Facebook ಗೆಳೆತಿಗಾಗಿ ಪಾಕ್ ನಲ್ಲಿ 6ವರ್ಷ ಬಂಧಿಯಾಗಿದ್ದ ಮುಂಬೈ ಯುವಕ!


Team Udayavani, Dec 18, 2018, 2:48 PM IST

jail.jpg

ನವದೆಹಲಿ/ಇಸ್ಲಾಮಾಬಾದ್:ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಯುವತಿಯನ್ನು ಭೇಟಿಯಾಗುವ ಕುತೂಹಲದಿಂದ ಅಕ್ರಮವಾಗಿ ಪಾಕಿಸ್ತಾನದೊಳಕ್ಕೆ ಪ್ರವೇಶಿಸಿ ಜೈಲುಶಿಕ್ಷೆ ಅನುಭವಿಸಿದ್ದ ಮುಂಬೈಯ ಯುವಕ ಹಮೀದ್ ನೆಹಾಲ್ ಅನ್ಸಾರಿಯನ್ನು ಪಾಕ್ ಸರ್ಕಾರ ಮಂಗಳವಾರ ಬಿಡುಗಡೆಗೊಳಿಸಿದೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಈ ಬಗ್ಗೆ ಪ್ರಕಟಣೆ ನೀಡಿದ್ದು, ಈ ಪ್ರಕರಣ ಅನ್ನಾರಿ ಕುಟುಂಬ ವರ್ಗಕ್ಕೆ ದೊಡ್ಡ ನಿಟ್ಟುಸಿರು ಬಿಡುವಂತೆ ಮಾಡಿದೆ ಎಂದು ತಿಳಿಸಿದ್ದಾರೆ.

ಪಾಕಿಸ್ತಾನದ ಜೈಲಿನಲ್ಲಿರುವ ಹಮೀದ್ ನೆಹಾಲ್ ಅನ್ಸಾರಿಯ ಜೈಲುಶಿಕ್ಷೆ ಮುಗಿದ ಕೂಡಲೇ ಭಾರತಕ್ಕೆ ಕಳುಹಿಸುವಂತೆ ಕೇಂದ್ರ ಸರ್ಕಾರ ಡಿಸೆಂಬರ್ 11ರಂದು ಪಾಕಿಸ್ತಾನಕ್ಕೆ ಮನವಿ ಮಾಡಿತ್ತು. ಏತನ್ಮಧ್ಯೆ ಭಾನುವಾರ ಅನ್ಸಾರಿಯ ಜೈಲುಶಿಕ್ಷೆ ಪೂರ್ಣಗೊಂಡಿದ್ದರೂ ಕೂಡಾ ಪಾಕಿಸ್ತಾನ ಆತನನ್ನು ಗೂಢಚಾರ ಎಂದೇ ಬಣ್ಣಿಸಿತ್ತು ಎಂದು ವರದಿ ವಿವರಿಸಿದೆ.

ಫೇಸ್ ಬುಕ್ ಗೆಳತಿಯ ಬಲವಂತದ ಮದುವೆ ನಿಲ್ಲಿಸಲು ಹೋಗಿದ್ದ!

33ರ ಹರೆಯದ ಇಂಜಿನಿಯರ್ ಅನ್ಸಾರಿ ಖೈಬರ್ ಫಾಖ್ತುನ್ ಖಾವಾ ಪ್ರಾಂತ್ಯದ ಫೇಸ್ ಬುಕ್ ನಲ್ಲಿ ಪರಿಚಯವಾಗಿದ್ದ ಗೆಳತಿಯ ಬಲವಂತದ ವಿವಾಹವನ್ನು ತಡೆದು ರಕ್ಷಿಸುವ ನಿಟ್ಟಿನಲ್ಲಿ 2012ರ ನವೆಂಬರ್ 12ರಂದು ಅಫ್ಘಾನಿಸ್ತಾನದ ಗಡಿದಾಟಿ ಜಲಾಲಬಾದ್ ನಿಂದ ಪೇಶಾವರಕ್ಕೆ ತೆರಳಿ ಪಾಕಿಸ್ತಾನವನ್ನು ಪ್ರವೇಶಿಸಿದ್ದ.

2012ರ ನವೆಂಬರ್ ನಿಂದ ನಾಪತ್ತೆಯಾಗಿದ್ದ ಅನ್ಸಾರಿಯನ್ನು ಹುಡುಕಿಕೊಡುವಂತೆ ಮನೆಯವರು ಮನವಿ ಮಾಡಿದ್ದರು. ಏತನ್ಮಧ್ಯೆ ಕಾನೂನು ಬಾಹಿರವಾಗಿ ಪಾಕಿಸ್ತಾನವನ್ನು ಪ್ರವೇಶಿಸಿದ್ದ ಅನ್ಸಾರಿ ಪಾಕ್ ಗುಪ್ತಚರ ಇಲಾಖೆಯ ಕೈಗೆ ಸಿಕ್ಕಿಬಿದ್ದಿದ್ದ. ಅನ್ಸಾರಿ ಭಾರತದ ಗೂಢಚಾರ ಎಂದೇ ಪ್ರತಿಪಾದಿಸಿದ್ದು, ಸೇನಾ ಕೋರ್ಟ್ ಅನ್ಸಾರಿಗೆ ಮೂರು ವರ್ಷಗಳ ಜೈಲುಶಿಕ್ಷೆ ವಿಧಿಸಿತ್ತು. ಹೀಗೆ ಸುಮಾರು ಆರು ವರ್ಷಗಳ ಕಾಲ ಬಂಧನದಲ್ಲಿದ್ದ ಅನ್ಸಾರಿ ಬಿಡುಗಡೆಗಾಗಿ ಮುಂಬೈ ಭಾರತೀಯ ಜನತಾ ಪಕ್ಷದ ಕಾರ್ಯಕರ್ತ ಕೃಷ್ಣ ಹೆಗಡೆ ಅವರು ಸಹಾಯ ಹಸ್ತ ಚಾಚಿದ್ದರು. ನವದೆಹಲಿಯ ಪಾಕಿಸ್ತಾನದ ಹೈಕಮಿಷನ್ ಗೆ ತೆರಳಿ ಭಾರತಕ್ಕೆ ವಾಪಸ್ಸಾಗುವ ಪ್ರಕ್ರಿಯೆನ್ನು ಪೂರ್ಣಗೊಳಿಸಿದ್ದರು ಎಂದು ವರದಿ ತಿಳಿಸಿದೆ.

ಪಾಕಿಸ್ತಾನದ ಜೈಲಿನಿಂದ ಬಿಡುಗಡೆಗೊಂಡ ಅನ್ಸಾರಿಯನ್ನು ಅಧಿಕಾರಿಗಳು ವಾಘಾ ಗಡಿಯಲ್ಲಿ ಭಾರತೀಯ ಅಧಿಕಾರಿಗಳಿಗೆ ಇಂದು ಮಧ್ಯಾಹ್ನ ಹಸ್ತಾಂತರಿಸಿರುವುದಾಗಿ ಪಿಐಪಿಎಫ್ ಪಿಡಿಯ ಪ್ರಧಾನ ಕಾರ್ಯದರ್ಶಿ ಜತಿನ್ ದೇಸಾಯಿ ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.