![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, May 9, 2022, 5:12 PM IST
ಕೊಲಂಬೋ : ದ್ವೀಪ ರಾಷ್ಟ್ರ ಶ್ರೀಲಂಕಾ ದೇಶದ ಪ್ರಧಾನ ಮಂತ್ರಿ ಮಹಿಂದ್ರ ರಾಜಪಕ್ಸೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ದೇಶದ ಆರ್ಥಿಕ ಅಸ್ಥಿರತೆ ಹಿನ್ನೆಲೆಯಲ್ಲಿ ದೇಶಾದ್ಯಂತ ಸರ್ಕಾರದ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ್ದು, ಇದೀಗ ದೇಶದಲ್ಲಿ ಆರ್ಥಿಕ ಅಸ್ಥಿರತೆ ಜೊತೆಯಲ್ಲೇ ರಾಜಕೀಯ ಅಸ್ಥಿರತೆ ಕೂಡಾ ಎದುರಾದಂತಾಗಿದೆ.
ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಶ್ರೀಲಂಕಾದಾದ್ಯಂತ ಕರ್ಫ್ಯೂ ವಿಧಿಸಲಾಗಿದೆ. ಶ್ರೀಲಂಕಾ ರಾಜಧಾನಿ ಕೊಲಂಬೋದಲ್ಲಂತೂ ಉದ್ವಿಗ್ನ ಸ್ಥಿತಿ ನೆಲೆಯೂರಿದೆ.
ಶ್ರೀಲಂಕಾದಲ್ಲಿ ಕಳೆದ ಒಂದು ತಿಂಗಳಿನಿಂದ ವಿದ್ಯುತ್ ಅಭಾವವಿದೆ. ಪೆಟ್ರೋಲ್, ಡೀಸೆಲ್ ಕೂಡಾ ಸಿಗುತ್ತಿಲ್ಲ. ಇನ್ನು ಆಹಾರ, ಔಷಧಕ್ಕೂ ದ್ವೀಪ ರಾಷ್ಟ್ರದಲ್ಲಿ ಹಾಹಾಕಾರ ಎದುರಾಗಿದೆ. ಶ್ರೀಲಂಕಾ ದೇಶ ಸ್ವಾತಂತ್ರ್ಯ ಪಡೆದ ನಂತರದಿಂದ ಇಲ್ಲಿಯವರೆಗೂ ಇಂಥಾ ಕಠಿಣ ಪರಿಸ್ಥಿತಿ ಎದುರಿಸಿರಲಿಲ್ಲ ಎನ್ನುತ್ತಾರೆ ವಿಶ್ಲೇಷಕರು. ಇದೀಗ ಸರ್ಕಾರದ ವಿರುದ್ಧ ಶಾಂತಿಯುತ ಪ್ರತಿಭಟನೆಯನ್ನೂ ನಡೆಸಲು ಸಾಧ್ಯವಾಗದಂಥಾ ಪರಿಸ್ಥಿತಿ ಎದುರಾಗಿದೆ.
ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವವರ ಮೇಲೆ ವ್ಯಾಪಕವಾಗಿ ನಡೆಯುತ್ತಿದ್ದು, ಇದನ್ನು ತಡೆಗಟ್ಟುವಲ್ಲಿ ಪೊಲೀಸರು ಸಂಪೂರ್ಣ ವಿಫಲರಾಗಿದ್ದಾರೆ.
ಶ್ರೀಲಂಕಾ ದೇಶಾದ್ಯಂತ ಈಗ ಕರ್ಫ್ಯೂ ಎದುರಾಗಿದೆ. ಇದರ ನಡುವೆ ಪ್ರಧಾನಿ ರಾಜೀನಾಮೆಯಿಂದ ದೇಶದಲ್ಲಿ ರಾಜಕೀಯ ಅಸ್ಥಿರತೆ ಕೂಡಾ ಎದುರಾದಂತಾಗಿದೆ.
Effective immediately I have tendered my resignation as Prime Minister to the President.
අගමැති ධූරයෙන් ඉල්ලා අස්වීමේ ලිපිය ජනාධිපතිතුමා වෙත යොමු කළෙමි.
— Mahinda Rajapaksa (@PresRajapaksa) May 9, 2022
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
ರಷ್ಯಾ-ಉಕ್ರೇನ್ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.