ಪಾಕ್ ಆಕ್ರಮಿತ ಕಾಶ್ಮೀರ ಭಾಗದ ಜನರಿಂದ ಬೃಹತ್ ಪ್ರತಿಭಟನೆ


Team Udayavani, Dec 3, 2019, 5:39 PM IST

Pakistan-Flag-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ರಾವಲ್ಪಿಂಡಿ: ಕಾಶ್ಮೀರ ಪಾಕಿಸ್ಥಾನಕ್ಕೇ ಸೇರಬೇಕು ಎಂದು ಪಾಕಿಸ್ಥಾನೀಯರು ಊರಿಡೀ ಹೇಳಿಕೊಂಡೇನೋ ತಿರುಗುತ್ತಿದ್ದಾರೆ. ಆದರೆ ಅವರು ಪಾಕ್‌ ಆಕ್ರಮಿತ ಪ್ರದೇಶದ ಕಾಶ್ಮೀರಿಗಳನ್ನು ಚೆನ್ನಾಗಿ ನೋಡುತ್ತಿದ್ದಾರಾ? ಇಲ್ಲವೇ ಇಲ್ಲ.

ಈ ಕಾರಣಕ್ಕೇ ಪಾಕ್‌ ಆಕ್ರಮಿತ ಕಾಶ್ಮೀರ ವಲಯದಲ್ಲಿರುವ ಮಂದಿ ಇದೀಗ ರಾವಲ್ಪಿಂಡಿಯಲ್ಲಿ ದೊಡ್ಡ ಮಟ್ಟದ ಪ್ರತಿಭಟನೆ ನಡೆಸಿದ್ದಾರೆ. ನಮ್ಮನ್ನು ತಾರತಮ್ಯ ಭಾವದಿಂದ ನೋಡಲಾಗುತ್ತಿದೆ. ಕಾಶ್ಮೀರಿಗಳಿಗೆ ಹೊಡೆದು, ಬಡಿದು ಮಾಡುತ್ತಿದ್ದಾರೆ. ವಾಹನಗಳು ಕಂಡರೆ ಅವುಗಳನ್ನು ಧ್ವಂಸಗೊಳಿಸಿ, ಬೆಂಕಿ ಇಡುತ್ತಿದ್ದಾರೆ ಎಂದು ದೂರಿದ್ದಾರೆ.

ಪಾಕ್‌ ಆಕ್ರಮಿತ ಕಾಶ್ಮೀರದಿಂದ ಬಹಳಷ್ಟು ಮಂದಿ ಕೆಲಸ ಹುಡುಕಿಕೊಂಡು, ವ್ಯಾಪಾರ, ಉದ್ದಿಮೆ ನಡೆಸುವುದಕ್ಕಾಗಿ ರಾವಲ್ಪಿಂಡಿ ಮತ್ತು ಪಾಕಿಸ್ಥಾನದ ಇತರ ಭಾಗಗಳಿಗೆ ಹೋಗುತ್ತಾರೆ. ಆದರೆ ಎಲ್ಲೂ ಅವರನ್ನು ಚೆನ್ನಾಗಿ ನೋಡಿಕೊಳ್ಳುವುದೇ ಇಲ್ಲವಂತೆ. ಪಾಕ್‌ ಆಕ್ರಮಿತ ಕಾಶ್ಮೀರದ ವಾಹನ ನೋಡಿದರೆ ಹಾಳುಗೆಡವುತ್ತಾರೆ. ಮನುಷ್ಯರನ್ನು ಕಂಡರೆ ಸ್ಥಳೀಯ ಯುವಕರು ಅವರಿಗೆ ಇಲ್ಲದ ಕಿರುಕುಳ ನೀಡುತ್ತಾರೆ ಎಂದು ಹೇಳುತ್ತಾರೆ.

ರಾವಲ್ಪಿಂಡಿಯ ಪ್ರತಿಭಟನೆಯಲ್ಲಿ ಭಾಗವಹಿಸಿದ ನಾಸಿಮ್‌ ಅಹ್ಮದ್‌ ಎಂಬವರ ಪ್ರಕಾರ ಅವರು ಮುಜಫರಾಬಾದ್‌ನಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದು ವಾಹನ ಕಂಡರೆ ಸುಮ್ಮನೆ ಇಲ್ಲಸಲ್ಲದ ತಕರಾರು ತೆಗೆದು ಹಾನಿ ಮಾಡುತ್ತಾರೆ. ವ್ಯಾಪಾರಕ್ಕೆಂದು, ಉದ್ಯೋಗ ಹುಡುಕಿಕೊಂಡು ಈ ಭಾಗಕ್ಕೆ ಬಂದವರು ಸದಾ ಭಯದಲ್ಲೇ ಬದುಕುವಂತಾಗಿದೆ ಎನ್ನುತ್ತಾರೆ.

ರಾವಲ್ಪಿಂಡಿ ಭಾಗದ ಗಿಲ್ಗಿಟ್‌, ಬಾಲ್ಟಿಸ್ಥಾನ್‌ನಿಂದ ಬಂದವರು ದೊಡ್ಡ ಸಂಖ್ಯೆಯಲ್ಲಿದ್ದಾರೆ. ಒಂದು ಬಾರಿ ಅವರು ಆಕ್ರಮಿತ ಕಾಶ್ಮೀರ ಬಿಟ್ಟು ಬಂದ ಬಳಿಕ ಅತ್ತ ಹೋಗಿಲ್ಲ. ಆಕ್ರಮಿತ ಕಾಶ್ಮೀರ ಇನ್ನೂ ಅಭಿವೃದ್ಧಿ ಹೊಂದದೇ ಇರುವುದರಿಂದ ಯಾವುದೇ ಉದ್ಯೋಗಾವಕಾಶಗಳು ಲಭ್ಯವಾಗುತ್ತಿಲ್ಲ.

ಈ ಮೊದಲು ಆಕ್ರಮಿತ ಕಾಶ್ಮಿರಿಗಳಿಗೆ ಪಾಕ್‌ ಸೇನೆ ಮತ್ತು ಇತರ ರಕ್ಷಣಾ ಪಡೆಗಳ ಕಾಟ ಜೋರಾಗಿತ್ತು. ಅವುಗಳು ನಿರಂತರ ಟಾರ್ಗೆಟ್‌ ಮಾಡುತ್ತಿದ್ದವು. ಈ ಹಿನ್ನೆಲೆಯಲ್ಲಿ ಕಾಶ್ಮೀರಿ ರಾಜಕೀಯ ಕಾರ್ಯಕರ್ತರು, ಜನರು ಪಾಕ್‌ನ ವಿವಿಧೆಡೆಗಳಲ್ಲಿ ಪ್ರತಿಭಟನೆ ನಡೆಸಿದ್ದರು.

ಪ್ರತಿಭಟನೆಯಲ್ಲಿ ಭಾಗಿಯಾದ ಸಾಮಾಜಿಕ ಕಾರ್ಯಕರ್ತ ಅಝರ್‌ ರಶೀದ್‌ ಅವರು ಈಗಿನ ಇಮ್ರಾನ್‌ ಖಾನ್‌ ಸರಕಾರ ಒಂದು ಕೊಲೆಗಾರ ಸರಕಾರ. ಅದು ನಮ್ಮೆಲ್ಲ ಹಕ್ಕುಗಳನ್ನು ಕಿತ್ತುಕೊಂಡಿದೆ ಎಂದು ಆರೋಪಿಸಿದ್ದಾರೆ. ಜತೆಗೆ ಹಲವು ಹತ್ಯೆಗಳನ್ನು ನೆನಪಿಸಿಕೊಂಡಿದ್ದು, ಇದಕ್ಕೆ ಸೇಡು ತೀರಿಸಿಕೊಳ್ಳಬೇಕಿದೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.