![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Aug 21, 2019, 3:14 PM IST
ಇಸ್ಲಾಮಾಬಾದ್: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಭಾರತ ರದ್ದುಗೊಳಿಸಿದ ಬೆನ್ನಲ್ಲೇ ಗೋಳಿಡುತ್ತಿರುವ ಪಾಕಿಸ್ಥಾನ ಚೀನ ಮೂಲಕ ವಿಶ್ವಸಂಸ್ಥೆಗೆ ದೂರು ತೆಗೆದುಕೊಂಡು ಹೋಗಿದ್ದರೂ ವಿಫಲವಾದ ಹಿನ್ನೆಲೆಯಲ್ಲಿ ಇದೀಗ ಅಂತಾರಾಷ್ಟ್ರೀಯ ಕೋರ್ಟ್ಗೆ (ಐಸಿಜೆ) ಹೋಗಲು ಮುಂದಾಗಿದೆ.
ಕಾಶ್ಮೀರ ವಿಚಾರದಲ್ಲಿ ನಾವು ಕೋರ್ಟ್ಗೆ ಹೋಗಲು ತೀರ್ಮಾನಿಸಿದ್ದೇವೆ ಎಂದು ಪಾಕ್ ವಿದೇಶಾಂಗ ಸಚಿವ ಶಾ ಮಹಮ್ಮದ್ ಖುರೇಶಿ ಅಲ್ಲಿನ ಚಾನೆಲೊಂದಕ್ಕೆ ಹೇಳಿಕೆ ನೀಡಿದ್ದಾರೆ. ಈ ಕುರಿತಂತೆ ಕಾನೂನು ಸಾಧ್ಯತೆಗಳ ಬಗ್ಗೆ ಇದೀಗ ಚಿಂತಿಸಲಾಗುತ್ತಿದೆ ಎಂದೂ ಹೇಳಿದ್ದಾರೆ.
ಕಾಶ್ಮೀರಕ್ಕೆ ಸ್ಥಾನಮಾನ ರದ್ದುಗೊಳಿಸಿದ ಬಳಿಕ ಪಾಕಿಸ್ಥಾನ ನಿದ್ದೆಯಿಲ್ಲದ ರಾತ್ರಿಗಳನ್ನು ಕಳೆಯುತ್ತಿದ್ದು, ವಿವಿಧ ದೇಶಗಳ ಮುಂದೆ ಭಾರತದ ವಿರುದ್ಧ ಕ್ರಮಕ್ಕೆ ಅಂಗಲಾಚುತ್ತಿದೆ. ಆದರೆ ಈ ವರೆಗೆ ಯಾವುದೇ ದೇಶಗಳು ಅದರ ಯಾವುದೇ ಕೇಳಿಕೆಗೂ ಸೊಪ್ಪು ಹಾಕುತ್ತಿಲ್ಲ. ವಿಶ್ವಸಂಸ್ಥೆಯಲ್ಲಿ ಗುಪ್ತ ಸಭೆ ನಡೆಸಿದ್ದರೂ, ಅಲ್ಲಿ ಯಾವುದೇ ತೀರ್ಮಾನ, ಕನಿಷ್ಠ ಸಭೆಯ ಬಗ್ಗೆ ವರದಿಯನ್ನೂ ನೀಡಿರಲಿಲ್ಲ. ಇದರಿಂದ ಪಾಕಿಸ್ಥಾನ ಈಗ ಅಂ.ರಾ. ಕೋರ್ಟ್ಗೆ ಹೋಗಲು ನಿರ್ಧರಿಸಿದೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
You seem to have an Ad Blocker on.
To continue reading, please turn it off or whitelist Udayavani.