ದೇಶದ ಒಳಿತಿಗಾಗಿ ಮೌನವಾಗಿರುವೆ: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್
Team Udayavani, Oct 29, 2022, 9:15 PM IST
ಇಸ್ಲಾಮಾಬಾದ್: “ಮೌನವಾಗಿರುತ್ತೇನೆ. ಪಾಕಿಸ್ತಾನ ಮತ್ತು ಸರ್ಕಾರಿ ಸಂಸ್ಥೆಗಳನ್ನು ಹಾಳು ಮಾಡಲು ಬಯಸುವುದಿಲ್ಲ,’ ಎಂದು ಪಾಕ್ ಮಾಜಿ ಪ್ರಧಾನಿ, ತೆಹ್ರೀಕ್-ಎ-ಇನ್ಸಾಫ್(ಪಿಟಿಐ) ಪಕ್ಷದ ಮುಖ್ಯಸ್ಥ ಇಮ್ರಾನ್ ಖಾನ್ ಹೇಳಿದರು.
ಈ ವರ್ಷದ ಮಾರ್ಚ್ನಲ್ಲಿ ರಾಜಕೀಯ ಪ್ರಕ್ಷುಬ್ಧತೆ ವೇಳೆ ತಮ್ಮ ಸರ್ಕಾರವನ್ನು ಬೆಂಬಲಿಸುವಂತೆ ಕೋರಿ ಇಮ್ರಾನ್ ಖಾನ್ ತಮಗೆ ಲಾಭದಾಯಕ ಕೊಡುಗೆಯ ಪ್ರಸ್ತಾಪ ನೀಡಿದ್ದರು ಎಂದು ಪಾಕಿಸ್ತಾನದ ಐಎಸ್ಐ ಮುಖ್ಯಸ್ಥ ಜನರಲ್ ಖಮರ್ ಜಾವೇದ್ ಬಾಜ್ವಾ ಅವರ ಹೇಳಿಕೆಗೆ ಪ್ರತಿಯಾಗಿ ಇಮ್ರಾನ್ ಈ ಮಾತುಗಳನ್ನಾಡಿದ್ದಾರೆ.
ಅವಧಿ ಪೂರ್ವ ಚುನಾವಣೆಗೆ ಆಗ್ರಹಿಸಿ ಲಾಹೋರ್ನಿಂದ ಇಸ್ಲಾಮಾಬಾದ್ವರೆಗೆ ಹಮ್ಮಿಕೊಂಡಿರುವ ಪ್ರತಿಭಟನಾ ಮೆರವಣಿಗೆ ಅಂಗವಾಗಿ ಲಾಹೋರ್ನ ಪ್ರಸಿದ್ಧ ಲಿಬರ್ಟಿ ಚೌಕದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, “ಈ ರ್ಯಾಲಿಯು ರಾಜಕೀಯ ಅಥವಾ ವೈಯಕ್ತಿಕ ಹಿತಾಸಕ್ತಿಗಾಗಿ ಅಲ್ಲ. ಬದಲಾಗಿ ನಿಜವಾದ ಸ್ವಾತಂತ್ರ್ಯ ಪಡೆಯಲು. ಎಲ್ಲಾ ನಿರ್ಧಾರಗಳನ್ನು ಪಾಕಿಸ್ತಾನದಲ್ಲಿ ಮಾಡಲಾಗಿದೆ ಹೊರತು ಲಂಡನ್ ಅಥವಾ ವಾಷಿಂಗ್ಟನ್ನಲ್ಲಿ ಅಲ್ಲ ಎಂದು ಖಚಿತಪಡಿಸಲು,’ ಎಂದರು.
“ಪಾಕಿಸ್ತಾನವನ್ನು ಸ್ವತಂತ್ರ ರಾಷ್ಟ್ರವನ್ನಾಗಿ ಮಾಡುವುದೇ ನನ್ನ ಏಕೈಕ ಗುರಿ,’ ಎಂದೂ ಹೇಳಿದರು.
ವಸತಿಗೆ ನಿರ್ಬಂಧ:
ಖಾನ್ ನೇತೃತ್ವದ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸುವವರಿಗೆ ವಸತಿ ಸೌಕರ್ಯ ಒದಗಿಸದಂತೆ ಹೋಟೆಲ್ ಮತ್ತು ಅತಿಥಿ ಗೃಹಗಳನ್ನು ಇಸ್ಲಾಮಾಬಾದ್ ಪೊಲೀಸರು ಶನಿವಾರ ನಿರ್ಬಂಧಿಸಿದ್ದಾರೆ. ಇನ್ನೊಂದೆಡೆ, ಪಿಟಿಐ ಪಕ್ಷದ ನಾಯಕರ ಭಾಷಣ ಮತ್ತು ಮೆರವಣಿಗೆಯನ್ನು ನೇರಪ್ರಸಾರ ಮಾಡದಂತೆ ಅಲ್ಲಿನ ದೂರದರ್ಶನ ವಾಹಿನಿಗಳಿಗೆ ಪಾಕಿಸ್ತಾನ ವಿದ್ಯುನ್ಮಾನ ಮಾಧ್ಯಮ ನಿಯಂತ್ರಣ ಪ್ರಾಧಿಕಾರವು (ಪಿಇಎಂಆರ್ಎ)ನಿರ್ದೇಶನ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ
Zakir Naik ವಿವಾದ; ಎಲ್ಲರೂ ಅಲ್ಲಾಹನನ್ನಷ್ಟೇ ಪ್ರಾರ್ಥಿಸಿದರೆ ಶಾಂತಿ…
Iran ಅಣ್ವಸ್ತ್ರ ಕೇಂದ್ರದ ಮೇಲೆ ದಾಳಿ ಮಾಡಿ: ಇಸ್ರೇಲ್ಗೆ ಟ್ರಂಪ್
Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು
Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!
ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್
Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !
Bigg Boss Kannada11: ಬಿಗ್ ಬಾಸ್ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?
Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.