700 ತಾಲಿಬಾನ್ ಉಗ್ರರನ್ನು ಕೊಂದು, 600 ಉಗ್ರರನ್ನು ಸೆರೆಹಿಡಿದ ಪಂಜ್ ಶೀರ್ ಯೋಧರು


Team Udayavani, Sep 5, 2021, 12:46 PM IST

700 ತಾಲಿಬಾನ್ ಉಗ್ರರನ್ನು ಕೊಂದು, 600 ಉಗ್ರರನ್ನು ಸೆರೆಹಿಡಿದ ಪಂಜ್ ಶೀರ್ ಸೈನಿಕರು

ಕಾಬೂಲ್: ಅಫ್ಘಾನಿಸ್ಥಾನದಲ್ಲಿ ತಾಲಿಬಾನ್ ಮತ್ತು ಪಂಜ್ ಶೀರ್ ಯೋಧರ ನಡುವಿನ ಹೋರಾಟ ಜಾರಿಯಲ್ಲಿದೆ. ಅನಿರೀಕ್ಷಿತ ವೇಗದಲ್ಲಿ ಕಾಬೂಲ್ ನ್ನು ವಶಕ್ಕೆ ಪಡೆದಿದ್ದ ತಾಲಿಬಾನ್ ಉಗ್ರರಿಗೆ ಪಂಜ್ ಶೀರ್ ಕಣಿವೆ ಮಾತ್ರ ದುಸ್ವಪ್ನವಾಗಿದೆ ಕಾಡಿದೆ. ಈ ಪ್ರಾಂತ್ಯವನ್ನು ವಶಪಡಿಸಿಕೊಂಡು ಸಂಪೂರ್ಣ ಅಫ್ಘಾನಿಸ್ಥಾನದಲ್ಲಿ ಅಧಿಕಾರ ಸ್ಥಾಪಿಸಲು ತಾಲಿಬಾನ್ ಹರಸಾಹಸ ಪಡುತ್ತಿದೆ.

ಪಂಜ್ ಶೀರ್ ಪ್ರಾಂತ್ಯದಲ್ಲಿ ತಾಲಿಬಾನ್ ಕಳೆದ ಕೆಲವು ದಿನಗಳಿಂದ ಹೋರಾಟ ನಡೆಸುತ್ತಿದೆ. ಅಹ್ಮದ್ ಮಸೌದ್ ನೇತೃತ್ವದಲ್ಲಿ ಅಫ್ಘಾನಿಸ್ತಾನ ರಾಷ್ಟ್ರೀಯ ಪ್ರತಿರೋಧ ಪಡೆ ಹೋರಾಟ ನಡೆಸುತ್ತಿದೆ. ‘’ತಾವು ಪಂಜ್ ಶೀರ್ ಪ್ರಾಂತ್ಯದ ಮೇಲೆ ಅಧಿಪತ್ಯ ಸಾಧಿಸಿದ್ದೇವೆ, ಸಂಪೂರ್ಣ ಅಫ್ಘಾನ್ ನಮ್ಮ ವಶವಾಗಿದೆ’’ ಎಂದು ತಾಲಿಬಾನ್ ಶುಕ್ರವಾರ ರಾತ್ರಿ ಹೇಳಿಕೊಂಡಿತ್ತು. ಆದರೆ ಇದನ್ನು ಅಹ್ಮದ್ ಮಸೌದ್ ಮಾತ್ರ ಇದನ್ನು ನಿರಾಕರಿಸಿದ್ದರು.

ಇದನ್ನೂ ಓದಿ:ಇಬ್ಬರು ಯುವತಿಯರ ಮುದ್ದಿನ ಲವರ್: ‘ಟಾಸ್’ ಮೂಲಕ ವಧುವಿನ ನಿರ್ಣಯ, ಆದರೆ ಆಗಿದ್ದೇ ಬೇರೆ!

ಪಂಜಶೀರ್ ನ ಶುತುಲ್ ಜಿಲ್ಲೆಯನ್ನು ವಶಪಡಿಸಿಕೊಂಡ ನಂತರ ತಾವು ಅನಾಬಾ ಜಿಲ್ಲೆಗೆ ಪ್ರವೇಶಿಸಿದ್ದೇವೆ ಎಂದು ತಾಲಿಬಾನ್ ಹೇಳಿಕೊಂಡಿದೆ ಎಂದು ಅಶ್ವಕ ನ್ಯೂಸ್ ಏಜೆನ್ಸಿ ಹೇಳಿದೆ. ಖಿಂಜ್ ಮತ್ತು ಉನಾಬಾ ಜಿಲ್ಲೆಗಳನ್ನು ವಶಕ್ಕೆ ಪಡೆಯಲಾಗಿದೆ, ತಾಲಿಬಾನ್ ಪಡೆಗಳು ಪಂಜ್ ಶೀರ್ ಪ್ರಾಂತ್ಯದ ಏಳು ಜಿಲ್ಲೆಗಳಲ್ಲಿ ನಾಲ್ಕು ಜಿಲ್ಲೆಗಳನ್ನು ನಿಯಂತ್ರಿಸುತ್ತಿವೆ ಎಂದು ತಾಲಿಬಾನ್ ವಕ್ತಾರ ಬಿಲಾಲ್ ಕರಿಮಿ ಹೇಳಿದ್ದಾರೆ.

700 ಉಗ್ರರ ಹತ್ಯೆ: ಆದರೆ ತಾಲಿಬಾನ್ ಹೇಳಿಕೆಯನ್ನು ಅಲ್ಲಗಳೆದಿರುವ ಅಫ್ಘಾನಿಸ್ತಾನ ರಾಷ್ಟ್ರೀಯ ಪ್ರತಿರೋಧ ಪಡೆಯು ತಾವು ಖವಾಕ್ ಪಾಸ್‌ ನಲ್ಲಿ ಸಾವಿರಾರು ಭಯೋತ್ಪಾದಕರನ್ನು ಸುತ್ತುವರಿದಿದ್ದೇವೆ. ದಸ್ತೇ ರೇವಾಕ್ ಪ್ರದೇಶದಲ್ಲಿ ತಾಲಿಬಾನ್ ಪಡೆ ವಾಹನಗಳು ಮತ್ತು ಸಲಕರಣೆಗಳನ್ನು ಬಿಟ್ಟು ಹೋಗಿದೆ ಎಂದು ಹೇಳಿದೆ. ಅಷ್ಟೇ ಅಲ್ಲದೆ 700 ಕ್ಕೂ ಹೆಚ್ಚು ತಾಲಿಬಾನ್ ಉಗ್ರರನ್ನು ಕೊಲ್ಲಲಾಗಿದೆ. 600 ಉಗ್ರರನ್ನು ಸೆರೆಹಿಡಿದು ಸೆರೆಮನೆಗೆ ಹಾಕಲಾಗಿದೆ ಎಂದು ಪಂಜ್ ಶೀರ್ ನ ಹೋರಾಟ ಪಡೆ ಹೇಳಿಕೊಂಡಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋಗಳಲ್ಲಿ ತಾಲಿಬಾನ್ ಪಡೆಗಳು ಸ್ಥಳದಿಂದ ಹೊರಹೋಗುವ ದೃಶ್ಯಗಳು ಕಂಡುಬಂದಿದೆ. ಇರಾನ್ ಪತ್ರಕರ್ತ ತಾಜುಡೆನ್ ಸೊರೌಶ್ ಹಂಚಿಕೊಂಡಿರುವ ಇಂತಹ ಒಂದು ವಿಡಿಯೋದಲ್ಲಿ, ತಾಲಿಬಾನ್ ಪಂಜ್‌ ಶೀರ್‌ನಿಂದ ತಪ್ಪಿಸಿಕೊಳ್ಳುತ್ತಿದ್ದಾರೆ ಎಂದು ಜನರು ಹೇಳುತ್ತಿರುವುದನ್ನು ಕೇಳಬಹುದಾಗಿದೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Time AI 100: ಎಐ 2024ರ 100 ಪ್ರಭಾವಿಗಳ ಪಟ್ಟಿಯಲ್ಲಿ ವೈಷ್ಣವ್‌, ನಿಲೇಕಣಿ

Time AI 100: ಎಐ 2024ರ 100 ಪ್ರಭಾವಿಗಳ ಪಟ್ಟಿಯಲ್ಲಿ ವೈಷ್ಣವ್‌, ನಿಲೇಕಣಿ

US Poll: ಯಾರು ಶ್ವೇತಭವನ ಪ್ರವೇಶಿಸಲಿದ್ದಾರೆ? ಚುನಾವಣ ನಾಸ್ಟ್ರೋಡಮಸ್‌ ಭವಿಷ್ಯದಲ್ಲೇನಿದೆ…

US Poll: ಯಾರು ಶ್ವೇತಭವನ ಪ್ರವೇಶಿಸಲಿದ್ದಾರೆ? ಚುನಾವಣ ನಾಸ್ಟ್ರೋಡಮಸ್‌ ಭವಿಷ್ಯದಲ್ಲೇನಿದೆ…

Covid test

China; ಮಾನವರಿಗೆ ಅಪಾಯಕಾರಿ 39 ವೈರಸ್‌ ಪತ್ತೆ

joe-bidden

Biden-Modi ದೂರವಾಣಿ ಮಾತುಕತೆ: ಬಾಂಗ್ಲಾ ಬಗ್ಗೆ ಕಳವಳ

canada

Canada; ಬೆಂಬಲ ಹಿಂಪಡೆದ ಎನ್‌ಡಿಪಿ: ಜಸ್ಟಿನ್‌ ಸರಕಾರಕ್ಕೆ ಸಂಕಷ್ಟ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.