![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Aug 31, 2024, 3:28 PM IST
ಮಾಸ್ಕೋ: ರಷ್ಯಾದಲ್ಲಿ 22 ಜನರಿದ್ದ ಹೆಲಿಕಾಪ್ಟರ್ ರಷ್ಯಾದ ಪೂರ್ವದಲ್ಲಿರುವ ಕಮ್ಚಾಟ್ಕಾ ಪೆನಿನ್ಸುಲಾ ದ್ವೀಪ ಪ್ರದೇಶದಲ್ಲಿ ಕಣ್ಮರೆಯಾಗಿರುವುದಾಗಿ ವರದಿಯಾಗಿದೆ.
ಫೆಡರಲ್ ಏರ್ ಟ್ರಾನ್ಸ್ಪೋರ್ಟ್ ಏಜೆನ್ಸಿಯ ಪ್ರಾಥಮಿಕ ವರದಿಗಳಿಂದ ಹೆಲಿಕಾಪ್ಟರ್ ನಾಪತ್ತೆಯಾಗಿರುವ ವಿಚಾರ ದೃಢಪಡಿಸಲಾಗಿದೆ ಮತ್ತು ಇಂಟರ್ಫ್ಯಾಕ್ಸ್ ಸುದ್ದಿ ಸಂಸ್ಥೆ ಶನಿವಾರ ವಿಚಾರ ಬಹಿರಂಗಪಡಿಸಿದೆ. ಹೆಲಿಕಾಪ್ಟರ್ ನಲ್ಲಿ 19 ಪ್ರಯಾಣಿಕರು ಮತ್ತು ಮೂವರು ಸಿಬ್ಬಂದಿಗಳು ಇದ್ದರು ಎನ್ನಲಾಗಿದ್ದು. ಹೆಲಿಕಾಪ್ಟರ್ ನಾಪತ್ತೆಯಾಗಿರುವ ಬೆನ್ನಲ್ಲೇ ರಕ್ಷಣಾ ತಂಡ ಹುಡುಕಾಟ ಆರಂಭಿಸಿದೆ.
ಅಧಿಕಾರಿಗಳ ಮಾಹಿತಿ ಪ್ರಕಾರ, ಎಂಐ -8 ಹೆಲಿಕಾಪ್ಟರ್ ಕಮ್ಚಾಟ್ಕಾ ಪ್ರದೇಶದ ವಾಚ್ಕಜೆಟ್ಸ್ ನಿಂದ ಟೇಕ್ ಆಫ್ ಆಗಿದ್ದು ಇದಾದ ಬಳಿಕ ತನ್ನ ಸಂಪರ್ಕ ಕಳೆದುಕೊಂಡಿದೆ ಎಂದು ಮಾಹಿತಿ ನೀಡಿದ್ದಾರೆ.
1960 ರ ದಶಕದಲ್ಲಿ ವಿನ್ಯಾಸಗೊಳಿಸಲಾದ ಎರಡು ಎಂಜಿನ್ ಹೊಂದಿರುವ ಹೆಲಿಕಾಪ್ಟರ್ Mi-8 ಅನ್ನು ರಷ್ಯಾ ಮತ್ತು ನೆರೆಯ ದೇಶಗಳಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ.
ಇದಕ್ಕೂ ಮೊದಲು ಆಗಸ್ಟ್ 12 ರಂದು, 16 ಪ್ರವಾಸಿಗರನ್ನು ಹೊತ್ತ Mi-8 ಹೆಲಿಕಾಪ್ಟರ್ ರಷ್ಯಾದ ದೂರದ ಪೂರ್ವ ಪ್ರದೇಶವಾದ ಕಂಚಟ್ಕಾದಲ್ಲಿ ಪತನಗೊಂಡಿತ್ತು.
ಪ್ರವಾಸಿಗರ ಜನಪ್ರಿಯ ತಾಣ:
ಮಾಸ್ಕೋದಿಂದ ಪೂರ್ವಕ್ಕೆ 6,000 ಕಿಲೋಮೀಟರ್ (3,728 ಮೈಲುಗಳು) ಮತ್ತು ಅಲಾಸ್ಕಾದಿಂದ ಪಶ್ಚಿಮಕ್ಕೆ ಸರಿಸುಮಾರು 2,000 ಕಿಲೋಮೀಟರ್ ದೂರದಲ್ಲಿರುವ ಕಮ್ಚಾಟ್ಕಾ ಪೆನಿನ್ಸುಲಾ ತನ್ನ ಪ್ರಾಚೀನ ನೈಸರ್ಗಿಕ ಸೌಂದರ್ಯಕ್ಕೆ ಹೆಸರುವಾಸಿಯಾಗಿದೆ. ಈ ಪ್ರದೇಶವು ಪ್ರವಾಸಿಗರಿಗೆ ಜನಪ್ರಿಯ ತಾಣವಾಗಿದೆ, ವಿಶೇಷವಾಗಿ ಅಲ್ಲಿನ ಜ್ವಾಲಾಮುಖಿ ಭೂದೃಶ್ಯಗಳು, ದಟ್ಟವಾದ ಕಾಡುಗಳು ಮತ್ತು ಕಡಿದಾದ ಪ್ರದೇಶಗಳು ಸಾಹಸ ಪ್ರಿಯರಿಗೆ ಹೇಳಿ ಮಾಡಿಸಿದಂತಿದೆ, ಹಾಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುತ್ತಾರೆ.
ಇದನ್ನೂ ಓದಿ: WhatsApp ಸ್ಟೇಟಸ್ ಹಾಕಿ ಕಾಲೇಜು ವಿದ್ಯಾರ್ಥಿ ನಾಪತ್ತೆ… ತುಂಗಾ ನದಿ ಬಳಿ ಬೈಕ್ ಪತ್ತೆ
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
ರಷ್ಯಾ-ಉಕ್ರೇನ್ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.