
ಪ್ರವಾಹದ ಬಗ್ಗೆ ಕೀಳು ಕಮೆಂಟ್ ಮಾಡಿ ಗಲ್ಫ್ ನಲ್ಲಿ ಕೆಲಸ ಕಳೆದುಕೊಂಡ!
Team Udayavani, Aug 20, 2018, 1:15 PM IST

ದುಬೈ:ವರುಣನ ರೌದ್ರಾವತಾರಕ್ಕೆ ಸಿಲುಕಿ ನಲುಗಿ ಹೋಗಿದ್ದ ಕೇರಳದ ಪ್ರವಾಹ ಪೀಡಿತ ಸಂತ್ರಸ್ತರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಕೀಳುಮಟ್ಟದ ಕಮೆಂಟ್ ಮಾಡಿದ್ದ ಕೇರಳದ ವ್ಯಕ್ತಿಯೊಬ್ಬನಿಗೆ ಗಲ್ಫ್ ಕಂಪನಿಯೊಂದು ಗೇಟ್ ಪಾಸ್ ಕೊಟ್ಟಿದೆ!
ಕೇರಳ ಮೂಲದ ರಾಹುಲ್ ಚೇರು ಪಾಲಾಯಟ್ಟು ಒಮಾನ್ ನ ಲುಲು ಗ್ರೂಪ್ ಇಂಟರ್ ನ್ಯಾಶನಲ್ ನ ಶಾಖೆಯಲ್ಲಿ ಕ್ಯಾಶಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಕಂಪನಿ ರಾಹುಲ್ ನನ್ನು ಕೆಲಸದಿಂದ ವಜಾ ಮಾಡಿದೆ.
ಏನದು ಕಮೆಂಟ್:
ಕೇರಳದ ಪ್ರವಾಹ ಸಂತ್ರಸ್ತರಿಗೆ ಸ್ಯಾನಿಟೇಶನ್(ನ್ಯಾಪ್ಕಿನ್ ಸೇರಿದಂತೆ ನೈರ್ಮಲ್ಯ ಸಂಬಂಧಿ) ವಸ್ತುಗಳ ಅಗತ್ಯವಿದೆ ಎಂಬ ಮನವಿಯನ್ನು ರಾಹುಲ್ ತನ್ನ ಫೇಸ್ ಬುಕ್ ನಲ್ಲಿ ಅಣಕಿಸಿ ಕಮೆಂಟ್ ಹಾಕಿರುವುದಾಗಿ ದುಬೈ ಮೂಲದ ಖಾಲೀಜ್ ಟೈಮ್ಸ್ ವರದಿ ಮಾಡಿದೆ.
ರಾಹುಲ್ ಕಮೆಂಟ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪ ವ್ಯಕ್ತವಾಗಿತ್ತು. ಈ ವಿಷಯ ತಿಳಿದ ದುಬೈ ಕಂಪನಿ ಎಚ್ ಆರ್ ಮ್ಯಾನೇಜರ್ ರಾಹುಲ್ ಗೆ ಕೆಲಸದಿಂದ ತೆಗೆದುಹಾಕಿರುವ ಬಗ್ಗೆ ನೋಟಿಸ್ ನೀಡಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ.
“ ಕೇರಳದ ಪ್ರವಾಹ ಪರಿಸ್ಥಿತಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಡಿರುವ ಕೀಳುಮಟ್ಟದ ಕಮೆಂಟ್ ನ ಹಿನ್ನೆಲೆಯಲ್ಲಿ ನಿಮ್ಮನ್ನು ತಕ್ಷಣಕ್ಕೆ ಜಾರಿಯಾಗುವಂತೆ ಕೆಲಸದಿಂದ ವಜಾ ಮಾಡಲಾಗಿದೆ. ಕೂಡಲೇ ನಿಮ್ಮ ರಿಪೋರ್ಟಿಂಗ್ ಮ್ಯಾನೇಜರ್ ಗೆ ಕಚೇರಿ ನಿರ್ವಹಣೆಯ ಎಲ್ಲಾ ಜವಾಬ್ದಾರಿಗಳನ್ನು ವರ್ಗಾಯಿಸಿ, ಅಕೌಂಟ್ಸ್ ಡಿಪಾರ್ಟ್ ಮೆಂಟ್ ನಲ್ಲಿ ಫೈನಲ್ ಸೆಟಲ್ ಮೆಂಟ್ ಮಾಡಿಕೊಂಡು ಹೋಗಬೇಕು ಎಂದು ನೋಟಿಸ್ ನಲ್ಲಿ ಸೂಚಿಸಲಾಗಿದೆ.
ಕ್ಷಮೆ ಕೇಳಿದ ರಾಹುಲ್:
ತನ್ನ ಕಮೆಂಟ್ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾದ ಬಳಿಕ ರಾಹುಲ್ ಶನಿವಾರ ಫೇಸ್ ಬುಕ್ ನಲ್ಲಿ ಮತ್ತೊಂದು ವಿಡಿಯೋ ಫೋಸ್ಟ್ ಮಾಡಿ..ನನ್ನ ತಪ್ಪಿಗೆ ಕ್ಷಮೆ ಇರಲಿ. ನನ್ನ ಕಮೆಂಟ್ ನಿಂದ ನೋವಾಗಿದ್ದರೆ ಕ್ಷಮಿಸಿ..ನಾನು ಆ ಕಮೆಂಟ್ ಹಾಕಿರುವ ವೇಳೆ ಎಷ್ಟು ದೊಡ್ಡ ತಪ್ಪು ಮಾಡುತ್ತಿದ್ದೇನೆಂಬ ಅರಿವು ಇರಲಿಲ್ಲವಾಗಿತ್ತು ಎಂದು ತಿಳಿಸಿದ್ದ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ

Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.