ಇರಾನ್ ನ ಮಸೀದಿ ಮೇಲೆ ಉಗ್ರರ ದಾಳಿ: 15 ಮಂದಿ ಸಾವು, ಹಲವರಿಗೆ ಗಾಯ
ಉಗ್ರರಿಂದ ಮನಬಂದಂತೆ ಗುಂಡಿನ ದಾಳಿ
Team Udayavani, Oct 27, 2022, 8:32 AM IST
ಟೆಹರಾನ್: ದಕ್ಷಿಣ ಇರಾನ್ನ ಪ್ರಮುಖ ಶಿಯಾ ಮುಸ್ಲಿಂ ಮಸೀದಿ ಮೇಲೆ ಬುಧವಾರ ನಡೆದ ಉಗ್ರರ ದಾಳಿಯಲ್ಲಿ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ. ಶಿರಾಜ್ ನಗರದ ಶಾ ಚೆರಾಗ್ ನಲ್ಲಿ ಸಂಜೆಯ ಪ್ರಾರ್ಥನೆಯ ಸಮಯದಲ್ಲಿ ಶಸ್ತ್ರಸಜ್ಜಿತ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಕನಿಷ್ಠ 40 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಮಸೀದಿಯಲ್ಲಿ ನೆರೆದಿದ್ದವರ ಮೇಲೆ ದಾಳಿಕೋರರು ಮನಬಂದಂತೆ ಗುಂಡು ಹಾರಿಸಿದ್ದಾರೆ ಎಂದು ಸ್ಥಳೀಯ ಗವರ್ನರ್ ಮೊಹಮ್ಮದ್-ಹಾದಿ ಇಮಾನಿಹ್ ತಿಳಿಸಿದ್ದಾರೆ.
ಇದನ್ನೂ ಓದಿ : ರಷ್ಯಾ 400 ಇರಾನ್ ಡ್ರೋನ್ಗಳನ್ನು ಬಳಸಿದೆ: ವೊಲೊಡಿಮಿರ್ ಝೆಲೆನ್ಸ್ಕಿ
ಪ್ರತ್ಯಕ್ಷದರ್ಶಿಯೊಬ್ಬರು ರಾಜ್ಯ ಸುದ್ದಿ ಸಂಸ್ಥೆ ಐಆರ್ಎನ್ಎಗೆ ಸಂಜೆ ಪ್ರಾರ್ಥನೆ ಪ್ರಾರಂಭವಾಗುತ್ತಿದ್ದಂತೆ “ಮಹಿಳೆಯರ ಕೂಗು ಕೇಳಿಸಿತು” ಮತ್ತು “ಉಗ್ರರು ಮಸೀದಿ ಪ್ರವೇಶಿಸಿ ಮನಬಂದಂತೆ ಗುಂಡು ಹಾರಿಸಿದರು” ಎಂದು ಹೇಳಿದರು.
ಇರಾನಿನ ಮಾಧ್ಯಮಗಳು ಮಸೀದಿಯೊಳಗೆ ರಕ್ತಸಿಕ್ತ ದೇಹಗಳನ್ನು ಬಟ್ಟೆಯಿಂದ ಮುಚ್ಚಿರುವುದನ್ನು ತೋರಿಸುವ ಚಿತ್ರಗಳು ಮತ್ತು ವಿಡಿಯೋ ತುಣುಕಗಳನ್ನು ಪ್ರಕಟಿಸಿವೆ. ಮೃತಪಟ್ಟವರಲ್ಲಿ ಒಬ್ಬ ಮಹಿಳೆ ಮತ್ತು ಇಬ್ಬರು ಮಕ್ಕಳು ಸೇರಿದ್ದಾರೆ ಎಂದು ಫಾರ್ಸ್ ಸುದ್ದಿ ಸಂಸ್ಥೆ ತಿಳಿಸಿದೆ.
ದಾಳಿಯ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಗುಂಪು ಹೊತ್ತುಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್ ಇಸ್ರೇಲ್ ದಾಳಿಯಲ್ಲಿ ಸಾವು
Israel- ಹೆಜ್ಬುಲ್ಲಾ ನಡುವೆ ಬಾಂಬ್ಗಳ ಸುರಿಮಳೆ! ; 100 ರಾಕೆಟ್ ಲಾಂಚರ್ ಧ್ವಂಸ
Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!
China: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ: ಬೌ.. ಬೌ.. ಎಂದಾಗಲೇ ಗೊತ್ತು
Labanon: ಲೆಬನಾನ್ ಪ್ರಯಾಣಿಕರು ಪೇಜರ್ಸ್, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್ ಏರ್ ವೇಸ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು
Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ
Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ
Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!
Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.