ತೀರ್ಪು ಪ್ರಕಟ; ಜಾಧವ್ ಗಲ್ಲುಶಿಕ್ಷೆಗೆ ತಡೆ, ಪಾಕ್ ಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮುಖಭಂಗ


Team Udayavani, Jul 17, 2019, 6:36 PM IST

kulabhushan-Jadhav

ದ ಹೇಗ್(ಅಂತಾರಾಷ್ಟ್ರೀಯ ನ್ಯಾಯಾಲಯ): ಪಾಕಿಸ್ತಾನದಲ್ಲಿ ಭಾರತೀಯ ಗೂಢಚಾರಿಯಾಗಿದ್ದು, ಪಾಕಿಸ್ತಾನದಲ್ಲಿ ಭಯೋತ್ಪಾದನೆಗೆ ಪ್ರೇರೇಪಿಸುತ್ತಿದ್ದ ಎಂದು ಆರೋಪಿಸಿ ಪಾಕಿಸ್ತಾನ ಸೇನಾ ನ್ಯಾಯಾಲಯ ಕುಲಭೂಷಣ್ ಜಾಧವ್ ಗೆ ನೀಡಿದ್ದ ಮರಣ ದಂಡನೆ ಶಿಕ್ಷೆಗೆ ಹೇಗ್ ನಲ್ಲಿರುವ ಅಂತಾರಾಷ್ಟ್ರೀಯ ನ್ಯಾಯಾಲಯ ತಡೆ ನೀಡಿ ತನ್ನ ತೀರ್ಪು ಪ್ರಕಟಿಸಿದೆ.

ಕುಲಭೂಷಣ್ ಜಾಧವ್ ಗೆ ಪಾಕ್ ಕೋರ್ಟ್ ವಿಧಿಸಿದ್ದ ಗಲ್ಲುಶಿಕ್ಷೆಗೆ ತಡೆ ನೀಡುವ ಮೂಲಕ ಭಾರತಕ್ಕೆ ಬಹುದೊಡ್ಡ ರಾಜತಾಂತ್ರಿಕ ಗೆಲುವು ಸಿಕ್ಕಂತಾಗಿದೆ. ಪಾಕಿಸ್ತಾನ ವಿಯೆನ್ನಾ ಒಪ್ಪಂದವನ್ನು ಉಲ್ಲಂಘಿಸಿದ್ದು, ಪಾಕ್ ಮತ್ತೊಮ್ಮೆ ತೀರ್ಪನ್ನು ಮರುಪರಿಶೀಲಿಸಲಿ ಎಂದು ಹೇಗ್ ಕೋರ್ಟ್ ನಿರ್ದೇಶನ ನೀಡಿದೆ.

42 ಪುಟಗಳ ಆದೇಶ ಪ್ರತಿಯಲ್ಲಿ, ಅಂತಾರಾಷ್ಟ್ರೀಯ ನ್ಯಾಯಾಲಯದ 16 ಮಂದಿ ಜಡ್ಜ್ ಗಳ ಪೈಕಿ 15 ಮಂದಿ ನ್ಯಾಯಾಧೀಶರು ಭಾರತದ ಪರ ತೀರ್ಪು ನೀಡಿದ್ದಾರೆ.

ಕುಲಭೂಷಣ್ ಜಾಧವ್ ಗೆ ರಾಜತಾಂತ್ರಿಕ ನೆರವು ನೀಡಬೇಕೆಂದು ಅಂತಾರಾಷ್ಟ್ರೀಯ ಕೋರ್ಟ್ ತೀರ್ಪಿನಲ್ಲಿ ತಿಳಿಸಿದೆ. ಜಾಧವ್ ಭೇಟಿಗೆ  ಪಾಕಿಸ್ತಾನದಲ್ಲಿರುವ ಭಾರತದ ರಾಯಭಾರಿಗೆ ಅವಕಾಶ ನೀಡಬೇಕೆಂದು ಮಹತ್ವದ ತೀರ್ಪು ನೀಡಿದೆ.

ಭಾರತದ ಗೂಢಚಾರಿ ಕುಲಭೂಷಣ್ ಜಾಧವ್ ಗೆ ಪಾಕಿಸ್ತಾನ ಸೇನಾ ಕೋರ್ಟ್ ವಿಧಿಸಿದ್ದ ಮರಣದಂಡನೆ ಶಿಕ್ಷೆ ವಿರುದ್ಧ ಭಾರತ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಪ್ರಶ್ನಿಸಿತ್ತು. 2017ರ ಮೇ 8ರಿಂದ ಹೇಗ್ ನ್ಯಾಯಾಲದಲ್ಲಿ ವಿಚಾರಣೆ ನಡೆದಿತ್ತು.

ಹೇಗ್ ನಲ್ಲಿನ ಶಾಂತಿ ಭವನದಲ್ಲಿ (ಪೀಸ್ ಪ್ಯಾಲೇಸ್) ಭಾರತೀಯ ಕಾಲಮಾನ ಪ್ರಕಾರ ಬುಧವಾರ ಸಂಜೆ 6.30ಕ್ಕೆ ಪ್ರಕರಣದ ಅಂತಿಮ ಸುತ್ತಿನ ತೀರ್ಪನ್ನು ನೀಡಿದೆ. ನೆದರ್ ಲ್ಯಾಂಡ್ ನಲ್ಲಿರುವ ಹೇಗ್ ಅಂತಾರಾಷ್ಟ್ರೀಯ ನ್ಯಾಯಾಲಯದ ಮುಖ್ಯನ್ಯಾಯಮೂರ್ತಿ ಅಬ್ದುಲ್ ಖ್ವಾವಿ ಅಹ್ಮದ್ ಯೂಸುಫ್ ನೇತೃತ್ವದ ನ್ಯಾಯಾಧೀಶರ ಪೀಠ ತೀರ್ಪನ್ನು ಪ್ರಕಟಿಸಿದ್ದಾರೆ.

ಟಾಪ್ ನ್ಯೂಸ್

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

1-trew

Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..

Hashem

Hashem Safieddine: ಹಿಜ್ಬುಲ್ಲಾ ಉತ್ತರಾಧಿಕಾರಿಯನ್ನು ಹೊಡೆದುರುಳಿಸಿತಾ ಇಸ್ರೇಲ್?

Zakir Naik

Hindu ಸಂತರು ಗೋ ಮಾಂಸ ತಿನ್ನುತ್ತಾರೆ: ಪಾಕಿಸ್ಥಾನದಲ್ಲಿ ಝಾಕಿರ್‌ ನಾಯ್ಕ

1-weqwe

Strikes again; ಲೆಬನಾನ್‌,ಗಾಜಾ ಮೇಲೆ ಮತ್ತೆ ಮುಗಿಬಿದ್ದ ಇಸ್ರೇಲ್‌:40ಕ್ಕೂ ಹೆಚ್ಚು ಸಾ*ವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

16

Ullal: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಬಾವಿಯಲ್ಲಿ ಪತ್ತೆ

15

Blind Chess World C’ships: ವಿಶ್ವ ಅಂಧರ ಚೆಸ್‌: ಪ್ರಶಸ್ತಿ ಸನಿಹಕ್ಕೆ ಲುಬೋವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.