Viral Video: ಅರೇಬಿಕ್‌ ಬರಹದ ಉಡುಪು ಧರಿಸಿದ್ದ ಮಹಿಳೆಯನ್ನು ತರಾಟೆಗೆ ತೆಗೆದುಕೊಂಡ ಗುಂಪು


Team Udayavani, Feb 26, 2024, 10:53 AM IST

Viral Video: ಅರೇಬಿಕ್‌ ಬರಹದ ಉಡುಪು ಧರಿಸಿದ್ದ ಮಹಿಳೆಯನ್ನು ತರಾಟೆಗೆ ತೆಗೆದುಕೊಂಡ ಗುಂಪು

ಲಾಹೋರ್: ಮಹಿಳೆಯೊಬ್ಬರು ಅರೇಬಿಕ್‌ ಬರಹದ ಉಡುಪನ್ನು ಧರಿಸಿ ಬಂದಿದ್ದಕ್ಕಾಗಿ ಗುಂಪೊಂದು ತರಾಟೆಗೆ ತೆಗೆದುಕೊಂಡಿರುವ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಪಾಕಿಸ್ತಾನದ ಲಾಹೋರ್‌ನಲ್ಲಿ ಮಹಿಳೆಯೊಬ್ಬರು ಅರೇಬಿಕ್ ಭಾಷೆಯ ಮುದ್ರಣದ ಬರಹವಿರುವ ಉಡುಪನ್ನು ಧರಿಸಿಕೊಂಡು ತನ್ನ ಪತಿಯೊಂದಿಗೆ ಶಾಪಿಂಗ್‌ ಮಾಲ್‌ ಗೆ ಬಂದಿದ್ದಾರೆ. ರೆಸ್ಟೋರೆಂಟ್ ನಲ್ಲಿ ಕೂತಿದ್ದ ವೇಳೆ ಗುಂಪೊಂದು ಬಂದು ಮಹಿಳೆಯನ್ನು ತರಾಟೆ ತೆಗೆದುಕೊಂಡಿದೆ.

ನಿಮ್ಮ ಬಟ್ಟೆಯ ಮೇಲೆ ಕುರಾನ್‌ ಶ್ಲೋಕಗಳಿವೆ. ನೀವು ಇದನ್ನು ಧರಿಸಿ ಸಮುದಾಯವನ್ನು ಅವಮಾನ ಮಾಡುತ್ತಿದ್ದೀರಿ ಎಂದು ಹೇಳಿ ಗುಂಪು ಆಕೆ ಧರಿಸಿದ್ದ ಅಂಗಿಯನ್ನು ತೆಗೆಯುವಂತೆ ಆಗ್ರಹಿಸಿದೆ.

ಪರಿಸ್ಥಿತಿ ವಿಕೋಪಕ್ಕೆ ತಿರುಗುವ ವೇಳೆ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ಮಹಿಳಾ ಎಎಸ್ಪಿ ಸೈಯದಾ ಶೆಹರ್ಬಾನೊ ನಖ್ವಿ ಅವರು ಪರಿಸ್ಥಿತಿಯನ್ನು ತಿಳಿಗೊಳಿಸಿ ಮಹಿಳೆಯನ್ನು ಕಸ್ಟಡಿಗೆ ಕರೆದುಕೊಂಡು ಹೋಗಿದ್ದಾರೆ.

ಮಹಿಳೆ ತಾನು ಧರಿಸಿದ್ದ ಅಂಗಿಯು ಕೇವಲ ಅರೇಬಿಕ್ ಪದಗಳನ್ನು ಒಳಗೊಂಡಿದೆ. ಇದರಲ್ಲಿ ಯಾವುದೇ ಕುರಾನ್‌ ಶ್ಲೋಕಗಳ ಅರ್ಥವಿಲ್ಲ ಎಂದು ಹೇಳಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಘಟನೆಯ ವಿಡಿಯೋ ವೈರಲ್‌ ಆಗಿದ್ದು, ಈ ಎಎಸ್ಪಿ ಸಮಯಕ್ಕೆ ಸರಿಯಾಗಿ ರಕ್ಷಿಸದಿದ್ದರೆ ಧರ್ಮದ ಹೆಸರಿನಲ್ಲಿ ಈ ಮಹಿಳೆಯನ್ನು ಹತ್ಯೆ ಮಾಡಲಾಗುತ್ತಿತ್ತು ಎಂದು ಒಬ್ಬರು ಬರೆದುಕೊಂಡಿದ್ದಾರೆ.

ಇನ್ನು ಅನೇಕರು ಮಹಿಳೆಯ ಪರವಾಗಿ ಪೋಸ್ಟ್‌ ಹಾಕಿದ್ದಾರೆ. “ಮಹಿಳೆಯ ಅಂಗಿಯ ಮೇಲೆ ಅರೇಬಿಕ್ ಭಾಷೆಯಲ್ಲಿ ಹೆಸರುಗಳಿದ್ದ ಕಾರಣ ಜನರು ಸುತ್ತುವರೆದಿದ್ದರು. ಇದನ್ನು ಕೆಲವರು ಕುರಾನ್ ಶ್ಲೋಕಗಳೆಂದು ಹೇಳುತ್ತಿದ್ದಾರೆ. ವಾಸ್ತವವಾಗಿ, ಇದು ಕುರಾನ್‌ ಶ್ಲೋಕಗಳಲ್ಲ.ಇದು ಕೇವಲ ಸರಳವಾದ ಅರೇಬಿಕ್ ಪದಗಳು ಧರ್ಮಕ್ಕೆ ಸಂಬಂಧಿಸಿಲ್ಲ ಎಂದು ಒಬ್ಬರು ಬರೆದುಕೊಂಡಿದ್ದಾರೆ.

ಆನ್ಲೈನ್‌ ನಲ್ಲಿ ಸಿಗುವ ಈ ಬಟ್ಟೆಯ ಫೋಟೋವನ್ನು ಬಳಕೆದಾರರೊಬ್ಬರು ಹಂಚಿಕೊಂಡಿದ್ದಾರೆ.

ಮಹಿಳೆಯನ್ನು ಕಸ್ಟಡಿಗೆ ತೆಗೆದುಕೊಂಡ ನಂತರ, ಯಾರನ್ನೂ ಕೋಪಗೊಳಿಸುವ ಉದ್ದೇಶವಿಲ್ಲ ಎಂದು ಮಹಿಳೆ ಪೊಲೀಸ್‌ ಠಾಣೆಯಲ್ಲಿ ಮೌಲ್ವಿಯೊಬ್ಬರ ಮುಂದೆ ಕ್ಷಮೆಯಾಚಿಸಿದ್ದಾರೆ.

 

ಟಾಪ್ ನ್ಯೂಸ್

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

ISREL

Israel- ಹೆಜ್ಬುಲ್ಲಾ ನಡುವೆ ಬಾಂಬ್‌ಗಳ ಸುರಿಮಳೆ! ; 100 ರಾಕೆಟ್‌ ಲಾಂಚರ್‌ ಧ್ವಂಸ

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Chinese Zoo: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ…

China: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ: ಬೌ.. ಬೌ.. ಎಂದಾಗಲೇ ಗೊತ್ತು

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.