ಪರಿಸರದ ರಕ್ಷಣೆಗೆ ಇಂದೇ ಕಾರ್ಯೋನ್ಮುಖರಾಗೋಣ: ವಿಶ್ವಸಂಸ್ಥೆಯ ಪರಿಸರ ಸಮಾವೇಶದಲ್ಲಿ ಮೋದಿ ಮಾತು


Team Udayavani, Sep 23, 2019, 10:44 PM IST

Modi-UN

ನ್ಯೂಯಾರ್ಕ್: ವಿಶ್ವ ಪರಿಸರ ಸಂರಕ್ಷಣೆಯ ವಿಚಾರದಲ್ಲಿ ಮಾತನಾಡುವ ಸಮಯ ಮುಗಿದಿದೆ ಇದೀಗ ನಾವೆಲ್ಲರೂ ಪರಿಸರವನ್ನು ರಕ್ಷಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕಾದ ಅನಿವಾರ್ಯತೆ ಒದಗಿಬಂದಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಭಿಪ್ರಾಯಪಟ್ಟಿದ್ದಾರೆ. ವಿಶ್ವಸಂಸ್ಥೆಯ ಪರಿಸರ ಕಾರ್ಯಪಡೆಯ ಸಮಾವೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಅವರಿಂದು ಮಾತನಾಡುತ್ತಾ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಜಗತ್ತು ಇಂದು ನವೀಕರಿಸಬಹುದಾದ ನೈಸರ್ಗಿಕ ಸಂಪನ್ಮೂಲಗಳ ಬಳಕೆಗೆ ಹೆಚ್ಚು ಒತ್ತನ್ನು ನೀಡಬೇಕು ಮತ್ತು ನವೀಕರಿಸಲಾಗದ ನೈಸರ್ಗಿಕ ಸಂಪನ್ಮೂಲಗಳ ಬಳಕೆಯನ್ನು ಕಡಿಮೆ ಮಾಡಬೇಕು ಎಂದೂ ಸಹ ಪ್ರಧಾನಿ ಮೋದಿ ಅವರು ವಿಶ್ವ ಸಮುದಾಯಕ್ಕೆ ಕರೆ ನೀಡಿದರು.

ಇದಕ್ಕೆ ಪೂರಕವಾಗಿ ಸೌರಶಕ್ತಿಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವಲ್ಲಿ ಭಾರತ ಪ್ರಾರಂಭಿಸಿರುವ ಯೋಜನೆಗಳ ಕುರಿತಾಗಿಯೂ ಮೋದಿ ಅವರು ವಿಶ್ವ ಸಮುದಾಯಕ್ಕೆ ಮಾಹಿತಿ ನೀಡಿದರು. ಮತ್ತು ಭಾರತದ ಈ ಮಹತ್ವಾಕಾಂಕ್ಷಿ ಕಾರ್ಯದಲ್ಲಿ 80 ದೇಶಗಳು ಈಗಾಗಲೇ ಕೈಜೋಡಿಸಿವೆ ಎಂಬ ವಿಚಾರವನ್ನೂ ಸಹ ಮೋದಿ ಅವರು ಸಭೆಯ ಗಮನಕ್ಕೆ ತಂದರು.

ಪರಿಸರ ರಕ್ಷಣೆಯ ವಿಚಾರದಲ್ಲಿ ಈಗಾಗಲೇ ಪರಿಸ್ಥಿತಿ ವಿಕೋಪಕ್ಕೆ ಹೋಗಿರುವ ಕಾರಣ ಇದರ ರಕ್ಷಣೆಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆಯೂ ಸಹ ಪ್ರಧಾನಿ ಮೋದಿ ಅವರು ವಿಶ್ವದ ವಿವಿಧ ದೇಶಗಳ ನಾಯಕರನ್ನು ಒತ್ತಾಯಿಸಿದರು. ‘ರಾಶಿಗಟ್ಟಲೆ ಮಾತನಾಡುವುದಕ್ಕಿಂತ ಒಂದು ಚಿಟಿಕೆಯಷ್ಟು ಕ್ರಿಯೆ ಪರಿಣಾಮವನ್ನು ನೀಡಬಲ್ಲದು’ ಎಂಬುದು ಪ್ರಧಾನಿ ಮೋದಿ ಅವರ ಅಭಿಪ್ರಾಯವಾಗಿತ್ತು.

ಹವಾಮಾನ ಬದಲಾವಣೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಭಾರತ ಹಮ್ಮಿಕೊಂಡಿರುವ ವಿವಿಧ ಅಭಿಯಾನಗಳ ಕುರಿತಾಗಿಯೂ ಸಹ ಪ್ರಧಾನಿ ಮೋದಿ ಅವರು ತಮ್ಮ ಭಾಷಣದಲ್ಲಿ ವಿವರಿಸಿದರು. ಅದರಲ್ಲಿ 150 ಮಿಲಿಯನ್ ಕುಟುಂಬಗಳಿಗೆ ಅಡುಗೆ ಅನಿಲ ಸಂಪರ್ಕ ಒದಗಿಸಿರುವುದು, ಜಲಸಂಪನ್ಮೂಲಗಳ ಅಭಿವೃದ್ಧಿಗೆ ಹಮ್ಮಿಕೊಂಡಿರುವ ‘ಜಲ ಜೀವನ್ ಮಿಶನ್’, ಜಲಮೂಲಗಳ ರಕ್ಷಣೆ ಮತ್ತು ಮಳೆ ಕೊಯ್ಲು ವಿಧಾನ ಮೊದಲಾದವುಗಳ ಕುರಿತಾಗಿ ಮೋದಿ ಅವರು ಜಾಗತಿಕ ನಾಯಕರ ಗಮನ ಸೆಳೆಯುವ ಪ್ರಯತ್ನವನ್ನು ಮಾಡಿದರು.

ಈ ಬಾರಿಯ ಸ್ವಾತಂತ್ರ್ಯೋತ್ಸವ ದಿನಾಚರಣೆಯಂದು ಒಮ್ಮೆಗೆ ಬಳಸಿ ಬಿಸಾಕುವ ಪ್ಲಾಸ್ಟಿಕ್ ಮುಕ್ತ ಅಭಿಯಾನಕ್ಕೆ ಚಾಲನೆ ನೀಡಿರುವುದನ್ನು ಮೋದಿ ಅವರು ಇದೇ ಸಂದರ್ಭದಲ್ಲಿ ಸ್ಮರಿಸಿಕೊಂಡರು ಹಾಗೂ ಪ್ಲಾಸ್ಟಿಕ್ ಬಳಕೆಯ ಕುರಿತಾಗಿ ಜಾಗತಿಕ ಮಟ್ಟದಲ್ಲಿಯೂ ಸಹ ಜಾಗೃತಿ ಮೂಡುತ್ತಿದೆ ಎಂಬ ವಿಶ್ವಾಸವನ್ನು ಮೋದಿ ಅವರು ಇದೇ ಸಂದರ್ಭದಲ್ಲಿ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.