![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 5, 2023, 5:00 PM IST
ಲಂಡನ್: ಮಾರ್ಚ್ನಲ್ಲಿ ಲಂಡನ್ನಲ್ಲಿರುವ ಭಾರತೀಯ ಹೈಕಮಿಷನ್ ಮೇಲೆ ನಡೆದ ದಾಳಿಗೆ ಸಂಬಂಧಿಸಿದಂತೆ ಸ್ಕಾಟ್ಲ್ಯಾಂಡ್ ಯಾರ್ಡ್ “ಹಿಂಸಾತ್ಮಕ ಅಸ್ವಸ್ಥತೆ” ಎಂಬ ಶಂಕೆಯ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಿದೆ.
ಸೋಮವಾರ ಇಂಡಿಯಾ ಹೌಸ್ನ ಹೊರಗೆ ನಡೆದ ಪ್ರತಿಭಟನೆಯ ಸಂದರ್ಭದಲ್ಲಿವಶಕ್ಕೆ ಪಡೆಯಲಾದ ವ್ಯಕ್ತಿಯನ್ನು ಮಾರ್ಚ್ 19 ರಂದು ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಬಂಧಿಸಿ ಹೆಚ್ಚಿನ ವಿಚಾರಣೆಗಾಗಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಮೆಟ್ರೋಪಾಲಿಟನ್ ಪೊಲೀಸರು ತಿಳಿಸಿದ್ದಾರೆ.
ಖಲೀಸ್ತಾನ್ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂದು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ಹೇಳಿಕೆಗಳ ಮೇಲೆ ಯುಕೆ ಸರಕಾರದ ಮಧ್ಯಸ್ಥಿಕೆಗೆ ಒತ್ತಾಯಿಸಿ ಸೋಮವಾರ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಬ್ರಿಟಿಷ್ ಸಿಖ್ ವ್ಯಕ್ತಿಯನ್ನು ಗಸ್ತು ತಿರುಗುತ್ತಿದ್ದ ಪೊಲೀಸ್ ಅಧಿಕಾರಿಗಳು ನೋಡಿ ಬಂಧಿಸಿದ್ದಾರೆ.
ಆರೋಪಿಯ ಮೇಲೆ ಆರೋಪ ಹೊರಿಸಿದ ನಂತರವೇ ಆತನ ವಿವರ ಬಹಿರಂಗ ಪಡಿಸಬಹುದು, ಆದರೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಗುರುತಿಸಿರುವ ಹತ್ತಕ್ಕೂ ಹೆಚ್ಚು ಆರೋಪಿಗಳಲ್ಲಿ ಒಬ್ಬ ಎಂದು ನಂಬಲಾಗಿದ್ದು,ಈತ ಮಾರ್ಚ್ 19 ರಂದು ಭಾರತದ ಹೈಕಮಿಷನ್ ಮೇಲಿನ ದಾಳಿಗೆ ಜವಾಬ್ದಾರನಾಗಿದ್ದಾನೆ ಎನ್ನಲಾಗಿದೆ. ಖಲಿಸ್ತಾನ್ ಉಗ್ರರು ಕಟ್ಟಡವನ್ನು ಮೇಲಕ್ಕೆ ಹತ್ತಿ ಭಾರತದ ರಾಷ್ಟ್ರಧ್ವಜವನ್ನು ಕೆಳಗಿಳಿಸಲು ಯತ್ನಿಸಿದ್ದರು. ಕಟ್ಟಡದ ಮೇಲೆ ವಸ್ತುಗಳು ಎಸೆದಿದ್ದರಿಂದ ಒಬ್ಬ ಅಧಿಕಾರಿ ಗಾಯಗೊಂಡಿದ್ದರು ಮತ್ತು ಕಿಟಕಿ ಗಾಜುಗಳು ಒಡೆದಿದ್ದವು.
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
ರಷ್ಯಾ-ಉಕ್ರೇನ್ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.