![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Nov 9, 2019, 2:20 PM IST
ಇಸ್ಲಾಮಾಬಾದ್: ಬಹುನಿರೀಕ್ಷಿತ ಹಾಗೂ ರಾಜಕೀಯವಾಗಿ ಸೂಕ್ಷ್ಮವಾಗಿರುವ ರಾಮಜನ್ಮಭೂಮಿ-ಬಾಬ್ರಿ ಮಸೀದಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಪಂಚಸದಸ್ಯ ಸಾಂವಿಧಾನಿಕ ಪೀಠ ಶನಿವಾರ ಪ್ರಕಟಿಸಿರುವ ಸರ್ವಾನುಮತದ ತೀರ್ಪಿಗೆ ಪ್ರಧಾನಿ ನರೇಂದ್ರ ಮೋದಿ, ಆರ್ ಎಸ್ ಎಸ್ ವರಿಷ್ಠ ಮೋಹನ್ ಭಾಗವತ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಹುತೇಕ ಗಣ್ಯರು ಸ್ವಾಗತಿಸಿದ್ದಾರೆ. ಏತನ್ಮಧ್ಯೆ ಅಯೋಧ್ಯೆ ತೀರ್ಪಿನ ಬಗ್ಗೆ ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮಹಮೂದ್ ಖುರೇಶಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಕರ್ತಾಪುರ್ ಕಾರಿಡಾರ್ ಉದ್ಘಾಟನೆಯ ದಿನದಂದೇ ಅಯೋಧ್ಯೆ ತೀರ್ಪು ಪ್ರಕಟವಾಗಿದ್ದು ಕಾಕತಾಳೀಯ ಎಂದು ಹೇಳಿರುವ ಖುರೇಷಿ, ಇದು ತುಂಬಾ ದುಃಖಕರ ಸಂಗತಿಯಾಗಿದೆ. ಇಂತಹ ಉದ್ಘಾಟನಾ ಕಾರ್ಯಕ್ರಮದ ವೇಳೆ ಸೂಕ್ಷ್ಮತೆ ರಹಿತವಾಗಿ ವರ್ತಿಸಲಾಗಿದೆ ಎಂದು ಅಭಿಪ್ರಾಯವ್ಯಕ್ತಪಡಿಸಿರುವುದಾಗಿ ವರದಿ ತಿಳಿಸಿದೆ.
ಕರ್ತಾಪುರ್ ಕಾರಿಡಾರ್ ಉದ್ಘಾಟನೆಯ ದಿನವೇ ಅಯೋಧ್ಯೆ ತೀರ್ಪು ಪ್ರಕಟಿಸುವ ತುರ್ತು ಏನಿತ್ತು. ತೀರ್ಪು ನೀಡಲು ಕೆಲವು ದಿನ ವಿಳಂಬ ಮಾಡಬಹುದಿತ್ತು. ನಿಜಕ್ಕೂ ಇದೊಂದು ನೋವಿನ ಸಂಗತಿ ಎಂದು ಪ್ರತಿಕ್ರಿಯೆ ನೀಡಿರುವುದಾಗಿ ಡಾನ್ ನ್ಯೂಸ್ ಟಿವಿ ವರದಿ ಮಾಡಿದೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
You seem to have an Ad Blocker on.
To continue reading, please turn it off or whitelist Udayavani.