ ಪಟ್ಟಿಯಲ್ಲಿ ಇಸ್ರೇಲ್ ಸೇನೆ ನಡೆಸಿದ ಕಾರ್ಯಾಚರಣೆಯಲ್ಲಿ ಇರಾನ್ ಬೆಂಬಲಿತ ಪ್ಯಾಲೆಸ್ತೀನಿಯನ್ ಇಸ್ಲಾಮಿಕ್ ಜೆಹಾದ್ ಸಂಘಟನೆಯ ಹಿರಿಯ ಕಮಾಂಡರ್ ಖಾಲೀದ್ ಮನ್ಸೋರ್ನನ್ನು ಕೊಲ್ಲಲಾಗಿದೆ. ಇದರಿಂದಾಗಿ ಗಾಜಾ ಪಟ್ಟಿಯಲ್ಲಿ ಮತ್ತೊಮ್ಮೆ ಹಿಂಸಾತ್ಮಕ ಸಂಘರ್ಷಗಳು ಉಂಟಾಗಲಿದೆ ಎಂದು ಭೀತಿಪಡಲಾಗಿದೆ.
ಶುಕ್ರವಾರ ಪ್ಯಾಲೆಸ್ತೀನ್ನ ರಫಾದ ಅಪಾರ್ಟ್ಮೆಂಟ್ನಲ್ಲಿ ಖಾಲಿದ್ ಇದ್ದ ಬಗ್ಗೆ ಇಸ್ರೇಲ್ ಸೇನೆಗೆ ಖಚಿತ ಸುಳಿವು ಸಿಕ್ಕಿದ್ದ ಹಿನ್ನೆಲೆಯಲ್ಲಿ ಕ್ಷಿಪಣಿ ಹಾರಿಸಿ ಕೊಲ್ಲಲಾಯಿತು. ಅದಕ್ಕೆ ಪ್ರತೀಕಾರವಾಗಿ ಉಗ್ರ ಸಂಘಟನೆ ಇಸ್ರೇಲ್ನತ್ತ ಹಲವಾರು ಕ್ಷಿಪಣಿಗಳನ್ನು ಹಾರಿ ಬಿಟ್ಟಿದೆ. ಪ್ಯಾಲೆಸ್ತೀನ್ ಸರ್ಕಾರ ನೀಡಿದ ಮಾಹಿತಿ ಪ್ರಕಾರ ಆರು ಮಂದಿ, ನಾಲ್ವರು ಮಹಿಳೆಯರು ಸೇರಿದಂತೆ 31 ಮಂದಿ ಅಸುನೀಗಿದ್ದರು. 250ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ಇಸ್ರೇಲ್ ಯುದ್ಧಾಪರಾಧ ನಡೆಸಿದೆ ಎಂದು ಯು.ಕೆ.ಯಲ್ಲಿ ಪ್ಯಾಲೆಸ್ತೀನ್ ರಾಯಭಾರಿ ಹುಸಮ್ ಝಮ್ಲೊಟ್ ಆರೋಪಿಸಿದ್ದಾರೆ. ಅಮೆರಿಕ, ಯು.ಕೆ. ಸರ್ಕಾರಗಳು ಇಸ್ರೇಲ್ ನೀತಿಯ ಪರವಾಗಿಯೇ ವಾದಿಸುತ್ತಿವೆ ಎಂದು ದೂರಿದ್ದಾರೆ.
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
ರಷ್ಯಾ-ಉಕ್ರೇನ್ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.