Hawaii: ಸುಟ್ಟು ಕರಕಲಾದ ಪ್ರವಾಸಿ ಪಟ್ಟಣ, ಎಲ್ಲಿ ನೋಡಿದರೂ ಬೂದಿ… ಮೃತರ ಸಂಖ್ಯೆ 53ಕ್ಕೆ


Team Udayavani, Aug 11, 2023, 9:49 AM IST

Hawaii ದ್ವೀಪದಲ್ಲಿ ಕಾಳ್ಗಿಚ್ಚು, ಕಟ್ಟಡಗಳು ಸುಟ್ಟು ಕರಕಲು, ಮೃತರ ಸಂಖ್ಯೆ 53ಕ್ಕೆ ಏರಿಕೆ

ಹವಾಯಿ: ವಿಶ್ವ ಪ್ರಸಿದ್ದ ಪ್ರವಾಸಿ ತಾಣಗಳಲ್ಲಿ ಒಂದಾಗಿರುವ ಪಶ್ಚಿಮ ಯುನೈಟೆಡ್ ಸ್ಟೇಟ್ಸ್ ನ ಐತಿಹಾಸಿಕ ದ್ವೀಪ ರಾಜ್ಯ ಹವಾಯಿಯಲ್ಲಿ ಉಂಟಾದ ಭಾರಿ ಕಾಡ್ಗಿಚ್ಚು ದ್ವೀಪರಾಜ್ಯದ ಮವ್ವಿ ಪಟ್ಟಣವನ್ನು ವ್ಯಾಪಿಸಿದ್ದು, ಪಟ್ಟಣದ ಬಹುತೇಕ ಭಾಗವನ್ನು ಬೆಂಕಿಯ ಕೆನ್ನಾಲಿಗೆ ಭಸ್ಮಗೊಳಿಸಿದೆ.

ಅಮೆರಿಕದ ಹವಾಯಿಯಲ್ಲಿರುವ ಮಾಯಿ ಅರಣ್ಯದಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡ ಪರಿಣಾಮ ಹುಟ್ಟಿಕೊಂಡ ಅಗ್ನಿಯ ಜ್ವಾಲೆ ಇಡೀ ನಗರವನ್ನೇ ಆವರಿಸಿಕೊಂಡಿದೆ. ಲಹೈನಾ ಪಟ್ಟಣದಲ್ಲಿ ಕನಿಷ್ಠ 53 ಜನರು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆ.

ಅಗ್ನಿಶಾಮಕ ದಳದವರು ಬೆಂಕಿಯನ್ನು ನಿಯಂತ್ರಿಸಲು ನಿರಂತರ ಪ್ರಯತ್ನಿಸುತ್ತಿದ್ದಾರೆ. ದ್ವೀಪದಲ್ಲಿರುವ ಐತಿಹಾಸಿಕ ಪಟ್ಟಣಗಳ ದೊಡ್ಡ ಭಾಗಗಳು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸುಟ್ಟು ಬೂದಿಯಾಗಿದೆ.

ಜನಪ್ರಿಯ ಪ್ರವಾಸಿ ತಾಣವಾದ ಲಹೈನಾ ಪಟ್ಟಣ ಸೇರಿದಂತೆ ಹಲವು ಕಡೆಗಳಿಂದ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ.

ಕಾಡ್ಗಿಚ್ಚಿನಿಂದಾಗಿ ಲಹೈನಾ ಪಟ್ಟಣದ ಪ್ರವಾಸಿ ಸ್ಥಳಗಳಿಗೆ ಹೆಚ್ಚಿನ ಹಾನಿಗೊಳಗಾಗಿವೆ. ಅಮೆರಿಕದ ಹವಾಮಾನ ಇಲಾಖೆಯ ಪ್ರಕಾರ, ಹವಾಯಿಯಲ್ಲಿ ಈ ರೀತಿಯಾಗಿ ಕಾಡ್ಗಿಚ್ಚು ಏರಲು ಡೋರಾ ಚಂಡಮಾರುತವೂ ಕಾರಣವಾಗಿದೆ, ಇದರ ಬಲವಾದ ಗಾಳಿ ಬೆಂಕಿಯನ್ನು ಬಹಳ ಬೇಗವಾಗಿ ಹರಡುವಂತೆ ಮಾಡುತ್ತದೆ ಎಂದು ಹೇಳಿದ್ದಾರೆ.

ಈ ಬೆಂಕಿಯ ಕೆನ್ನಾಲಿಗೆಗೆ ಐತಿಹಾಸಿಕ ನಗರ ಲಹೈನಾ ಸುಟ್ಟು ಹೋಗಿದ್ದು ಅಧಿಕಾರಿಗಳ ಪ್ರಕಾರ, ಈ ದುರಂತದಲ್ಲಿ ಕನಿಷ್ಠ 1,000 ಮಂದಿ ಕಾಣೆಯಾಗಿದ್ದಾರೆ. ಇಡೀ ನಗರವೇ ಭೂದಿಯಿಂದ ಆವರಿಸಿಕೊಂಡಂತೆ ಕಾಣುತ್ತದೆ ಎನ್ನಲಾಗಿದೆ.

ಅಗ್ನಿಯ ಅವಘಡಕ್ಕೆ ಸಾವಿರಾರು ಕಟ್ಟಡಗಳು ಸಿಲುಕಿ ಕ್ಷಣಾರ್ಧದಲ್ಲಿ ಸುಟ್ಟು ಬೂದಿಯಾಗಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಆಗಸ್ಟ್ 8 ಮಂಗಳವಾರದಂದು ಕಾಣಿಸಿಕೊಂಡ ಬೆಂಕಿ ಮಾಯಿಯ ಸುತ್ತಮುತ್ತಲಿನ ಒಣ ಪೊದೆಗಳಿಗೆ ಆವರಿಸಿಕೊಂಡು ದೊಡ್ಡ ಮಟ್ಟದಲ್ಲಿ ಹರಡತೊಡಗಿದೆ. ಬಳಿಕ ಬೆಂಕಿಯ ಪ್ರಮಾಣ ಹೆಚ್ಚಾಗುತ್ತಾ ರಸ್ತೆಗಳು, ಸೇತುವೆಗಳು ಮತ್ತು ವಿದ್ಯುತ್ ಸಂಪರ್ಕಗಳು ಕಡಿತಗೊಂಡವು.

ಲಹೈನಾ ದ್ವೀಪದಲ್ಲಿ ಉಂಟಾದ ಅಗ್ನಿ ಅವಘಡದಿಂದ ಇದುವರೆಗೆ ಕನಿಷ್ಠ 53 ಜನರು ಮೃತಪಟ್ಟಿದ್ದು ನೂರಾರು ಮಂದಿ ಗಾಯಗೊಂಡಿದ್ದಾರೆ ಅಲ್ಲದೆ ಸಾವಿರಾರು ಕುಟುಂಬ ತಮ್ಮ ಸೂರುಗಳನ್ನು ಕಳೆದುಕೊಂಡು ಅತಂತ್ರವಾಗಿವೆ ಎನ್ನಲಾಗಿದೆ. ಇದು ಹವಾಯಿ ದ್ವೀಪದ ಇತಿಹಾಸದಲ್ಲಿ ಕಂಡ ಮೊದಲ ಭೀಕರ ಅಗ್ನಿ ಅವಘಡವಾಗಿದೆ.

ಮಾಯಿ ದ್ವೀಪದಲ್ಲಿ ಕಾಡ್ಗಿಚ್ಚುಗಳು ವಿನಾಶಕಾರಿ ಪರಿಣಾಮವನ್ನು ಬೀರಿದ್ದು ದ್ವೀಪದ ಪ್ರಮುಖ ಆದಾಯದ ಮೂಲವಾದ ಪ್ರವಾಸೋದ್ಯಮಕ್ಕೆ ದೊಡ್ಡ ಹೊಡೆತ ಬಿದ್ದಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.