POK: ಪಾಕ್‌ ದೌರ್ಜನ್ಯ; 3 ಸಾವು; ಸತತ 5ನೇ ದಿನವೂ ವ್ಯಾಪಕ ಹಿಂಸಾಚಾರ; ಸೇನೆಯಿಂದ ಗೋಲಿಬಾರ್‌


Team Udayavani, May 15, 2024, 6:50 AM IST

POK: ಪಾಕ್‌ ದೌರ್ಜನ್ಯ; 3 ಸಾವು; ಸತತ 5ನೇ ದಿನವೂ ವ್ಯಾಪಕ ಹಿಂಸಾಚಾರ; ಸೇನೆಯಿಂದ ಗೋಲಿಬಾರ್‌

ಇಸ್ಲಾಮಾಬಾದ್‌: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಾಕ್‌ ಸರಕಾರದ ವಿರುದ್ಧ ಪಾಕ್‌ ಆಕ್ರಮಿತ ಕಾಶ್ಮೀರ (ಪಿಒಕೆ)ದ ಜನರು ನಡೆಸುತ್ತಿರುವ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದೆ. ಸತತ 5ನೇ ದಿನವೂ ವ್ಯಾಪಕ ಪ್ರತಿಭಟನೆ ಮುಂದುವರಿದಿದ್ದು, ನಾಗರಿಕರ ಮೇಲೆ ಪಾಕ್‌ ಸೇನೆಯ ದೌರ್ಜನ್ಯ ಮಿತಿಮೀರಿದೆ.

ಮಂಗಳವಾರ ಪ್ರತಿಭಟನಕಾರರ ಮೇಲೆ ಪಾಕ್‌ ಸೇನೆ ಗೋಲಿಬಾರ್‌ ನಡೆಸಿದ್ದು, ಮೂವರು ಮೃತ ಪಟ್ಟು, 6 ಮಂದಿ ಗಾಯಗೊಂಡಿದ್ದಾರೆ. ಸಂಘರ್ಷ ದಲ್ಲಿ ಮೃತರ ಸಂಖ್ಯೆ 4ಕ್ಕೆ ಏರಿದೆ.

ಮೇ 10ರಿಂದ ಆರಂಭವಾಗಿರುವ ಪ್ರತಿಭಟನೆಯನ್ನು ನಿಯಂತ್ರಿಸಲು ಪಾಕ್‌ ಸರಕಾರವು ಪ್ರತಿಭಟನೆಗ್ರಸ್ತ ಪ್ರದೇಶದಲ್ಲಿ ಅರೆಸೇನಾ ಪಡೆಯನ್ನು ನಿಯೋಜಿಸಿತ್ತು. ಈ ಪಡೆಗಳು ವಾಪಸಾಗುತ್ತಿದ್ದಂತೆ ಮತ್ತೆ ಹಿಂಸಾಚಾರ ನಡೆದಿದೆ.

ಅರೆ ಸೇನಾಪಡೆಗಳ 5 ಟ್ರಕ್‌ ಮತ್ತು 19 ಬೆಂಗಾವಲು ವಾಹನಗಳು ಖೈಬರ್‌ ಪಖು¤ಂಖ್ವಾ ಗಡಿಯ ಬ್ರಾರ್‌ಕೋಟ ಹಳ್ಳಿಯಿಂದ ಹೊರ ಹೋಗುವ ಬದಲು ಕೋಹಲಾ ಮೂಲಕ ತೆರಳುವ ಪ್ರಯತ್ನ ಮಾಡಿದವು. ಪಡೆಗಳು ಪಿಒಕೆ ರಾಜಧಾನಿ ಮುಜಪ#ರಾಬಾದ್‌ನ ಶೋರಾನ್‌ ದಾ ನಕ್ಕಾ ಹಳ್ಳಿಯನ್ನು ಸಮೀಪಿಸುತ್ತಿದ್ದಂತೆ ಕಲ್ಲುತೂರಾಟ ನಡೆಯಿತು. ಆಗ ಪಡೆಗಳು ಅಶ್ರುವಾಯು ಸಿಡಿಸಿ ಗುಂಡು ಹಾರಿಸಿದವು. ಬಳಿಕ ಪಡೆಗಳು ವೆಸ್ಟರ್ನ್ ಬೈಪಾಸ್‌ ಮೂಲಕ ನಗರವನ್ನು ಪ್ರವೇಶಿಸುತ್ತಿದ್ದಂತೆ ಮತ್ತೆ ಕಲ್ಲು ತೂರಾಟ ನಡೆಯಿತು. ಪ್ರತಿಭಟನಕಾರರನ್ನು ನಿಯಂತ್ರಿಸಲು ಮತ್ತೆ ಗುಂಡು ಹಾರಿಸಲಾಯಿತು. ಈ ವೇಳೆ ಕನಿಷ್ಠ ಮೂವರು ಮೃತಪಟ್ಟು 6 ಜನರು ಗಾಯಗೊಂಡಿದ್ದಾರೆ ಎಂದು ಸರ್ದಾರ್‌ ಅದ್ನಾನ್‌ ಖುರ್ಷಿದ್‌ ತಿಳಿಸಿದ್ದಾರೆ.

ಪ್ರತಿಭಟನಕಾರರು ಅರೆಸೇನಾ ಪಡೆಯನ್ನು ಬೆನ್ನುಹತ್ತಿ ಕಲ್ಲು ತೂರಾಟ ನಡೆಸುವ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ. ಶವಗಳನ್ನು ಅವರ ಸಂಬಂಧಿಕರಿಗೆ ಹಸ್ತಾಂತರಿಸಲಾಗಿದ್ದು, ಸರಕಾರವು ಆರ್ಥಿಕ ನೆರವು ನೀಡಬೇಕು ಎಂದು ಜೆಎಎಸಿ ಒತ್ತಾಯಿಸಿದೆ.

ಬೆಲೆ ಇಳಿಕೆ ಮಾಡಿದ ಸರಕಾರ
ಪ್ರತಿಭಟನೆಯ ಹಿನ್ನೆಲೆಯಲ್ಲಿ ಪಾಕ್‌ ಸರಕಾರವು 40 ಕೆ.ಜಿ. ಗೋಧಿ ಹಿಟ್ಟಿನ ಬೆಲೆಯನ್ನು 3,100 ಪಾಕಿಸ್ಥಾನಿ ರೂ.ಗಳಿಂದ 2,000 ರೂ.ಗೆ ಇಳಿಕೆ ಮಾಡಿದೆ. ಅದೇ ರೀತಿ, 100, 200 ಮತ್ತು 300ಕ್ಕಿಂತ ಅಧಿಕ ಯುನಿಟ್‌ ವಿದ್ಯುತ್‌ ಬಳಕೆಗೆ ಕ್ರಮವಾಗಿ ಪ್ರತೀ ಯುನಿಟ್‌ಗೆ 3 ರೂ., 5 ರೂ., 6 ರೂ. ಇಳಿಕೆ ಮಾಡಿದೆ. ಸೋಮವಾರ ಕೂಡ ಪಿಒಕೆಗಾಗಿ ಪ್ರಧಾನಿ ಶಹಬಾಜ್‌ ಷರೀಫ್ 2,300 ಕೋಟಿ ರೂ. ಪರಿಹಾರ ಘೋಷಣೆ ಮಾಡಿದ್ದರು.

ಪ್ರತಿಭಟನೆ ವಾಪಸ್‌?
ಬೆಲೆ ಇಳಿಕೆ ಪ್ರಕಟಿಸುತ್ತಿದ್ದಂತೆ ಪ್ರತಿಭಟನೆಯನ್ನು ವಾಪಸ್‌ ಪಡೆಯುವ ಕುರಿತು ನಿರ್ಧರಿಸಲಾಗುವುದು ಎಂದು ಜಮ್ಮು -ಕಾಶ್ಮೀರ ಜಂಟಿ ಅವಾಮಿ ಕ್ರಿಯಾ ಸಮಿತಿ (ಜೆಎಎಸಿ) ಮುಖ್ಯಸ್ಥ ಶೌಕತ್‌ ನವಾಜ್‌ ಮಿರ್‌ ಸೋಮವಾರ ಹೇಳಿದ್ದರು. ಪಿಒಕೆ ಬೇಡಿಕೆ ಕುರಿತಾದ ಸರಕಾರದ ಅಧಿಸೂಚನೆ ಮಂಗಳವಾರ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಕೂಡ ಆಯಿತು. ಅಲ್ಲದೆ ಪ್ರತಿಭಟನಕಾರರ ಎಲ್ಲ ಬೇಡಿಕೆಗಳನ್ನು ಈಡೇರಿಸಲು ಸರಕಾರ ಒಪ್ಪಿಕೊಂಡಿದ್ದರಿಂದ ಪ್ರತಿಭಟನೆಯನ್ನು ಕೈಬಿಡಲಾಗಿದೆ ಎಂದು ಅವರು ತಿಳಿಸಿದರು.

ವಿಶ್ವಸಂಸ್ಥೆಯಲ್ಲಿ ದನಿ ಎತ್ತಲು
ಕಾಶ್ಮೀರ ಬಿಜೆಪಿ ಘಟಕ ಆಗ್ರಹ
ಜಮ್ಮು: ಪಿಒಕೆಯಲ್ಲಿ ಪಾಕಿಸ್ಥಾನಿ ಸೇನೆ ನಡೆಸುತ್ತಿರುವ ದೌರ್ಜನ್ಯದ ಕುರಿತು ವಿಶ್ವ ಸಂಸ್ಥೆಯಲ್ಲಿ ಕೇಂದ್ರ ಸರಕಾರವು ದನಿ ಎತ್ತಬೇಕು ಎಂದು ಜಮ್ಮು -ಕಾಶ್ಮೀರದ ಬಿಜೆಪಿ ಘಟಕದ ಅಧ್ಯಕ್ಷ ರವಿಂದೇರ್‌ ರೈನಾ ಆಗ್ರಹಿಸಿದ್ದಾರೆ. ಜತೆಗೆ ಪಿಒಕೆ ಜನರಿಗೆ ಕೇಂದ್ರ ಸರಕಾರವು ರೇಷನ್‌ ಕಳುಹಿಸಿಕೊಡಬೇಕು ಎಂದಿದ್ದಾರೆ. ರಜೌರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಪಿಒಕೆಯ ಜನರೊಂದಿಗೆ ಇದ್ದೇವೆ. ನಮ್ಮ ಸಹೋದರ-ಸಹೋದರಿಯರಾಗಿರುವ ಪಿಒಕೆ ಮಂದಿ ನಮ್ಮ ನಾಗರಿಕರು ಎಂದಿದ್ದಾರೆ.

ಟಾಪ್ ನ್ಯೂಸ್

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

India: ಮೊದಲು ಗಡಿ ಭಯೋತ್ಪಾದನೆ ನಿಲ್ಲಿಸಿ-ವಿಶ್ವಸಂಸ್ಥೆಯಲ್ಲಿ ಪಾಕ್‌ ಗೆ ಭಾರತದ ಚಾಟಿ

India: ಮೊದಲು ಗಡಿ ಭಯೋತ್ಪಾದನೆ ನಿಲ್ಲಿಸಿ-ವಿಶ್ವಸಂಸ್ಥೆಯಲ್ಲಿ ಪಾಕ್‌ ಗೆ ಭಾರತದ ಚಾಟಿ

1-dert

China; ಮುಳುಗಿದ ಅಣ್ವಸ್ತ್ರ ಸಬ್‌ಮರೀನ್‌! : ಅಮೆರಿಕ ಮಾಹಿತಿ 

1-kaidi

Prisoner; ಅತೀ ಹೆಚ್ಚು ಕಾಲ ಜೈಲಿನಲ್ಲಿದ್ದ ಕೈದಿಯ ಬಿಡುಗಡೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.