POK: ಪಾಕ್‌ ದೌರ್ಜನ್ಯ; 3 ಸಾವು; ಸತತ 5ನೇ ದಿನವೂ ವ್ಯಾಪಕ ಹಿಂಸಾಚಾರ; ಸೇನೆಯಿಂದ ಗೋಲಿಬಾರ್‌


Team Udayavani, May 15, 2024, 6:50 AM IST

POK: ಪಾಕ್‌ ದೌರ್ಜನ್ಯ; 3 ಸಾವು; ಸತತ 5ನೇ ದಿನವೂ ವ್ಯಾಪಕ ಹಿಂಸಾಚಾರ; ಸೇನೆಯಿಂದ ಗೋಲಿಬಾರ್‌

ಇಸ್ಲಾಮಾಬಾದ್‌: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಾಕ್‌ ಸರಕಾರದ ವಿರುದ್ಧ ಪಾಕ್‌ ಆಕ್ರಮಿತ ಕಾಶ್ಮೀರ (ಪಿಒಕೆ)ದ ಜನರು ನಡೆಸುತ್ತಿರುವ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದೆ. ಸತತ 5ನೇ ದಿನವೂ ವ್ಯಾಪಕ ಪ್ರತಿಭಟನೆ ಮುಂದುವರಿದಿದ್ದು, ನಾಗರಿಕರ ಮೇಲೆ ಪಾಕ್‌ ಸೇನೆಯ ದೌರ್ಜನ್ಯ ಮಿತಿಮೀರಿದೆ.

ಮಂಗಳವಾರ ಪ್ರತಿಭಟನಕಾರರ ಮೇಲೆ ಪಾಕ್‌ ಸೇನೆ ಗೋಲಿಬಾರ್‌ ನಡೆಸಿದ್ದು, ಮೂವರು ಮೃತ ಪಟ್ಟು, 6 ಮಂದಿ ಗಾಯಗೊಂಡಿದ್ದಾರೆ. ಸಂಘರ್ಷ ದಲ್ಲಿ ಮೃತರ ಸಂಖ್ಯೆ 4ಕ್ಕೆ ಏರಿದೆ.

ಮೇ 10ರಿಂದ ಆರಂಭವಾಗಿರುವ ಪ್ರತಿಭಟನೆಯನ್ನು ನಿಯಂತ್ರಿಸಲು ಪಾಕ್‌ ಸರಕಾರವು ಪ್ರತಿಭಟನೆಗ್ರಸ್ತ ಪ್ರದೇಶದಲ್ಲಿ ಅರೆಸೇನಾ ಪಡೆಯನ್ನು ನಿಯೋಜಿಸಿತ್ತು. ಈ ಪಡೆಗಳು ವಾಪಸಾಗುತ್ತಿದ್ದಂತೆ ಮತ್ತೆ ಹಿಂಸಾಚಾರ ನಡೆದಿದೆ.

ಅರೆ ಸೇನಾಪಡೆಗಳ 5 ಟ್ರಕ್‌ ಮತ್ತು 19 ಬೆಂಗಾವಲು ವಾಹನಗಳು ಖೈಬರ್‌ ಪಖು¤ಂಖ್ವಾ ಗಡಿಯ ಬ್ರಾರ್‌ಕೋಟ ಹಳ್ಳಿಯಿಂದ ಹೊರ ಹೋಗುವ ಬದಲು ಕೋಹಲಾ ಮೂಲಕ ತೆರಳುವ ಪ್ರಯತ್ನ ಮಾಡಿದವು. ಪಡೆಗಳು ಪಿಒಕೆ ರಾಜಧಾನಿ ಮುಜಪ#ರಾಬಾದ್‌ನ ಶೋರಾನ್‌ ದಾ ನಕ್ಕಾ ಹಳ್ಳಿಯನ್ನು ಸಮೀಪಿಸುತ್ತಿದ್ದಂತೆ ಕಲ್ಲುತೂರಾಟ ನಡೆಯಿತು. ಆಗ ಪಡೆಗಳು ಅಶ್ರುವಾಯು ಸಿಡಿಸಿ ಗುಂಡು ಹಾರಿಸಿದವು. ಬಳಿಕ ಪಡೆಗಳು ವೆಸ್ಟರ್ನ್ ಬೈಪಾಸ್‌ ಮೂಲಕ ನಗರವನ್ನು ಪ್ರವೇಶಿಸುತ್ತಿದ್ದಂತೆ ಮತ್ತೆ ಕಲ್ಲು ತೂರಾಟ ನಡೆಯಿತು. ಪ್ರತಿಭಟನಕಾರರನ್ನು ನಿಯಂತ್ರಿಸಲು ಮತ್ತೆ ಗುಂಡು ಹಾರಿಸಲಾಯಿತು. ಈ ವೇಳೆ ಕನಿಷ್ಠ ಮೂವರು ಮೃತಪಟ್ಟು 6 ಜನರು ಗಾಯಗೊಂಡಿದ್ದಾರೆ ಎಂದು ಸರ್ದಾರ್‌ ಅದ್ನಾನ್‌ ಖುರ್ಷಿದ್‌ ತಿಳಿಸಿದ್ದಾರೆ.

ಪ್ರತಿಭಟನಕಾರರು ಅರೆಸೇನಾ ಪಡೆಯನ್ನು ಬೆನ್ನುಹತ್ತಿ ಕಲ್ಲು ತೂರಾಟ ನಡೆಸುವ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ. ಶವಗಳನ್ನು ಅವರ ಸಂಬಂಧಿಕರಿಗೆ ಹಸ್ತಾಂತರಿಸಲಾಗಿದ್ದು, ಸರಕಾರವು ಆರ್ಥಿಕ ನೆರವು ನೀಡಬೇಕು ಎಂದು ಜೆಎಎಸಿ ಒತ್ತಾಯಿಸಿದೆ.

ಬೆಲೆ ಇಳಿಕೆ ಮಾಡಿದ ಸರಕಾರ
ಪ್ರತಿಭಟನೆಯ ಹಿನ್ನೆಲೆಯಲ್ಲಿ ಪಾಕ್‌ ಸರಕಾರವು 40 ಕೆ.ಜಿ. ಗೋಧಿ ಹಿಟ್ಟಿನ ಬೆಲೆಯನ್ನು 3,100 ಪಾಕಿಸ್ಥಾನಿ ರೂ.ಗಳಿಂದ 2,000 ರೂ.ಗೆ ಇಳಿಕೆ ಮಾಡಿದೆ. ಅದೇ ರೀತಿ, 100, 200 ಮತ್ತು 300ಕ್ಕಿಂತ ಅಧಿಕ ಯುನಿಟ್‌ ವಿದ್ಯುತ್‌ ಬಳಕೆಗೆ ಕ್ರಮವಾಗಿ ಪ್ರತೀ ಯುನಿಟ್‌ಗೆ 3 ರೂ., 5 ರೂ., 6 ರೂ. ಇಳಿಕೆ ಮಾಡಿದೆ. ಸೋಮವಾರ ಕೂಡ ಪಿಒಕೆಗಾಗಿ ಪ್ರಧಾನಿ ಶಹಬಾಜ್‌ ಷರೀಫ್ 2,300 ಕೋಟಿ ರೂ. ಪರಿಹಾರ ಘೋಷಣೆ ಮಾಡಿದ್ದರು.

ಪ್ರತಿಭಟನೆ ವಾಪಸ್‌?
ಬೆಲೆ ಇಳಿಕೆ ಪ್ರಕಟಿಸುತ್ತಿದ್ದಂತೆ ಪ್ರತಿಭಟನೆಯನ್ನು ವಾಪಸ್‌ ಪಡೆಯುವ ಕುರಿತು ನಿರ್ಧರಿಸಲಾಗುವುದು ಎಂದು ಜಮ್ಮು -ಕಾಶ್ಮೀರ ಜಂಟಿ ಅವಾಮಿ ಕ್ರಿಯಾ ಸಮಿತಿ (ಜೆಎಎಸಿ) ಮುಖ್ಯಸ್ಥ ಶೌಕತ್‌ ನವಾಜ್‌ ಮಿರ್‌ ಸೋಮವಾರ ಹೇಳಿದ್ದರು. ಪಿಒಕೆ ಬೇಡಿಕೆ ಕುರಿತಾದ ಸರಕಾರದ ಅಧಿಸೂಚನೆ ಮಂಗಳವಾರ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಕೂಡ ಆಯಿತು. ಅಲ್ಲದೆ ಪ್ರತಿಭಟನಕಾರರ ಎಲ್ಲ ಬೇಡಿಕೆಗಳನ್ನು ಈಡೇರಿಸಲು ಸರಕಾರ ಒಪ್ಪಿಕೊಂಡಿದ್ದರಿಂದ ಪ್ರತಿಭಟನೆಯನ್ನು ಕೈಬಿಡಲಾಗಿದೆ ಎಂದು ಅವರು ತಿಳಿಸಿದರು.

ವಿಶ್ವಸಂಸ್ಥೆಯಲ್ಲಿ ದನಿ ಎತ್ತಲು
ಕಾಶ್ಮೀರ ಬಿಜೆಪಿ ಘಟಕ ಆಗ್ರಹ
ಜಮ್ಮು: ಪಿಒಕೆಯಲ್ಲಿ ಪಾಕಿಸ್ಥಾನಿ ಸೇನೆ ನಡೆಸುತ್ತಿರುವ ದೌರ್ಜನ್ಯದ ಕುರಿತು ವಿಶ್ವ ಸಂಸ್ಥೆಯಲ್ಲಿ ಕೇಂದ್ರ ಸರಕಾರವು ದನಿ ಎತ್ತಬೇಕು ಎಂದು ಜಮ್ಮು -ಕಾಶ್ಮೀರದ ಬಿಜೆಪಿ ಘಟಕದ ಅಧ್ಯಕ್ಷ ರವಿಂದೇರ್‌ ರೈನಾ ಆಗ್ರಹಿಸಿದ್ದಾರೆ. ಜತೆಗೆ ಪಿಒಕೆ ಜನರಿಗೆ ಕೇಂದ್ರ ಸರಕಾರವು ರೇಷನ್‌ ಕಳುಹಿಸಿಕೊಡಬೇಕು ಎಂದಿದ್ದಾರೆ. ರಜೌರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಪಿಒಕೆಯ ಜನರೊಂದಿಗೆ ಇದ್ದೇವೆ. ನಮ್ಮ ಸಹೋದರ-ಸಹೋದರಿಯರಾಗಿರುವ ಪಿಒಕೆ ಮಂದಿ ನಮ್ಮ ನಾಗರಿಕರು ಎಂದಿದ್ದಾರೆ.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

ರಷ್ಯಾ-ಉಕ್ರೇನ್‌ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ

ರಷ್ಯಾ-ಉಕ್ರೇನ್‌ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.