Pak ಸೇರಿ 5 ಮುಸ್ಲಿಂ ರಾಷ್ಟ್ರಗಳ ಪ್ರಜೆಗಳಿಗೆ ಕುವೈಟ್ ಪ್ರವೇಶ ಬಂದ್
Team Udayavani, Feb 2, 2017, 4:53 PM IST
ಕುವೈಟ್ : ಸಿರಿಯಾ, ಇರಾಕ್, ಪಾಕಿಸ್ಥಾನ, ಅಫ್ಘಾನಿಸ್ಥಾನ ಮತ್ತು ಇರಾನ್ ಒಳಗೊಂಡಂತೆ ಐದು ಮುಸ್ಲಿಂ ರಾಷ್ಟ್ರಗಳ ಪ್ರಜೆಗಳಿಗೆ ವೀಸಾ ನೀಡಿಕೆಯನ್ನು ಕುವೈಟ್ ಅಮಾನತುಗೊಳಿಸಿದೆ.
ಕಳೆದ ಶುಕ್ರವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮುಸ್ಲಿಂ ಬಾಹುಳ್ಯವಿರುವ ಏಳು ದೇಶಗಳ ಮೇಲೆ ವಲಸೆ ನಿಷೇಧ ಹೇರಿರುವುದನ್ನು ಅನುಸರಿಸಿ ಇದೀಗ ಕುವೈಟ್ ಐದು ಮುಸ್ಲಿಂ ರಾಷ್ಟ್ರಗಳ ಪ್ರಜೆಗಳಿಗೆ ವೀಸಾಗೆ ಅರ್ಜಿ ಹಾಕದಂತೆ ಸೂಚಿಸಿದೆ.
ಕಟ್ಟಾ ಇಸ್ಲಾಮಿಕ್ ಉಗ್ರರು ತನ್ನ ದೇಶಕ್ಕೆ ವಲಸೆ ಬರುವ ಭೀತಿ ಇರುವುದರಿಂದ ಕುವೈಟ್ ಐದು ಮುಸ್ಲಿಂ ರಾಷ್ಟ್ರಗಳ ಪ್ರಜೆಗಳಿಗೆ ವೀಸಾ ನೀಡದಿರಲು ನಿರ್ಧರಿಸಿರುವುದಾಗಿ ಸ್ಪುಟ್ನಿಕ್ ಇಂಟರ್ನ್ಯಾಶನಲ್ ಸುದ್ದಿ ಸಂಸ್ಥೆ ವರದಿ ಮಾಡಿದೆ.
ವಿಶೇಷವೆಂದರೆ ಟ್ರಂಪ್ ನಿಷೇಧಕ್ಕೆ ಸಾಕಷ್ಟು ಮುನ್ನವೇ ಕುವೈಟ್, 2011ರಷ್ಟು ಹಿಂದೆಯೇ ಎಲ್ಲ ಸಿರಿಯನ್ನರಿಗೆ ವೀಸಾ ನೀಡುವುದನ್ನು ಅಮಾನತು ಮಾಡಿತ್ತು. ಕುವೈಟ್ನಲ್ಲಿ ಸಾಂಸ್ಕೃತಿಕ ಕಾಯಿದೆ ಕಾನೂನುಗಳು ಅತ್ಯಂತ ಕಟ್ಟುನಿಟ್ಟಾಗಿರುವುದೇ ಇದಕ್ಕೆ ಕಾರಣವೆಂದು ತಿಳಿಯಲಾಗಿದೆ.
2015ರಲ್ಲಿ ಇಸ್ಲಾಮಿಕ್ ಉಗ್ರರು ಶಿಯಾ ಮಸೀದಿಯೊಂದರ ಮೇಲೆ ಬಾಂಬ್ ದಾಳಿ ನಡೆಸಿ 27 ಕುವೈಟೀ ಪ್ರಜೆಗಳನ್ನು ಕೊಂದಿದ್ದರು. ಹೊರ ದೇಶಗಳಿಂದ ವಲಸೆ ಬರುವವರಿಗೆ ಅತ್ಯಂತ ಕಠಿನ ಕಾನೂನನ್ನು ಹೊಂದಿರುವ ಕುವೈಟ್ ಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಇವುಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಿಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
China: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ: ಬೌ.. ಬೌ.. ಎಂದಾಗಲೇ ಗೊತ್ತು
Labanon: ಲೆಬನಾನ್ ಪ್ರಯಾಣಿಕರು ಪೇಜರ್ಸ್, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್ ಏರ್ ವೇಸ್
ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ
Khalistani; ಭಾರತದ ವಿರುದ್ಧ ಅಮೆರಿಕ ಕೋರ್ಟ್ಗೆ ಪನ್ನು ದೂರು
Jammu and Kashmir:ಕಲಂ 370 ಪುನರ್ ಜಾರಿ-ಕಾಂಗ್ರೆಸ್, ಎನ್ ಸಿ ನಿಲುವಿಗೆ ಪಾಕ್ ಬೆಂಬಲ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Stock Market: ಸಾರ್ವಕಾಲಿಕ ದಾಖಲೆ ಬರೆದ ಷೇರುಪೇಟೆ; ಹೂಡಿಕೆದಾರರಿಗೆ 6 ಲಕ್ಷ ಕೋಟಿ ರೂ. ಲಾಭ
Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ
Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ
Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್ ಗಾಂಧಿ
Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.