Anti-India Stance… ಮಾಲ್ಡೀವ್ಸ್‌ ಸರಕಾರದ ನೀತಿ ವಿರುದ್ಧ ಪ್ರತಿಪಕ್ಷಗಳಿಂದ ಆಕ್ರೋಶ


Team Udayavani, Jan 25, 2024, 10:38 AM IST

ಭಾರತ ವಿರೋಧಿ ನೀತಿ… ಮಾಲ್ಡೀವ್ಸ್‌ ಸರಕಾರದ ನೀತಿ ವಿರುದ್ಧ ಪ್ರತಿಪಕ್ಷಗಳಿಂದ ಆಕ್ರೋಶ

ಮಾಲೆ: ಭಾರತ ಮತ್ತು ಮಾಲ್ಡೀವ್ಸ್ ನಡುವಿನ ರಾಜತಾಂತ್ರಿಕ ಜಗಳದ ನಡುವೆ, ಮಾಲ್ಡೀವ್ಸ್‌ನ ಎರಡು ಪ್ರಮುಖ ವಿರೋಧ ಪಕ್ಷಗಳು ಬುಧವಾರ ತಮ್ಮ ಸರ್ಕಾರದ ‘ಭಾರತ ವಿರೋಧಿ ನಿಲುವು’ ಬಗ್ಗೆ ಕಳವಳ ವ್ಯಕ್ತಪಡಿಸಿವೆ.

ಭಾರತದ ಪ್ರಧಾನಿ ನರೇಂದ್ರ ಮೋದಿ ಲಕ್ಷದ್ವೀಪ ಭೇಟಿ ಬಳಿಕ ಮಾಲ್ಡೀವ್ಸ್‌ ಸಚಿವರು ಭಾರತ ಮತ್ತು ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಬಳಿಕ ಉಂಟಾದ ವೈಮನಸ್ಸು ಇದೀಗ ದೊಡ್ಡ ಮಟ್ಟದಲ್ಲಿ ಬೆಳವಣಿಗೆಗಳು ನಡೆಯುತ್ತಿವೆ.

ಮಾಲ್ಡೀವ್ಸ್‌ನ ಪ್ರಮುಖ ವಿರೋಧ ಪಕ್ಷಗಳಾದ ಎಂಡಿಪಿ ಮತ್ತು ಡೆಮೋಕ್ರಾಟ್‌ಗಳು ಮೊಹಮ್ಮದ್ ಮುಯಿಝು ಸರ್ಕಾರದ ವಿದೇಶಾಂಗ ನೀತಿಯನ್ನು ಟೀಕಿಸಿವೆ. 87 ಸದಸ್ಯರ ಸದನದಲ್ಲಿ ಒಟ್ಟು 55 ಸ್ಥಾನಗಳನ್ನು ಹೊಂದಿರುವ ಈ ಎರಡು ಪ್ರಮುಖ ವಿರೋಧ ಪಕ್ಷಗಳು ವಿಶೇಷವಾಗಿ ನೆರೆಯ ಮತ್ತು ಪ್ರಮುಖ ಪಾಲುದಾರ ಭಾರತದೊಂದಿಗೆ ಹದಗೆಡುತ್ತಿರುವ ಸಂಬಂಧಗಳ ಬಗ್ಗೆ ಕಳವಳ ವ್ಯಕ್ತಪಡಿಸಿವೆ.

ಭಾರತವನ್ನು ಮಾಲ್ಡೀವ್ಸ್‌ನ ಅತ್ಯಂತ ಹಳೆಯ ಮಿತ್ರರಾಷ್ಟ್ರಗಳೆಂದು ಕರೆದಿರುವ ಎರಡೂ ಪಕ್ಷಗಳು ಜಂಟಿ ಹೇಳಿಕೆಯಲ್ಲಿ ಮುಯಿಝೋ ಸರ್ಕಾರದ ‘ಭಾರತ ವಿರೋಧಿ ನಿಲುವು’ ಬಗ್ಗೆ ಕಳವಳ ವ್ಯಕ್ತಪಡಿಸಿವೆ ಮತ್ತು ಈ ಬಗ್ಗೆ ಹೆಚ್ಚಿನ ಗಮನ ಹರಿಸಬೇಕಾಗಿದೆ ಎಂದು ಹೇಳಿದ್ದಾರೆ.

ಚೀನಾದ ಹಡಗು ಸಂಶೋಧನೆ ಮತ್ತು ಸಮೀಕ್ಷೆಗಾಗಿ ಮಾಲ್ಡೀವ್ಸ್ ಬಂದರಿಗೆ ಭೇಟಿ ನೀಡಲು ಮೊಹಮ್ಮದ್ ಮುಯಿಝು ಸರ್ಕಾರದ ನಿರ್ಧಾರವನ್ನು ಎರಡೂ ಪಕ್ಷಗಳು ದೇಶದ ವಿದೇಶಾಂಗ ನೀತಿಯ ದೀರ್ಘಾವಧಿಯ ಅಭಿವೃದ್ಧಿಗೆ ಅತ್ಯಂತ ಹಾನಿಕಾರಕವೆಂದು ಬಣ್ಣಿಸಿವೆ. ಮಾಲ್ಡೀವ್ಸ್‌ನ ವಿದೇಶಾಂಗ ನೀತಿಯ ನಿರ್ದೇಶನಕ್ಕೆ ಸಂಬಂಧಿಸಿದಂತೆ, ಪ್ರಸ್ತುತ ಆಡಳಿತವು ಭಾರತ ವಿರೋಧಿ ನಿಲುವನ್ನು ತೋರುತ್ತಿದೆ ಎಂದು ಹೇಳಿವೆ. MDP ಮತ್ತು ಡೆಮೋಕ್ರಾಟ್‌ಗಳೆರಡೂ ಯಾವುದೇ ಅಭಿವೃದ್ಧಿ ಪಾಲುದಾರರನ್ನು ಮತ್ತು ವಿಶೇಷವಾಗಿ ದೇಶದ ಹಳೆಯ ಮಿತ್ರರನ್ನು ದೂರವಿಡುವುದು ದೇಶದ ದೀರ್ಘಾವಧಿಯ ಅಭಿವೃದ್ಧಿಗೆ ಅತ್ಯಂತ ಹಾನಿಕಾರಕವಾಗಿದೆ ಎಂದು ಹೇಳಿದೆ.

ಎಲ್ಲರೊಂದಿಗೆ ಒಟ್ಟಾಗಿ ಕೆಲಸ ಮಾಡಬೇಕು:
ಎಂಡಿಪಿ ಅಧ್ಯಕ್ಷ ಫೈಯಾಜ್ ಇಸ್ಮಾಯಿಲ್ ಮತ್ತು ಡೆಮಾಕ್ರಟ್ ಪಕ್ಷದ ಅಧ್ಯಕ್ಷ ಹಸನ್ ಲತೀಫ್ ಮಾತನಾಡಿ, ಮಾಲ್ಡೀವ್ಸ್ ಜನರ ಅಭ್ಯುದಯಕ್ಕಾಗಿ ಸರ್ಕಾರ ಎಲ್ಲಾ ಅಭಿವೃದ್ಧಿ ಪಾಲುದಾರರೊಂದಿಗೆ ಉತ್ತಮವಾದ ರೀತಿಯಲ್ಲಿ ಕೆಲಸ ಮಾಡಬೇಕು. ಮಾಲ್ಡೀವ್ಸ್‌ನ ಸ್ಥಿರತೆ ಮತ್ತು ಭದ್ರತೆಗೆ ಹಿಂದೂ ಮಹಾಸಾಗರದಲ್ಲಿ ಸ್ಥಿರತೆ ಮತ್ತು ಭದ್ರತೆ ಅತ್ಯಗತ್ಯ. ಇಂತಹ ಪರಿಸ್ಥಿತಿಯಲ್ಲಿ ಮುಯಿಜ್ಜು ಎಲ್ಲರೊಂದಿಗೆ ಸೇರಿ ಕೆಲಸ ಮಾಡಬೇಕು. ಸರ್ಕಾರದ ವಿದೇಶಾಂಗ ನೀತಿಯ ಬಗ್ಗೆ ಯೋಚಿಸುವಂತೆ ಎರಡೂ ಪಕ್ಷಗಳ ನಾಯಕರು ಮುಯಿಜ್ಜುಗೆ ತಿಳಿಸಿದ್ದಾರೆ.

ಇದನ್ನೂ ಓದಿ: Road Mishap: ತಮಿಳುನಾಡಿನಲ್ಲಿ ಭೀಕರ ಸರಣಿ ಅಪಘಾತ… ನಾಲ್ವರು ಮೃತ್ಯು, 8 ಮಂದಿಗೆ ಗಾಯ

ಟಾಪ್ ನ್ಯೂಸ್

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

1-PT

IOC ಗೆ ಪತ್ರ; ಪಿ.ಟಿ.ಉಷಾ ವಿರುದ್ಧ ಡಜನ್ ಗೂ ಹೆಚ್ಚು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು!

Ramalinga-Raeddy

Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್‌ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

India: ಮೊದಲು ಗಡಿ ಭಯೋತ್ಪಾದನೆ ನಿಲ್ಲಿಸಿ-ವಿಶ್ವಸಂಸ್ಥೆಯಲ್ಲಿ ಪಾಕ್‌ ಗೆ ಭಾರತದ ಚಾಟಿ

India: ಮೊದಲು ಗಡಿ ಭಯೋತ್ಪಾದನೆ ನಿಲ್ಲಿಸಿ-ವಿಶ್ವಸಂಸ್ಥೆಯಲ್ಲಿ ಪಾಕ್‌ ಗೆ ಭಾರತದ ಚಾಟಿ

1-dert

China; ಮುಳುಗಿದ ಅಣ್ವಸ್ತ್ರ ಸಬ್‌ಮರೀನ್‌! : ಅಮೆರಿಕ ಮಾಹಿತಿ 

1-kaidi

Prisoner; ಅತೀ ಹೆಚ್ಚು ಕಾಲ ಜೈಲಿನಲ್ಲಿದ್ದ ಕೈದಿಯ ಬಿಡುಗಡೆ

Isrel 2

Israel ಮೇಲೆ ಹೌಥಿ ಉಗ್ರರಿಂದ ಡ್ರೋನ್‌ ದಾಳಿ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1242

SAFF U-17 Championship: ಭಾರತ-ಬಾಂಗ್ಲಾ ಫೈನಲ್‌

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

025587

ICC Women’s T20 World Cup: ವನಿತಾ ಟಿ20 ವಿಶ್ವಕಪ್‌; ಅಂಪಾಯರ್ಸ್ ಆಯ್ಕೆ

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

0888

Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.