ಇಮ್ರಾನ್ ಖಾನ್ ಗೆ ಮುಖಭಂಗ: ಅನರ್ಹತೆ ವಿರುದ್ಧ ಸಲ್ಲಿಸಿದ ಮೇಲ್ಮನವಿ ವಜಾಗೊಳಿಸಿದ ಕೋರ್ಟ್
Team Udayavani, Oct 24, 2022, 3:43 PM IST
ಇಸ್ಲಾಮಾಬಾದ್ : ಸಂಸದ ಸ್ಥಾನದಿಂದ ತನ್ನನ್ನು ಅನರ್ಹಗೊಳಿಸಿದ ಪಾಕಿಸ್ತಾನ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಲ್ಲಿಸಿದ ಮೇಲ್ಮನವಿಯನ್ನು ಪಾಕಿಸ್ತಾನ ಕೋರ್ಟ್ ಸೋಮವಾರ (ಅಕ್ಟೋಬರ್ 24) ವಜಾಗೊಳಿಸಿದೆ.
ವಾಸ್ತವವಾಗಿ, ಚುನಾವಣಾ ಆಯೋಗವು ತೋಷ್ಖಾನಾ ಪ್ರಕರಣದಲ್ಲಿ ಇಮ್ರಾನ್ ಖಾನ್ ಅವರನ್ನು ಮುಂದಿನ ಐದು ವರ್ಷಗಳವರೆಗೆ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಅನರ್ಹಗೊಳಿಸಿತ್ತು.
ಈ ಅರ್ಜಿಯಲ್ಲಿ, ಅನರ್ಹತೆಯ ನಿರ್ಧಾರವನ್ನು ತಕ್ಷಣವೇ ಅಮಾನತುಗೊಳಿಸುವಂತೆ ಇಮ್ರಾನ್ ಖಾನ್ ಮನವಿ ಮಾಡಿದ್ದರು. ಆದರೆ ನ್ಯಾಯಾಲಯವು ಇಮ್ರಾನ್ ಖಾನ್ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿದೆ.
ಬೆಲೆಬಾಳುವ ಉಡುಗೊರೆಗಳ ಮಾರಾಟದಿಂದ ಬಂದ ಹಣವನ್ನು ಬಚ್ಚಿಟ್ಟ ಆರೋಪದಲ್ಲಿ ಇಮ್ರಾನ್ ಖಾನ್ ಅವರನ್ನು ಐದು ವರ್ಷಗಳ ಕಾಲ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಪಾಕಿಸ್ತಾನದ ಚುನಾವಣಾ ಆಯೋಗ (ಇಸಿಪಿ) ಶುಕ್ರವಾರ (ಅಕ್ಟೋಬರ್ 21) ನಿರ್ಬಂಧಿಸಿದೆ.
ಈ ಸಂಬಂಧ ಇಮ್ರಾನ್ ಅವರು ತಮ್ಮ ವಕೀಲ ಬ್ಯಾರಿಸ್ಟರ್ ಅಲಿ ಜಾಫರ್ ಮೂಲಕ ಇಸ್ಲಾಮಾಬಾದ್ ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಈ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ ಇಂದು ವಿಚಾರಣೆ ನಡೆಸಿತು. ತೋಷಖಾನಾಗೆ ಉಡುಗೊರೆಯಾಗಿ ನೀಡಿದ್ದ ಮೂರು ವಾಚ್ ಗಳನ್ನು ಇಮ್ರಾನ್ ಖಾನ್ ಸ್ಥಳೀಯ ವಾಚ್ ಡೀಲರ್ ಗೆ 15.4 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಮಾರಾಟ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Porsche Crash: ಆ ಒಂದು ಘಟನೆಯಿಂದ ಬಾಲಕನಿಗೆ ಯಾವುದೇ ಕಾಲೇಜಿನಲ್ಲಿ ಸೀಟು ಸಿಕ್ತಿಲ್ಲ
Udupi: ರಸ್ತೆ ಮಾರ್ಜಿನ್ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.
Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ
Significant Agreement: ವನ-ವನ್ಯಜೀವಿ ಸಂರಕ್ಷಣೆಗೆ ಯತ್ನ: ಸಚಿವ ಈಶ್ವರ ಖಂಡ್ರೆ
Congress Government: ಪೊಲೀಸ್ ಅಧಿಕಾರಿಗಳ ವಿರುದ್ಧ ಇಂದು ಎಚ್ಡಿಕೆ ದಾಖಲೆ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.