ಭಾರತಕ್ಕೆ ಮತ್ತೆ ಧನ್ಯವಾದ ಅರ್ಪಿಸಿದ ಶ್ರೀಲಂಕಾ

 ಭಾರತದ ಸಹಾಯಕ್ಕೆ ಲಂಕಾ ಪ್ರಧಾನಿ ವಿಕ್ರಮಸಿಂಘೆ ಕೃತಜ್ಞತೆ

Team Udayavani, May 29, 2022, 6:20 AM IST

thumb 5

ಕೊಲಂಬೋ: ತನ್ನ ಇತಿಹಾಸದಲ್ಲೇ ಅತ್ಯಂತ ಕಠಿನ ಆರ್ಥಿಕ ಬಿಕ್ಕಟ್ಟನ್ನು ಎದುರಿಸಿದ ಶ್ರೀಲಂಕಾಕ್ಕೆ ಭಾರತ ಸರಕಾರ ಹೆಗಲಿಗೆ ಹೆಗಲು ಕೊಟ್ಟಿದೆ. ಅದನ್ನು ಶ್ರೀಲಂಕಾ ಪ್ರಧಾನಿ ರಾನಿಲ್‌ ವಿಕ್ರಮಸಿಂಘೆ ಅಷ್ಟೇ ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ. ಕಳೆದ ವಾರವೂ ಅವರು ಭಾರತದ ನೆರವಿಗೆ ಧನ್ಯವಾದ ಅರ್ಪಿಸಿದ್ದರು.

ಇತ್ತೀಚೆಗೆ ಜಪಾನ್‌ನಲ್ಲಿ ನಡೆದಿದ್ದ ಕ್ವಾಡ್‌ ಶೃಂಗಸಭೆಯಲ್ಲಿ ಭಾಗಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸರ ಕಾರದ ಮನವೊಲಿಸಿ, ಭಾರತ- ಜಪಾನ್‌ ಜಂಟಿ ಸಹಭಾಗಿತ್ವದಲ್ಲಿ ಶ್ರೀಲಂಕಾಕ್ಕೆ ನೆರವು ನೀಡುವುದಾಗಿ ಘೋಷಿಸಿದ್ದರು.

ಈ ಹಿನ್ನೆಲೆಯಲ್ಲಿ, ಭಾರತಕ್ಕೆ ಲಂಕಾ ಪ್ರಧಾನಿ ಪುನಃ ಧನ್ಯವಾದ ಅರ್ಪಿಸಿದ್ದಾರೆ. “”ಭಾರತ ಮತ್ತು ಜಪಾನ್‌ನಿಂದ ಸಿಕ್ಕಿದ ನೆರವಿಗೆ ನಾವು ಆಭಾರಿಯಾಗಿದ್ದೇವೆ. ಕ್ವಾಡ್‌ ಸದಸ್ಯ ರಾಷ್ಟ್ರಗಳಿಗೆ ನಾವು ಮನವಿ ಮಾಡಿ ದಾಗ, ಭಾರತ-ಜಪಾನ್‌ ಮುಂದೆ ನಿಂತು ವಿದೇಶಗಳಿಂದ ಶ್ರೀಲಂಕಾಕ್ಕೆ ನೆರವು ಒದಗಿ ಸಲು ಸಹಾಯ ಮಾಡಿವೆ. ನಾನು ಖಾಸಗಿ ಯಾಗಿ ಭಾರತದ ವಿತ್ತಸಚಿವೆ ನಿರ್ಮಲಾ ಸೀತಾರಾಮನ್‌ರೊಂದಿಗೆ ಮಾತನಾಡಿ ಕೃತ ಜ್ಞತೆ ಸಲ್ಲಿಸಿದ್ದೇನೆ” ಎಂದು ರಾನಿಲ್‌ ಹೇಳಿದ್ದಾರೆ.

ಶುಕ್ರವಾರ ಕೂಡ 25 ಟನ್‌ನಷ್ಟು ವೈದ್ಯಕೀಯ ಸಾಮಗ್ರಿಯನ್ನು ಲಂಕಾಕ್ಕೆ ಹಸ್ತಾಂತರಿಸಿದೆ. ಇದರ ಒಟ್ಟು ಮೌಲ್ಯ 5.45 ಕೋಟಿ ರೂ.ಗಳು. ಕಳೆದ ವಾರ 9,000 ಮೆಟ್ರಿಕ್‌ ಟನ್‌ ಅಕ್ಕಿ, 200 ಮೆಟ್ರಿಕ್‌ ಟನ್‌ ಹಾಲಿನ ಪುಡಿ, 24 ಮೆಟ್ರಿಕ್‌ ಟನ್‌ ಔಷಧಗಳನ್ನು ಕಳುಹಿಸಿತ್ತು. ಅದಕ್ಕೂ ಮುನ್ನ ಪೆಟ್ರೋಲ್‌, ಡೀಸೆಲ್‌ಗ‌ಳನ್ನು ಕಳುಹಿಸಿದೆ.

ಶಿಕ್ಷಣ ವ್ಯವಸ್ಥೆಗೆ ಸುಧಾರಣೆ: ಶ್ರೀಲಂಕಾ ದಲ್ಲಿ ಶೈಕ್ಷಣಿಕ ವ್ಯವಸ್ಥೆ ಸುಧಾರಿಸಲು, ಅಲ್ಲಿನ ಸರಕಾರ ನಿರ್ಧರಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅಧ್ಯಕ್ಷ ಗೊಟಬಾಯ ರಾಜಪಕ್ಸ, ಶಾಲೆ ತೊರೆದ ಮಕ್ಕಳು ಮತ್ತೆ ಶಾಲೆಗೆ ಸೇರಬೇಕು. ಹೊಸ ಶಿಕ್ಷಣ ನೀತಿಯಲ್ಲಿ ಮಕ್ಕಳು ತಮ್ಮ ಪ್ರತಿಭೆಯನ್ನೂ ಹೊರಹಾಕಲು ಅವಕಾಶವಿರುವ ವ್ಯವಸ್ಥೆ ಸೃಷ್ಟಿಸಲು ಚಿಂತಿಸಲಾಗಿದೆ ಎಂದಿದ್ದಾರೆ.

50 ದಿನಕ್ಕೆ ಕಾಲಿಟ್ಟ ಪ್ರತಿಭಟನೆ
ಶ್ರೀಲಂಕಾದ ಅಧ್ಯಕ್ಷ ಗೊಟಬಾಯ ರಾಜಪಕ್ಸ ಅವರ ರಾಜೀನಾಮೆಗೆ ಒತ್ತಾಯಿಸಿ ಶ್ರೀಲಂಕಾ ನಾಗರಿಕರು ಕೊಲಂಬೋದಲ್ಲಿ ನಡೆಸುತ್ತಿರುವ ಪ್ರತಿಭಟನೆ ಶನಿವಾರದಂದು 50ನೇ ದಿನಕ್ಕೆ ಕಾಲಿಟ್ಟಿತು. ಇಷ್ಟು ದಿನವಾ ದರೂ ಗೊಟಬಾಯ ರಾಜೀನಾಮೆ ಸಲ್ಲಿಸದ ಕಾರಣ ಪ್ರತಿಭಟನೆಯನ್ನು ಮತ್ತಷ್ಟು ಶಕ್ತಿಶಾಲಿಯಾಗಿ ರೂಪಿಸ ಲಾಗುತ್ತದೆ ಹಾಗೂ ಹೆಚ್ಚೆಚ್ಚು ಜನರನ್ನು ಪ್ರತಿಭಟನೆಗೆ ಸೆಳೆಯ ಲಾಗುತ್ತದೆ ಎಂದು ಸಂಘಟಕರು ಹೇಳಿದ್ದಾರೆ. ಪ್ರತಿಭಟನೆ ಆರಂಭ ವಾದಾಗ, ಆಗಿನ ಪ್ರಧಾನಿ ಮಹಿಂದಾ ರಾಜಪಕ್ಸ ಅವರ ರಾಜೀನಾಮೆಗೂ ಒತ್ತಾಯಿಸಲಾಗಿತ್ತು. ಅದಕ್ಕೆ ಮಣಿದಿದ್ದ ರಾಜಪಕ್ಸ ಮೇ 9ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

ರಷ್ಯಾ-ಉಕ್ರೇನ್‌ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ

ರಷ್ಯಾ-ಉಕ್ರೇನ್‌ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.