Gaza ಇಸ್ರೇಲ್ ದಾಳಿ ವಿಸ್ತರಣೆ : ರಾತೋರಾತ್ರಿ 200 ಉಗ್ರನೆಲೆಗಳ ನಾಶ
ಇಸ್ರೇಲ್ ಪಡೆಗಳ ಈ ಹೇಳಿಕೆ ದಕ್ಷಿಣ ಗಾಜಾದ ನಿವಾಸಿಗಳಲ್ಲಿ ಆತಂಕ ಹೆಚ್ಚಿದೆ.
Team Udayavani, Dec 5, 2023, 6:00 AM IST
ಜೆರುಸಲೇಂ: ಹಮಾಸ್- ಇಸ್ರೇಲ್ ನಡುವಿನ ಕದನವಿರಾಮ ಮುಗಿಯುತ್ತಿದ್ದಂತೆ ಹಮಾಸ್ ಉಗ್ರರ ನೆಲೆಗಳನ್ನು ಧ್ವಂಸಗೊಳಿಸುವ ಇಸ್ರೇಲ್ ಕಾರ್ಯಾಚರಣೆ ಬಿರುಸಾಗಿದ್ದು ಒಂದೇ ರಾತ್ರಿಯಲ್ಲಿ 200 ಉಗ್ರ ನೆಲೆಗಳನ್ನು ಧ್ವಂಸಗೊಳಿಸಿದೆ. ಇದರೊಂದಿಗೆ ಉತ್ತರ ಗಾಜಾದಲ್ಲಿನ ತನ್ನ ಕಾರ್ಯಾಚರಣೆ ಬಹುತೇಕ ಪೂರ್ಣಗೊಂಡಿದೆ ಎಂಬುದಾಗಿಯೂ ತಿಳಿಸಿದೆ.
ಇಸ್ರೇಲ್ ಸೇನೆ ನೀಡಿರುವ ಮಾಹಿತಿ ಪ್ರಕಾರ, ಹಮಾಸ್ ಉಗ್ರರ ಮೂಲಸೌಕರ್ಯಗಳಿರುವ ಪ್ರದೇಶಗಳನ್ನು ಗುರಿಯಾಗಿಸಿ ದಾಳಿ ನಡೆಸಲಾಗುತ್ತಿದೆ. ಉಗ್ರರು ಶಾಲೆಗಳಲ್ಲಿ ಸುರಂಗಗಳನ್ನು ನಿರ್ಮಿಸಿ ಅವುಗಳ ಮೂಲಕ ಉಗ್ರ ಚಟುವಟಿಕೆ ನಡೆಸುತ್ತಿದ್ದರು ಈ ಹಿನ್ನೆಲೆಯಲ್ಲಿ ಶಾಲೆಗಳನ್ನೂ ಪುಡಿಗಟ್ಟಲಾಗಿದ್ದು, ಬಹುತೇಕ ಕಾರ್ಯಾಚರಣೆ ಪೂರ್ಣಗೊಂಡಿದೆ. ಮುಂದೆ ದಕ್ಷಿಣ ಭಾಗದಲ್ಲಿರುವ ಹಮಾಸ್ ಸೌಕರ್ಯಗಳನ್ನು ಗುರಿಯಾಗಿಸಲು ಯೋಜಿಸಿರುವುದಾಗಿ ಹೇಳಿದೆ. ಇಸ್ರೇಲ್ ಪಡೆಗಳ ಈ ಹೇಳಿಕೆ ದಕ್ಷಿಣ ಗಾಜಾದ ನಿವಾಸಿಗಳಲ್ಲಿ ಆತಂಕ ಹೆಚ್ಚಿದೆ.
ಏತನ್ಮಧ್ಯೆ ಇತ್ತೀಚೆಗಷ್ಟೇ ನೂರಾರು ಮಂದಿ ಪ್ಯಾಲೆಸ್ತೀನಿಯರು ಆಶ್ರಯ ಪಡೆದಿರುವ ದಕ್ಷಿಣದ ಪಟ್ಟಣ ಖಾನ್ ಯೂನಿಸ್ನಿಂದ ಎಲ್ಲರೂ ಸಾಮೂಹಿಕವಾಗಿ ಸ್ಥಳಾಂತರಗೊಳ್ಳಿ ಎಂದು ಇಸ್ರೇಲ್ ಪಡೆಗಳು ಕರೆ ನೀಡಿವೆ. ಗಾಜಾದ ವಿವಿಧ ಭಾಗಗಳಲ್ಲಿ ಕಾರ್ಯಾಚರಣೆ ವಿಸ್ತರಿಸುತ್ತಿರುವ ಹಿನ್ನೆಲೆಯಲ್ಲಿ ನಾಗರಿಕರಿಗೆ ತೊಂದರೆ ಆಗಬಾರದೆಂಬ ಉದ್ದೇಶಕ್ಕೆ ಈ ಕರೆ ನೀಡಿರುವುದಾಗಿ ಹೇಳಿದೆ. ಆದರೆ ನೆಲೆ ಕಳೆದುಕೊಂಡಿರುವ ಪ್ಯಾಲೆಸ್ತೀನಿಯರಿಗೆ ಎಲ್ಲಿಗೆ ಹೋಗುವುದು ಎಂದು ದಿಕ್ಕು ತೋಚದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..
Hashem Safieddine: ಹಿಜ್ಬುಲ್ಲಾ ಉತ್ತರಾಧಿಕಾರಿಯನ್ನು ಹೊಡೆದುರುಳಿಸಿತಾ ಇಸ್ರೇಲ್?
Hindu ಸಂತರು ಗೋ ಮಾಂಸ ತಿನ್ನುತ್ತಾರೆ: ಪಾಕಿಸ್ಥಾನದಲ್ಲಿ ಝಾಕಿರ್ ನಾಯ್ಕ
Strikes again; ಲೆಬನಾನ್,ಗಾಜಾ ಮೇಲೆ ಮತ್ತೆ ಮುಗಿಬಿದ್ದ ಇಸ್ರೇಲ್:40ಕ್ಕೂ ಹೆಚ್ಚು ಸಾ*ವು
Israel ವೈಮಾನಿಕ ದಾಳಿಗೆ ಗಾಜಾದ ಹಮಾಸ್ ಮುಖ್ಯಸ್ಥ ಮುಶ್ತಾನಾ ಸೇರಿ ಮೂವರು ಸಾವು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ
IFFI: ಗೋವಾದಲ್ಲಿ 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನ.20ರಿಂದ ಆರಂಭ
PM: ಕಾಂಗ್ರೆಸ್ ಡ್ರಗ್ಸ್ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.