ಏರ್ ಇಂಡಿಯಾ ಸಂಕಷ್ಟ: ಶಾಂಘಾಯ್ ವಿಮಾನ ನಿಲ್ದಾಣದಲ್ಲಿ 300 ಪ್ರಯಾಣಿಕರು ಅತಂತ್ರ


Team Udayavani, Sep 1, 2019, 10:30 PM IST

Air-India-1-9

ಶನಿವಾರ ರಾತ್ರಿಯೇ ದೆಹಲಿ ತಲುಪಬೇಕಾಗಿದ್ದ ಏರ್ ಇಂಡಿಯಾ ವಿಮಾನ ಒಂದರ ಪ್ರಯಾಣಿಕರು ಕಳೆದ ಹಲವು ತಾಸುಗಳಿಂದ ಶಾಂಘಾಯ್ ವಿಮಾನ ನಿಲ್ದಾಣದಲ್ಲಿ ಸಿಲುಕಿಕೊಂಡಿರುವ ಘಟನೆ ವರದಿಯಾಗಿದೆ. ತಾಂತ್ರಿಕ ಕಾರಣಗಳಿಂದ ವಿಮಾನದಲ್ಲಿ ತೊಂದರೆ ಕಾಣಿಸಿಕೊಂಡು ಈ ಅನಾನುಕೂಲ ಉಂಟಾಗಿದೆ ಎಂದು ಖಾಸಗಿ ವೆಬ್ ಸೈಟ್ ಒಂದರ ವರದಿ ತಿಳಿಸಿದೆ.

ಎಐ349 ವಿಮಾನದಲ್ಲಿ ತಾಂತ್ರಿಕ ತೊಂದರೆ ಕಾಣಿಸಿಕೊಂಡ ಬಳಿಕ ಆ ವಿಮಾನದಲ್ಲಿದ್ದ ಪ್ರಯಾಣಿಕರನ್ನು ಹಲವು ತಾಸುಗಳವರೆಗೆ ವಿಮಾನದೊಳಗೇ ಕುಳ್ಳಿರಿಸಿದ್ದ ಕುರಿತು ಇದೀಗ ಪ್ರಯಾಣಿಕರು ತಮ್ಮ ಆಕ್ರೋಶವನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ತೋಡಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಹವಾನಿಯಂತ್ರಣ ವ್ಯವಸ್ಥೆಯೂ ನಿಲುಗಡೆಗೊಂಡಿತ್ತು ಮತ್ತು ಬಳಿಕ ವಿಮಾನದೊಳಗೆ ದೀಪಗಳೂ ಆರಿಹೋದವು, ಮತ್ತು ಒಳಗಿದ್ದ ಪ್ರಯಾಣಿಕರಿಗೆ ಸ್ವಲ್ಪ ಸಮಯ ಉಸಿರುಕಟ್ಟಿದ ಅನುಭವವೂ ಆಯಿತು ಎಂದು ಪ್ರಯಾಣಿಕರಲ್ಲಿ ಹಲವರು ತಮಗಾದ ಕೆಟ್ಟ ಅನುಭವವನ್ನು ಹಂಚಿಕೊಂಡಿದ್ದಾರೆ.

ಈ ಸುದ್ದಿ ಖಾಸಗಿ ವೆಬ್ ಸೈಟ್ ನಲ್ಲಿ ಪ್ರಕಟವಾದ ಬಳಿಕ ಎಚ್ಚೆತ್ತುಕೊಂಡ ಏರ್ ಇಂಡಿಯಾ ಸಿಬ್ಬಂದಿ ಬಳಿಕ ಪ್ರಯಾಣಿಕರಿಗೆ ದೋಷಪೂರಿತ ವಿಮಾನದಿಂದ ಇಳಿಯಲು ಅವಕಾಶ ಮಾಡಿಕೊಟ್ಟರು. ಮತ್ತು ಅವರನ್ನೆಲ್ಲಾ ಶಾಂಘಾಯ್ ವಿಮಾನ ನಿಲ್ದಾಣದಿಂದ ಸುಮಾರು 40 ಕಿಲೋಮೀಟರ್ ದೂರದಲ್ಲಿರುವ ಹೊಟೇಲ್ ಒಂದಕ್ಕೆ ಕರೆದೊಯ್ಯಲಾಗಿದೆ ಎಂದು ವರದಿ ತಿಳಿಸಿದೆ.

ವಿಮಾನದಲ್ಲಿನ ತೊಂದರೆಯ ಕುರಿತಾಗಿ ಪ್ರಯಾಣಿಕರಿಗೆ ಯಾವುದೇ ಮಾಹಿತಿಯನ್ನು ನೀಡಿಲ್ಲ ಎಂದು ಪ್ರಯಾಣಿಕರು ದೂರಿದ್ದಾರೆ. ಬಳಿಕ ಎಲ್ಲಾ ಪ್ರಯಾಣಿಕರನ್ನು ಆದಿತ್ಯವಾರ ಮರಳಿ ವಿಮಾನ ನಿಲ್ದಾಣಕ್ಕೆ ಕರೆತರಲಾಯ್ತು. ಆದರೆ ಈ ವಿಮಾನದಲ್ಲಿ ಕಾಣಿಸಿಕೊಂಡಿರುವ ತೊಂದರೆಯನ್ನು ಸರಿಪಡಿಸುವ ತಂತ್ರಜ್ಞರು ಮುಂಬಯಿಯಿಂದ ಬರಬೇಕಾಗಿದ್ದು ಆ ಬಳಿಕವಷ್ಟೇ ತೊಂದರೆ ಸರಿಪಡಿಸಿಕೊಂಡು ವಿಮಾನ ಇಲ್ಲಿಂದ ಹೊರಡುವ ನಿರೀಕ್ಷೆ ಇದೆ ಎನ್ನಲಾಗುತ್ತಿದೆ.

ಏರ್ ಇಂಡಿಯಾ ಸಂಸ್ಥೆಯ ಈ ನಿರ್ಲಕ್ಷ್ಯ ಧೋರಣೆಯ ವಿರುದ್ಧ ಹಲವು ಪ್ರಯಾಣಿಕರು ಈಗಾಗಲೇ ಸಾಮಾಜಿಕ ಜಾಲತಾಣಗಳ ಮೂಲಕ ಹರಿಹಾಯ್ದಿದ್ದಾರೆ. ತಾಂತ್ರಿಕ ತೊಂದರೆ ಕಾಣಿಸಿಕೊಂಡ ವಿಮಾನದಲ್ಲಿಯೇ ಪ್ರಯಾಣಿಕರನ್ನು ಉಸಿರುಗಟ್ಟುವ ರೀತಿಯಲ್ಲಿ ಇರಿಸಿದ್ದು ಮತ್ತು ಈಗಲೂ ಸಹ ಮರು ಪ್ರಯಾಣದ ಕುರಿತಾಗಿ ಯಾವುದೇ ನಿಖರ ಮಾಹಿತಿಯನ್ನು ಒದಗಿಸದಿರುವ ಕುರಿತಾಗಿ ಪ್ರಯಾಣಿಕರು ಏರ್ ಇಂಡಿಯಾ ಮೇಲೆ ಗರಂ ಆಗಿದ್ದಾರೆ.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.