Maldives ಚುನಾವಣೆ: ಭಾರತ ವಿರೋಧಿ ಮುಯಿಜ್ಜು ಪಕ್ಷಕ್ಕೆ ಜಯ


Team Udayavani, Apr 22, 2024, 6:00 AM IST

Maldives Muizzu

ಮಾಲೆ: ಮಾಲ್ದೀವ್ಸ್‌ನಲ್ಲಿ ರವಿವಾರ ಸಾರ್ವತ್ರಿಕ ಚುನಾವಣೆ ನಡೆದಿದೆ. ಭಾರತ ವಿರೋಧಿ ಹಾಗೂ ಚೀನ ಪರ ನಿಲುವು ಹೊಂದಿರುವ ಮಾಲ್ದೀವ್ಸ್‌ ಅಧ್ಯಕ್ಷ ಮೊಹಮ್ಮದ್‌ ಮುಯಿಜ್ಜು ಮತ್ತೆ ಜಯ ಗಳಿಸಿದ್ದಾರೆ. ಹೀಗಾಗಿ ಮಾಲ್ದೀವ್ಸ್‌ ಜತೆಗಿನ ಭಾರತದ ಸಂಬಂಧವೂ ಮತ್ತಷ್ಟು ಬಿಗಡಾಯಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.

93 ಕ್ಷೇತ್ರಗಳಿಗೆ ರವಿವಾರ ಬೆಳಗ್ಗೆ 8ರಿಂದ ಸಂಜೆ 5.30ರ ವರೆಗೆ ಮತದಾನ ನಡೆದಿದ್ದು, ಶೇ. 72.96ರಷ್ಟು ಮತದಾನ ದಾಖಲಾಗಿದೆ. ಒಟ್ಟು 86 ಕ್ಷೇತ್ರಗಳಿಗೆ ಮತದಾನ ನಡೆದಿದ್ದು, ಮುಯಿಜ್ಜು ನೇತೃತ್ವದ ಪೀಪಲ್ಸ್‌ ನ್ಯಾಶನಲ್‌ ಕಾಂಗ್ರೆಸ್‌ ಪಕ್ಷ (ಪಿಎನ್‌ಸಿ) 66 ಸ್ಥಾನಗಳಲ್ಲಿ ಜಯ ಗಳಿಸಿದೆ. ಹೀಗಾಗಿ 93 ಸದಸ್ಯರನ್ನು ಹೊಂದಿರುವ ಮಾಲ್ದೀವ್ಸ್‌ ಸಂಸತ್ತಿನಲ್ಲಿ ಮುಯಿಜ್ಜು ಪಕ್ಷಕ್ಕೆ ಸ್ಪಷ್ಟ ಬಹುಮತ ದೊರಕಿದಂತಾಗಿದೆ.

ಮಾಲ್ದೀವ್ಸ್‌ನ ವಿವಾದಿತ ಪ್ರದೇಶದಲ್ಲಿ ಸಾವಿರಾರು ಅಪಾರ್ಟ್‌ಮೆಂಟ್‌ ನಿರ್ಮಾಣ ಮಾಡುತ್ತಿರುವುದು ಸಹಿತ ಚೀನದೊಂದಿಗೆ ಬೃಹತ್‌ ಆರ್ಥಿಕ ಸಂಬಂಧವನ್ನು ಹೊಂದಿರುವ ಮಾಲ್ದೀವ್ಸ್‌ಗೆ ಈ ಚುನಾವಣೆ ನಿರ್ಣಾಯಕವಾಗಿತ್ತು. ಕಳೆದ ಸೆಪ್ಟಂಬರ್‌ನಲ್ಲಿ ನಡೆದ ಚುನಾವಣೆಯಲ್ಲಿ ಮುಯಿಜ್ಜು ಜಯಗಳಿಸಿದ್ದರೂ ಮೈತ್ರಿ ನಾಯಕರು ಪಕ್ಷ ಬಿಟ್ಟ ಕಾರಣ ಅಧಿಕಾರಕ್ಕೆ ಕುತ್ತು ಬಂದಿತ್ತು. ಹೀಗಾಗಿ ಮತ್ತೆ ಚುನಾವಣೆ ನಡೆಸಲಾಗಿದ್ದು, ಮುಯಿಜ್ಜು ಪಕ್ಷ ಜಯಗಳಿಸಿದೆ.

ಈಗಾಗಲೇ ಭಾರತದ ಜತೆಗೆ ವೈಮನಸ್ಸು ಹೊಂದಿರುವ ಮುಯಿಜ್ಜು ಚೀನದ ಜತೆಗೆ ಉತ್ತಮ ಆರ್ಥಿಕ ಹಾಗೂ ರಕ್ಷಣ ಸಂಬಂಧವನ್ನು ಹೊಂದಲು ಬಯಸಿದ್ದರು. ಈಗ ಇದಕ್ಕೆ ಸಂಸತ್ತಿನ ಬೆಂಬಲವೂ ಸಿಕ್ಕಿರುವುದರಿಂದ ಅವರಿಗೆ ಮತ್ತಷ್ಟು ಬಲ ಸಿಕ್ಕಂತಾಗಿದೆ.

ಭಾರತದಲ್ಲೂ ಮತಗಟ್ಟೆ
ಭಾರತದ ತಿರುವನಂತಪುರ, ಶ್ರೀಲಂಕಾದ ಕೊಲೊಂಬೋ ಮತ್ತು ಮಲೇಷ್ಯಾದ ಕೌಲಾಲಾಂಪುರದಲ್ಲಿ ಒಟ್ಟು 3 ಬ್ಯಾಲೆಟ್‌ ಬಾಕ್ಸ್‌ಗಳನ್ನು ಇರಿಸಲಾಗಿತ್ತು ಎಂದು ಚುನಾವಣೆ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

1-PT

IOC ಗೆ ಪತ್ರ; ಪಿ.ಟಿ.ಉಷಾ ವಿರುದ್ಧ ಡಜನ್ ಗೂ ಹೆಚ್ಚು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು!

Ramalinga-Raeddy

Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್‌ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

India: ಮೊದಲು ಗಡಿ ಭಯೋತ್ಪಾದನೆ ನಿಲ್ಲಿಸಿ-ವಿಶ್ವಸಂಸ್ಥೆಯಲ್ಲಿ ಪಾಕ್‌ ಗೆ ಭಾರತದ ಚಾಟಿ

India: ಮೊದಲು ಗಡಿ ಭಯೋತ್ಪಾದನೆ ನಿಲ್ಲಿಸಿ-ವಿಶ್ವಸಂಸ್ಥೆಯಲ್ಲಿ ಪಾಕ್‌ ಗೆ ಭಾರತದ ಚಾಟಿ

1-dert

China; ಮುಳುಗಿದ ಅಣ್ವಸ್ತ್ರ ಸಬ್‌ಮರೀನ್‌! : ಅಮೆರಿಕ ಮಾಹಿತಿ 

1-kaidi

Prisoner; ಅತೀ ಹೆಚ್ಚು ಕಾಲ ಜೈಲಿನಲ್ಲಿದ್ದ ಕೈದಿಯ ಬಿಡುಗಡೆ

Isrel 2

Israel ಮೇಲೆ ಹೌಥಿ ಉಗ್ರರಿಂದ ಡ್ರೋನ್‌ ದಾಳಿ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

025587

ICC Women’s T20 World Cup: ವನಿತಾ ಟಿ20 ವಿಶ್ವಕಪ್‌; ಅಂಪಾಯರ್ಸ್ ಆಯ್ಕೆ

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

0888

Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?

042174

WFI: ಕುಸ್ತಿಪಟುಗಳಿಗೆ ಡಬ್ಲ್ಯುಎಫ್ಐ ತಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.