![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jun 5, 2017, 10:44 AM IST
ಕೈರೋ : ಕತಾರ್ ದೇಶ ಭಯೋತ್ಪಾದನೆಯನ್ನು ಪ್ರವರ್ತಿಸುತ್ತಿರುವ ಕಾರಣಕ್ಕೆ ತಾವು ಆ ದೇಶದೊಂದಿಗಿನ ತಮ್ಮ ರಾಜತಾಂತ್ರಿಕ ಸಂಬಂಧಗಳನ್ನು ಕಡಿದುಕೊಳ್ಳುತ್ತಿರುವುದಾಗಿ ಸೌದಿ ಅರೇಬಿಯ, ಈಜಿಪ್ಟ್ , ಬಹರೇನ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ಪ್ರಕಟಿಸಿವೆ.
2022ರಲ್ಲಿ ವಿಶ್ವ ಕಪ್ ಫುಟ್ಬಾಲ್ ಪಂದ್ಯಾವಳಿಯನ್ನು ನಡೆಸಿಕೊಡಲಿರುವ ಕತಾರ್, ಇಸ್ಲಾಮಿಕ್ ಉಗ್ರರ ವಿರುದ್ಧದ ಹೋರಾಟದಲ್ಲಿ ಅಮೆರಿಕ ನೇತೃತ್ವದ ಮಿತ್ರಕೂಟದ ಓರ್ವ ಸದಸ್ಯ ದೇಶವಾಗಿದೆ. ಈಚಿನ ವರ್ಷಗಳಲ್ಲಿ ಕತಾರ್ ಇಸ್ಲಾಮಿಕ್ ಉಗ್ರರಿಗೆ ಹಣ ಇತ್ಯಾದಿ ನೆರವನ್ನು ನೀಡುತ್ತಿದೆ ಎಂದು ಆಮೆರಿಕ ಮಾಧ್ಯಮಗಳಲ್ಲಿ ಪ್ರಕಟಗೊಂಡ ಹಲವಾರು ಲೇಖನಗಳು ಆರೋಪಿಸಿವೆ.
“ಭಯೋತ್ಪಾದನೆ ಮತ್ತು ಉಗ್ರವಾದದ ಅಪಾಯಗಳಿಂದ ನಮ್ಮ ರಾಷ್ಟ್ರೀಯ ಭದ್ರತೆಯನ್ನು ರಕ್ಷಿಸುವವುದಕ್ಕಾಗಿ ನಾವು ನಮ್ಮ ನೆರೆಯ ರಿಯಾದ್ ಜತೆಗಿನ ರಾಜತಾಂತ್ರಿಕ ಸಂಬಂಧಗಳನ್ನು ಕಡಿದುಕೊಂಡು ಅದರೊಂದಿಗಿನ ನಮ್ಮ ಗಡಿಯನ್ನು ನಾವು ಮುಚ್ಚಿದ್ದೇವೆ’ ಎಂದು ರಿಯಾಧ್ ಹೇಳಿರುವುದಾಗಿ ಸೌದಿ ಸುದ್ದಿ ಸಂಸ್ಥೆ ಎಸ್ಪಿಎ ವರದಿ ಮಾಡಿದೆ.
ಕತಾರ್ ಜತೆಗಿನ ರಾಜತಾಂತ್ರಿಕ ಸಂಬಂಧಗಳನ್ನು ಕಡಿದು ಕೊಳ್ಳಲು ಕಡಿದುಕೊಳ್ಳಲು ರಿಯಾಧ್ ನಿರ್ಧರಿಸಿದ್ದು ಕತಾರ್ ಜತಗಿನ ಭೂ, ಸಮುದ್ರ ಗಡಿಗಳನ್ನು ಹಾಗೂ ವಾಯು ನಿಲ್ದಾಣಗಳನ್ನು ಮುಚ್ಚಲು ನಿರ್ಧರಿಸಲಾಗಿರುವುದಾಗಿ ಸೌದಿ ಅಧಿಕಾರಿಗಳನ್ನು ಉಲ್ಲೇಖೀಸಿ ಎಸ್ಪಿಎ ವರದಿ ಮಾಡಿದೆ.
ಕತಾರ್ ಅಧಿಕಾರಿಗಳು ಕಳೆದ ಕೆಲವು ವರ್ಷಗಳಿಂದ ಸಾರಾಸಗಟು ಉಲ್ಲಂಘನೆ ಎಸಗುತ್ತಿರುವುದೇ ಈ ನಿರ್ಣಾಯಕ ಕ್ರಮಕ್ಕೆ ಕಾರಣ ಎಂದು ಸೌದಿ ಹೇಳಿಕೆ ತಿಳಿಸಿದೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.