ಅಮೆರಿಕದಲ್ಲಿ ಉಳಿಯಲು ಐಟಿ ವೃತ್ತಿಪರರ ಪರದಾಟ

2 ಲಕ್ಷ ಭಾರತೀಯ ಮೂಲದ ಉದ್ಯೋಗಿಗಳು ವಜಾ!

Team Udayavani, Jan 24, 2023, 6:50 AM IST

ಅಮೆರಿಕದಲ್ಲಿ ಉಳಿಯಲು ಐಟಿ ವೃತ್ತಿಪರರ ಪರದಾಟ

ವಾಷಿಂಗ್ಟನ್‌: ಗೂಗಲ್‌, ಮೈಕ್ರೋಸಾಫ್ಟ್, ಅಮೆಜಾನ್‌ ಸೇರಿದಂತೆ ಸಾಲು- ಸಾಲು ಸಂಸ್ಥೆಗಳು ಉದ್ಯೋಗ ಕಡಿತಗೊಳಿಸಿರುವ ಹಿನ್ನೆಲೆಯಲ್ಲಿ ಅಮೆರಿಕದಲ್ಲಿರುವ ಭಾರತೀಯ ಐಟಿ ವೃತ್ತಿಪರರು ನಿರುದ್ಯೋಗಿಗಳಾಗಿ ಪರದಾಡುವಂತಾಗಿದೆ. ಅಲ್ಲದೆ ಉದ್ಯೋಗ ನಿಮಿತ್ತ ಪಡೆದಿರುವ ವೀಸಾ ಅವಧಿ ಮುಗಿಯುವ ಒಳಗೆ ಹೊಸ ಉದ್ಯೋಗ ಹುಡಕಲು ಹೆಣಗಾಡುತ್ತಿದ್ದಾರೆ.

ವಾಷಿಂಗ್ಟನ್‌ ಪೋಸ್ಟ್‌ ವರದಿಗಳ ಪ್ರಕಾರ 2 ಲಕ್ಷ ಭಾರತೀಯ ಐಟಿ ವೃತ್ತಿಪರರು ಕಳೆದ ವರ್ಷದ ನವೆಂಬರ್‌ನಿಂದ ನಿರುದ್ಯೋಗಿಗಳಾಗಿದ್ದಾರೆ. ಅವರ ಪೈಕಿ ಶೇ. 30ರಿಂದ 40ರಷ್ಟು ಮಂದಿ ಅಮೆರಿಕದ ಉದ್ಯೋಗ ವೀಸಾ ಎಚ್‌-1ಬಿ ಹಾಗೂ ಎಲ್‌1 ವೀಸಾ ಹೊಂದಿದ್ದಾರೆ.

ಎಚ್‌1-ಬಿ ವಲಸೆ ರಹಿತ ವೀಸಾ ಆಗಿದ್ದು, ಅಮೆರಿಕದ ಸಂಸ್ಥೆಗಳಿಗೆ ಅಗತ್ಯವಿರುವ ವಿದೇಶಗಳಲ್ಲಿನ ವೃತ್ತಿಪರರನ್ನು ನೇಮಿಸಿಕೊಳ್ಳಲು ಅನುವು ಮಾಡಿಕೊಟ್ಟರೆ, ಎಲ್‌1 ವೀಸಾ ಅಮೆರಿಕದ ಸಂಸ್ಥೆಗಳಲ್ಲಿ ವ್ಯವಸ್ಥಾಪಕ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುವಂಥವರಿಗೆ ನೀಡುವುದಾಗಿದೆ.

ಈ ವೀಸಾಗಳ ಅನ್ವಯ ಅಮೆರಿಕದಲ್ಲಿರುವ ವೃತ್ತಿಪರರಿಗೆ ಅವರು ಉದ್ಯೋಗದಲ್ಲಿ ಇದ್ದರಷ್ಟೇ ದೇಶದಲ್ಲಿ ಉಳಿಯುವ ಅವಕಾಶವಿದೆ. ಉದ್ಯೋಗ ನಷ್ಟವಾದರೆ 60 ದಿನಗಳ ಒಳಗಾಗಿ ಆ ಉದ್ಯೋಗಿ ಎಚ್‌1-ಬಿ ವೀಸಾ ಪ್ರಾಯೋಜಿಸುವಂಥ ಮತ್ತೊಂದು ಉದ್ಯೋಗವನ್ನು ಹುಡುಕಿಕೊಳ್ಳಬೇಕು. ಇಲ್ಲವಾದಲ್ಲಿ ಅವಧಿ ಮುಗಿದ 10 ದಿನದ ಒಳಗೆ ದೇಶ ತೊರೆಯಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಭಾರತೀಯ ವೃತ್ತಿಪರರು ಕಂಗಾಲಾಗಿದ್ದು, ಸೀಮಿತ ಅವಧಿಯಲ್ಲಿ ಉದ್ಯೋಗ ಹುಡುಕಲು ಹೆಣಗಾಡುತ್ತಿದ್ದಾರೆ ಎನ್ನಲಾಗಿದೆ.

ಜಾಲತಾಣದಲ್ಲಿ ಗೋಳಾಟ
800 ಭಾರತೀಯ ಐಟಿ ವೃತ್ತಿಪರರು ವಾಟ್ಸ್‌ಆ್ಯಪ್‌ ಗುಂಪೊಂದನ್ನು ರಚಿಸಿಕೊಂಡಿದ್ದು, ಹಲವು ಸಂಸ್ಥೆಗಳಿಗೆ ಅರ್ಜಿ ಸಲ್ಲಿಸುತ್ತಿದ್ದಾರೆ. ಉದ್ಯೋಗ ಕಡಿತ ನಿರ್ಧಾರದಿಂದ ತೀವ್ರ ಸಮಸ್ಯೆ ಎದುರಾಗಿದೆ ಎಂದು ಅಲವತ್ತುಕೊಂಡಿದ್ದಾರೆ.

ಕೆಲಸ ಸಿಗುವುದು ಕಷ್ಟ?
ಸದ್ಯಕ್ಕೆ ಅಮೆರಿಕದಲ್ಲಿ ಬಹುತೇಕ ಕಂಪೆನಿಗಳು ಕೆಲಸದಿಂದ ತೆಗೆಯುತ್ತಿವೆ. ಯಾವುದೇ ಕಂಪೆನಿಗಳಲ್ಲೂ ಹೊಸ ಉದ್ಯೋಗಾವಕಾಶ ಇಲ್ಲ. ಹೀಗಾಗಿ 60 ದಿನಗಳಲ್ಲಿ ಉದ್ಯೋಗ ಹುಡುಕಿಕೊಳ್ಳುವುದು ಬಹುತೇಕ ಕಷ್ಟ. ಅನಿವಾರ್ಯವಾಗಿ ಭಾರತಕ್ಕೆ ವಾಪಸ್‌ ಬರುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಉದ್ಯೋಗಿಯೊಬ್ಬರು ಹೇಳಿಕೊಂಡಿದ್ದಾರೆ.

ಮನೆ ಮಠ ಮಾರಾಟ
ಕೆಲಸ ಕಳೆದುಕೊಂಡಿರುವ ಬಹುತೇಕ ಭಾರತೀಯರು ತೀರಾ ಸಂಕಷ್ಟದಲ್ಲಿದ್ದು, ಇದುವರೆಗೆ ಅಮೆರಿಕದಲ್ಲಿ ಮಾಡಿಕೊಂಡಿರುವಂಥ ಆಸ್ತಿಪಾಸ್ತಿ ಮಾರಾಟ ಮಾಡುವ ಸ್ಥಿತಿ ಎದುರಾಗಿದೆ. ಮಕ್ಕಳ ಶಿಕ್ಷಣ, ಸಂಸಾರ ನಿರ್ವಹಣೆಯೂ ಸವಾಲಾಗಿದೆ. ಈ ನಡುವೆ ಗ್ಲೋಬಲ್‌ ಇಂಡಿಯನ್‌ ಟೆಕ್ನಾಲಜಿ ಪ್ರೊಫೆಶನಲ್ಸ್‌ ಅಸೋಸಿಯೇಶನ್ಸ್‌, ಫೌಂಡೇಶನ್‌ ಫಾರ್‌ ಇಂಡಿಯಾ ಆ್ಯಂಡ್‌ ಇಂಡಿಯನ್‌ ಡಯಾನ್ಪೋರಾ ಸ್ಟಡೀಸ್‌ಗಳು ಕೆಲಸ ಕಳೆದುಕೊಂಡಿರುವವರ ನೆರವಿಗೆ ಧಾವಿಸಿವೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

ರಷ್ಯಾ-ಉಕ್ರೇನ್‌ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ

ರಷ್ಯಾ-ಉಕ್ರೇನ್‌ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.