ತಾಲಿಬಾನ್ ಕ್ರೌರ್ಯಕ್ಕೆ ಬೆಚ್ಚಿದ ಅಫ್ಗಾನ್ : ಭಯದಲ್ಲಿ ಬೆಂದು ಹೋಗುತ್ತಿವೆ ಹೆಣ್ಣು ಜೀವಗಳು
Team Udayavani, Aug 17, 2021, 5:29 PM IST
ಕಾಬೂಲ್: ಉಗ್ರರ ಅಟ್ಟಹಾಸಕ್ಕೆ ಅಫ್ಗಾನಿಸ್ತಾನ್ ಇಂದು ಅಕ್ಷರಶಃ ಬೆಂದು ಹೋಗಿದೆ. ತಾಲಿಬಾನಿಗಳ ಕೈಗೆ ಅಧಿಕಾರ ಹಸ್ತಾಂತರವಾಗುತ್ತಿದ್ದಂತೆ ಸ್ಥಳೀಯ ನಿವಾಸಿಗಳಲ್ಲಿ ನಡುಕ ಶುರುವಾಗಿದ್ದು, ದೇಶ ಬಿಟ್ಟು ಪಲಾಯನ ಮಾಡುತ್ತಿದ್ದಾರೆ.
ಆಗಸ್ಟ್ 15 ರಂದು ಕಾಬೂಲ್ ವಶಕ್ಕೆ ಪಡೆದ ತಾಲಿಬಾನ್ ಉಗ್ರರು ಷರಿಯಾ ಕಾನೂನಡಿ ಆಡಳಿತ ನಡೆಸಲು ಮುಂದಾಗಿದ್ದಾರೆ.ಪರಿಣಾಮ ಕಳೆದ 20 ವರ್ಷಗಳ ಹಿಂದೆ ಎದುರಿಸದ್ದ ಕರಾಳ ದಿನಗಳು ಮತ್ತೆ ಮರುಕಳಿಸುತ್ತವೆ ಎನ್ನುವ ಭಯ ಶುರುವಾಗಿದೆ. ಅದರಲ್ಲೂ ಅಲ್ಲಿಯ ಹೆಣ್ಣು ಮಕ್ಕಳು ಭಯದ ಕುಲುಮೆಯಲ್ಲಿ ಬೆಂದು ಹೋಗುತ್ತಿವೆ.
ಈ ಮೊದಲು ತನ್ನ ಹಿಡಿತದಲ್ಲಿದ್ದ ಅಫ್ಗಾನಿಸ್ತಾನದಲ್ಲಿ ತಾಲಿಬಾನ್ ಷರಿಯಾ ಕಾನೂನಿನ ಕಠಿಣ ರೂಪವನ್ನು ಜಾರಿಗೊಳಿಸಿತ್ತು. ಮಹಿಳೆಯರು ಕೆಲಸ ಮಾಡುವುದನ್ನು ಅಥವಾ ಅಧ್ಯಯನ ಮಾಡುವುದನ್ನು ನಿರ್ಬಂಧಿಸಿತ್ತು. ಮಹಿಳೆಯರು ಒಬ್ಬಂಟಿಯಾಗಿ ಮನೆಬಿಟ್ಟು ಹೊರಬರುವಂತಿರಲಿಲ್ಲ. ಒಂದು ವೇಳೆ ತಮ್ಮ ಕಾನೂನನ್ನು ಉಲ್ಲಂಘಿಸಿದ ಮಹಿಳೆಯರನ್ನು ಕಠಿಣ ಶಿಕ್ಷೆಗೆ ಗುರಿಪಡಿಸಲಾಗುತ್ತಿತ್ತು. ಸಾರ್ವಜನಿಕವಾಗಿ ಮರಣದಂಡನೆ ಮತ್ತು ಚಾಟಿ ಏಟಿನ ಶಿಕ್ಷೆ ನೀಡುವುದು ಸಾಮಾನ್ಯವಾಗಿತ್ತು. ಅಂದಿನ ಕರಾಳ ದಿನಗಳು ಇದೀಗ ಮತ್ತೆ ಮರುಕಳಿಸುವ ಸಾಧ್ಯತೆ ಇರುವುದರಿಂದ ಅಲ್ಲಿಯ ಹೆಣ್ಣು ಜೀವಗಳು ಆತಂಕದಲ್ಲಿವೆ. ನಮ್ಮ ಜೀವಗಳಿಗೆ ರಕ್ಷಣೆ ಇಲ್ಲ ಎಂದು ಹೇಳಿಕೊಳ್ಳುತ್ತಿದ್ದಾರೆ.
ತಾಲಿಬಾನಿಗಳ ಮೊದಲ ದಿನದ ಆಡಳಿತಾವಧಿಯಲ್ಲಿಯೇ ದೇಶದಲ್ಲಿ ಪ್ರಮುಖ ಬದಲಾವಣೆಗಳು ಕೂಡ ನಡೆದಿವೆ. ಕಠಿಣ ಶಿಕ್ಷೆಗೆ ಗುರಿಯಾಗುವ ಭೀತಿಯಿಂದ ಬ್ಯುಟಿ ಪಾರ್ಲರ್, ಸಲೂನ್, ಬಟ್ಟೆ, ಆಭರಣ, ಪ್ಲಾಸ್ಟಿಕ್ ಸರ್ಜರಿ ಸೇರಿದಂತೆ ಹಲವು ಮಳಿಗೆಗಳ ಮುಂದೆ ಹಾಕಲಾಗಿದ್ದ ಮಹಿಳೆಯ ಫೋಟೊಗಳನ್ನು ತೆಗೆದು ಹಾಕಲಾಗುತ್ತಿದೆ. ಕೆಲವು ಟಿವಿ ವಾಹಿನಿಗಳು ಈ ಮೊದಲು ಪ್ರಸಾರ ಮಾಡುತ್ತಿದ್ದ ಧಾರವಾಹಿಗಳನ್ನು ಬದಲಿಸದ್ದು, ಇಸ್ಲಾಂ ಧರ್ಮಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಮಾತ್ರ ಬಿತ್ತರಿಸುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Terrorist Organization: ಹಮಾಸ್ ಉಗ್ರ ನಾಯಕ ಯಾಹ್ಯಾ ಸಿನ್ವರ್ ಹತ್ಯೆ
National Day Celebration: ಬಾಂಗ್ಲಾದೇಶ ಸ್ಥಾಪಕ ಮುಜಿಬುರ್ ಸ್ಮರಣೆಗೆ ಸರಕಾರ ಕೊಕ್
Bangladesh ; ಶೇಖ್ ಹಸೀನಾ ಬಂಧನಕ್ಕೆ ಗಡುವು ವಿಧಿಸಿದ ನ್ಯಾಯಮಂಡಳಿ
Argentina: ಹೋಟೆಲ್ ಬಾಲ್ಕನಿಯ 3ನೇ ಮಹಡಿಯಿಂದ ಬಿದ್ದು ಖ್ಯಾತ ಗಾಯಕ ಮೃತ್ಯು
Oxford University: ಆಕ್ಸ್ಫರ್ಡ್ ವಿವಿ ಕುಲಪತಿ ಹುದ್ದೆ… ಭಾರತ ಮೂಲದವರು ರೇಸ್ನಲ್ಲಿ
MUST WATCH
ಹೊಸ ಸೇರ್ಪಡೆ
INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್
Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ
UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು
Manipal ಪರಿಸರದ 15-20 ಪಕ್ಷಿ ಪ್ರಭೇದ ಕಣ್ಮರೆ; ಇ ಬರ್ಡ್ ಪೋರ್ಟಲ್ನಲ್ಲಿ ದಾಖಲಾತಿ
Shirva: ಹುಲಿ ವೇಷ ಹಾಕಿ ಅನಾರೋಗ್ಯಪೀಡಿತ ಬಾಲಕನಿಗೆ ನೆರವು ನೀಡಿದ ಪೋರರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.