ಟ್ಯಾಟೂ ಪ್ರಿಯರೇ ಎಚ್ಚರ: ಟ್ಯಾಟೂ ಇಂಕ್‌ನಲ್ಲಿ ಕ್ಯಾನ್ಸರ್‌ ಅಂಶ ಪತ್ತೆ!

ಸ್ಟೇಟ್ ಯೂನಿವರ್ಸಿಟಿ ಆಫ್ ನ್ಯೂಯಾರ್ಕ್ ವರದಿಯಲ್ಲಿ ಬಹಿರಂಗ

Team Udayavani, Aug 26, 2022, 5:10 PM IST

13tattoo

ನ್ಯೂಯಾರ್ಕ್: ಟ್ಯಾಟೂ ಹಾಕಿಸಿಕೊಳ್ಳುವುದು ಒಂದು ರೀತಿಯ ಟ್ರೆಂಡ್, ಅದರಲ್ಲೂ ಹೊಸ ಹೊಸ ಬಗೆಯ ಡಿಸೈನ್​ಗಳನ್ನು ಹುಡುಕಿ ತಿಂಗಳುಗಟ್ಟಲೇ ಆಲೋಚಿಸಿ ಜನರು ದೇಹದ ವಿವಿಧ ಭಾಗಗಳಲ್ಲಿ ಹಚ್ಚೆ ಹಾಕಿಸಿಕೊಳ್ಳುತ್ತಾರೆ. ಆದರೆ ಆ ಟ್ಯಾಟೂವಿನಿಂದ ಕ್ಯಾನ್ಸರ್ ಕೂಡ ಬರಬಹುದು ಎನ್ನುವ ಆತಂಕಕಾರಿ ವಿಚಾರ ಅಧ್ಯಯನದಿಂದ ಬಯಲಾಗಿದೆ.

ಸ್ಟೇಟ್ ಯೂನಿವರ್ಸಿಟಿ ಆಫ್ ನ್ಯೂಯಾರ್ಕ್ (SUNY) ನ ವಿಜ್ಞಾನಿಗಳು ಕೈಗೊಂಡ ಅಧ್ಯಯನದಲ್ಲಿ ಶೇ. 50 ರಷ್ಟು ಟ್ಯಾಟೂ ಇಂಕ್‌ಗಳಲ್ಲಿ ಕ್ಯಾನ್ಸರ್‌ ಕಾರಣವಾಗುವ ಅಂಶಗಳು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ಈ ಹೊಸ ಅಧ್ಯಯನಕ್ಕಾಗಿ ವಿವಿಧ ಜನಪ್ರಿಯ 100 ಟ್ಯಾಟೂ ಮಾದರಿಗಳನ್ನು ವಿಶ್ಲೇಷಿಸಲಾಗಿದ್ದು, ಶೇ. 50 ರಷ್ಟು, ಹಚ್ಚೆ ಶಾಯಿಗಳು ಕ್ಯಾನ್ಸರ್‌ಗೆ ಕಾರಣವಾಗುವ ರಾಸಾಯನಿಕಗಳನ್ನು ಒಳಗೊಂಡಿವೆ.  ಶಾಯಿಯಲ್ಲಿರುವ ಪಿಗ್ಮೆಂಟ್ ಮತ್ತು ಕ್ಯಾರಿಯರ್ ದ್ರಾವಣವು ಹಚ್ಚೆಗಳನ್ನು ಎಂದಿಗೂ ತೆಗೆದುಹಾಕದೆ ದೇಹದ ಮೇಲೆ ಉಳಿಯಲು ಕಾರಣವಾಗಿದೆ.

ವಿಜ್ಞಾನಿಗಳು ವಿಶ್ಲೇಷಿಸಿದ 100 ಶಾಯಿಗಳಲ್ಲಿ, 23 ಶಾಯಿಗಳು ಅಜೋ ಬಣ್ಣಗಳನ್ನು ಒಳಗೊಂಡಿರುವುದು ಕಂಡುಬಂದಿದೆ. ಸಾಮಾನ್ಯವಾಗಿ, ಅಜೋ ಸಿಂಥೆಟಿಕ್ ಡೈಗಳನ್ನು ಆಹಾರ, ಸೌಂದರ್ಯ ಮತ್ತು ಬಟ್ಟೆಗಳಲ್ಲಿ ಬಳಸಲಾಗುತ್ತದೆ.

ರಾಸಾಯನಿಕವಾಗಿ ಇವು ಸುರಕ್ಷಿತವಾಗಿದ್ದರೂ, ಬ್ಯಾಕ್ಟೀರಿಯಾ, ಯುವಿ ಕಿರಣಗಳು ಅಥವಾ ಅತಿಯಾದ ಸೂರ್ಯನ ಬೆಳಕಿಗೆ ಒಡ್ಡಿಕೊಂಡಾಗ ಕ್ಯಾನ್ಸರ್-ಉಂಟುಮಾಡುವ ಸಂಯುಕ್ತಗಳಾಗಬಹುದು ಎಂದು ಈ ಅಧ್ಯಯನ ಬಹಿರಂಗಪಡಿಸಿದೆ.

ಇದನ್ನೂ ಓದಿ: ಕಾಂಗ್ರೆಸ್ ಗೆ ಗುಡ್ ಬೈ; ಜಮ್ಮು-ಕಾಶ್ಮೀರದಲ್ಲಿ ಆಜಾದ್ ಹೊಸ ಪಕ್ಷ ಸ್ಥಾಪನೆ: ವರದಿ

ಟ್ಯಾಟೂ ಉಪಕರಣಗಳನ್ನು ಸರಿಯಾಗಿ ಶುಚಿಗೊಳಿಸದೇ ಉಪಯೋಗಿಸಿದರೆ, ಚರ್ಮ ಕೆರೆತ, ಜಾಂಡೀಸ್ ನಂತಹ ರಕ್ತಸಂಬಂಧಿ ಕಾಯಿಲೆಗಳು ಬರುವ ಅಪಾಯವಿದೆ ಎಂದು ಸಂಶೋಧಕರು ಎಚ್ಚರಿಸಿದ್ದಾರೆ. ಹಚ್ಚೆಯಲ್ಲಿನ ಅಜೋ ಸಂಯುಕ್ತಗಳು ಹೆಚ್ಚು ಬಿಸಿಲು ಮತ್ತು ಹೆಚ್ಚು ಬ್ಯಾಕ್ಟೀರಿಯಾಕ್ಕೆ ಒಡ್ಡಿಕೊಂಡರೆ ಕಾರ್ಸಿನೋಜೆನಿಕ್ ಆಗುವ ಅಪಾಯವಿದೆ ಎಂದು ಅಧ್ಯಯನದಿಂದ ತಿಳಿದುಬಂದಿದೆ.

ಟಾಪ್ ನ್ಯೂಸ್

Punjab; Aam Aadmi leader shot by Akali Dal leader

Punjab; ಆಮ್‌ ಆದ್ಮಿ ನಾಯಕನಿಗೆ ಗುಂಡೇಟು ಹೊಡೆದ ಅಕಾಲಿ ದಳ ಮುಖಂಡ

10-ckm

Chikkamagaluru: ಪ್ರವಾಸಿಗರನ್ನು ಕರೆತಂದಿದ್ದ ಬೆಂಗಳೂರಿನ ಚಾಲಕ ಹೃದಯಾಘಾತದಿಂದ ಮೃತ್ಯು

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

9-mng-1

Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-health

Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ

3-doctor-patient

Doctor-Patient relationship: ವೈದ್ಯ – ರೋಗಿ ಸಂಬಂಧ ಮುಂದೇನು?

10-health

Asthma: ಎತ್ತರ ಪ್ರದೇಶಗಳು ಮತ್ತು ಅಸ್ತಮಾ

8-health

Iron Deficiency: ರಕ್ತಹೀನತೆ ಇಲ್ಲದ ಕಬ್ಬಿಣದಂಶ ಕೊರತೆ

7-social-media-2

Social Media: ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮಗಳ ಪರಿಣಾಮ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Punjab; Aam Aadmi leader shot by Akali Dal leader

Punjab; ಆಮ್‌ ಆದ್ಮಿ ನಾಯಕನಿಗೆ ಗುಂಡೇಟು ಹೊಡೆದ ಅಕಾಲಿ ದಳ ಮುಖಂಡ

8

Udupi: ಸಾಲು-ಸಾಲು ರಜೆ; ನವರಾತ್ರಿ ಸಂಭ್ರಮ; ಎಲ್ಲೆಡೆ ವಾಹನ ದಟ್ಟಣೆ

7(1)

Mangalore: ಊದು ಪೂಜೆ: ಹುಲಿ ವೇಷಕ್ಕೆ ಮುಹೂರ್ತ!

ಟ್ಯಾಂಕ್ ನೀರಿಗೆ ವಿಷ, ಬೆಚ್ಚಿಬಿದ್ದ ಗ್ರಾಮಸ್ಥರು

Hatti: ಟ್ಯಾಂಕ್ ನೀರಿಗೆ ವಿಷ, ಬೆಚ್ಚಿಬಿದ್ದ ಗ್ರಾಮಸ್ಥರು

6

Basroor- ಕುಂದಾಪುರ ಹೆದ್ದಾರಿ ಬದಿ ಹುಲ್ಲು ಕಟಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.