US Presidential Election: ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿಯಾಗಿ ಕಮಲಾ ಹ್ಯಾರಿಸ್ ಆಯ್ಕೆ
Team Udayavani, Aug 3, 2024, 9:55 AM IST
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿಯಾಗಿ ಉಪಾಧ್ಯಕ್ಷೆ ಭಾರತ ಮೂಲದ ಕಮಲಾ ಹ್ಯಾರಿಸ್ ಹೆಸರು ಅಂತಿಮವಾಗಿ ಆಯ್ಕೆಯಾಗಿದೆ.
ಅಮೆರಿಕ ಅಧ್ಯಕ್ಷ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸುವುದಕ್ಕೆ ಅಗತ್ಯವಿರುವಷ್ಟು ಡೆಮಾಕ್ರಟಿಕ್ ಪಕ್ಷದ ಪ್ರತಿನಿಧಿಗಳ ಮತಗಳನ್ನು ಪಡೆಯುವಲ್ಲಿ ಕಮಲಾ ಹ್ಯಾರಿಸ್ ಅವರು ಯಶಸ್ವಿಯಾಗಿದ್ದಾರೆ ಎಂದು ಡೆಮಾಕ್ರಟಿಕ್ ರಾಷ್ಟ್ರೀಯ ಸಮಿತಿ ಅಧ್ಯಕ್ಷ ಜೇಮ್ ಹ್ಯಾರಿಸನ್ ಶುಕ್ರವಾರ ಹೇಳಿದ್ದಾರೆ.
ಈ ಕುರಿತು ಹೇಳಿಕೆ ನೀಡಿದ ಕಮಲಾ ಹ್ಯಾರಿಸ್ ಅಮೆರಿಕ ಅಧ್ಯಕ್ಷ ಸ್ಥಾನಕ್ಕೆ ನನ್ನ ಹೆಸರು ಅಂತಿಮಗೊಂಡಿರುವುದು ಗೌರವ ತಂದಿದೆ, ವರ್ಚುವಲ್ ನಾಮನಿರ್ದೇಶನ ಪ್ರಕ್ರಿಯೆಯ ಅವಧಿ ಮುಗಿದ ಬಳಿಕ ಅಂದರೆ ಮುಂದಿನ ವಾರ ನಾಮನಿರ್ದೇಶನವನ್ನು ನಾನು ಅಧಿಕೃತವಾಗಿ ಸ್ವೀಕರಿಸುತ್ತೇನೆ ಎಂದು ಹೇಳಿಕೊಂಡಿದ್ದಾರೆ.
ಈ ಹಿಂದೆ ಅಮೆರಿಕ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದ ಜೋ ಬೈಡೆನ್ ತನ್ನ ಕೊನೆಯ ಕ್ಷಣದಲ್ಲಿ ಚುನಾವಣಾ ಕಣದಿಂದ ಹಿಂದೆ ಸರಿದ ನಿಟ್ಟಿನಲ್ಲಿ ಕಮಲಾ ಅವರ ಹೆಸರು ಮುಂಚೂಣಿಯಲ್ಲಿತ್ತು ಅಲ್ಲದೆ ಡೆಮಾಕ್ರಟಿಕ್ ಪಕ್ಷದಲ್ಲೂ ಹ್ಯಾರಿಸ್ ಪರ ಒಲವು ಕಂಡುಬಂದಿತ್ತು ಇದೀಗ ಅಂತಿಮ ಹಂತಕ್ಕೆ ಬಂದು ತಲುಪಿದ್ದು ಅಧ್ಯಕ್ಷೀಯ ಚುನಾವಣೆಗೆ ಕಮಲಾ ಹ್ಯಾರಿಸ್ ಹೆಸರು ಅಂತಿಮಗೊಂಡಿದೆ, ಜೊತೆಗೆ ಜೋ ಬೈಡೆನ್ ಕೂಡ ಕಮಲಾ ಪರ ಪ್ರಚಾರ ನಡೆಸುವುದಾಗಿ ಹೇಳಿಕೊಂಡಿದ್ದಾರೆ.
ಅದರಂತೆ ನವೆಂಬರ್ 5ರಂದು ನಡೆಯಲಿರುವ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಮತ್ತು ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಿರುದ್ಧ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಕಮಲಾ ಹ್ಯಾರಿಸ್ ಚುನಾವಣೆ ಎದುರಿಸಲಿದ್ದಾರೆ.
ಇದನ್ನೂ ಓದಿ: Gadget Review: ಒನ್ ಪ್ಲಸ್ ಪ್ಯಾಡ್ 2… ಲ್ಯಾಪ್ ಟಾಪ್ ಅನುಭವ ನೀಡುವ ಟ್ಯಾಬ್
I am honored to be the Democratic nominee for President of the United States. I will officially accept the nomination next week.
This campaign is about people coming together, fueled by love of country, to fight for the best of who we are.
Join us: https://t.co/abmve926Hz
— Kamala Harris (@KamalaHarris) August 2, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Afghanistan; ಪೋಲಿಯೋ ಲಸಿಕೆಗೆ ತಾಲಿಬಾನ್ ತಡೆ: ವಿಶ್ವಸಂಸ್ಥೆ ಆರೋಪ
Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್ ಮಹಿಳೆಯರು!
Elon Musk: ಬೈಡೆನ್, ಕಮಲಾ ಮೇಲೇಕೆ ಹ*ತ್ಯಾ ಪ್ರಯತ್ನ ನಡೆಯುತ್ತಿಲ್ಲ?ಎಲಾನ್ ಮಸ್ಕ್
ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ… ಫ್ಲೋರಿಡಾ ಗಾಲ್ಫ್ ಕ್ಲಬ್ನಲ್ಲಿ ಘಟನೆ, ಆರೋಪಿ ಬಂಧನ
Bangladesh; ಕೊ*ಲೆ ಆರೋಪ: ಹಸೀನಾ ವಿರುದ್ಧ 155ನೇ ಪ್ರಕರಣ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.