Hajj: ಮೆಕ್ಕಾದಲ್ಲಿ ಬಿಸಿಲ ತಾಪ: ಭಾರತದ 98ಯಾತ್ರಿಕರು ಸೇರಿ ಮೃತರ ಸಂಖ್ಯೆ 1,301ಕ್ಕೆ ಏರಿಕೆ


Team Udayavani, Jun 24, 2024, 9:32 AM IST

Hajj: ಮೆಕ್ಕಾದಲ್ಲಿ ಬಿಸಿಲ ತಾಪ: ಭಾರತದ 98ಯಾತ್ರಿಕರು ಸೇರಿ ಮೃತರ ಸಂಖ್ಯೆ 1,301ಕ್ಕೆ ಏರಿಕೆ

ಮೆಕ್ಕಾ: ಸೌದಿ ಅರೇಬಿಯಾದಲ್ಲಿ ಹಜ್ ಯಾತ್ರಿಕರ ಸಾವಿನ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ. ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಬಿಸಿಲಿನ ಬೇಗೆಯಿಂದ ಈ ವರ್ಷ 1,301 ಹಜ್ ಯಾತ್ರಿಕರು ಮೃತಪಟ್ಟಿರುವುದಾಗಿ ವರದಿಯಾಗಿದೆ.

ಭಾನುವಾರ, ಸೌದಿ ಆರೋಗ್ಯ ಸಚಿವ ಫಹದ್ ಬಿನ್ ಅಬ್ದುರ್ರಹ್ಮಾನ್ ಅಲ್-ಜಲಾಜೆಲ್ ಅವರು ನೀಡಿರುವ ಮಾಹಿತಿ ಪ್ರಕಾರ ಮೃತಪಟ್ಟ 1,301ರಲ್ಲಿ 83% ಯಾತ್ರಿಕರು ಅನಧಿಕೃತವಾಗಿ ಬಂದವರು ಅಂದರೆ ನೋಂದಣಿ ಮಾಡಿಕೊಳ್ಳದೆ ಬಂದವರಾಗಿದ್ದು ಇಲ್ಲಿ ಅವರಿಗೆ ಉಳಿದುಕೊಳ್ಳಲು ಸರಿಯಾದ ವ್ಯವಸ್ಥೆ ಇಲ್ಲದೆ ಮೃತಪಟ್ಟಿರುವುದಾಗಿ ಹೇಳಿಕೊಂಡಿದ್ದಾರೆ.

ಘಟನೆ ಕುರಿತು ಹೇಳಿಕೆ ನೀಡಿರುವ ಸಚಿವರು, 95 ಯಾತ್ರಿಕರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಅವರಲ್ಲಿ ಕೆಲವರನ್ನು ರಾಜಧಾನಿ ರಿಯಾದ್‌ನಲ್ಲಿ ಚಿಕಿತ್ಸೆಗಾಗಿ ವಿಮಾನದಲ್ಲಿ ಕಳುಹಿಸಲಾಗಿದೆ ಎಂದು ಹೇಳಿದರು. ಸೌದಿಯಲ್ಲಿ ಹಜ್ ಯಾತ್ರಿಕರು ಮೃತಪಟ್ಟರೆ ಅಂತವರನ್ನು ಗುರುತಿಸುವುದು ಅತ್ಯಂತ ಕಷ್ಟಕರವಾದ ಕೆಲಸವಾಗಿದೆ ಏಕೆಂದರೆ ಮೃತ ವ್ಯಕ್ತಿಗಳು ನೋಂದಣಿ ಮಾಡದೇ ಬಂದಿರುವುದರಿಂದ ಅವರ ಬಳಿ ಯಾವುದೇ ಅಧಿಕೃತ ದಾಖಲೆಗಳು ಇರುವುದಿಲ್ಲ ಹಾಗಾಗಿ ಗುರುತು ಪತ್ತೆಹಚ್ಚುವ ಕೆಲಸ ಕಷ್ಟ ಎಂದು ಹೇಳಿದ್ದಾರೆ. ಗುರುತು ಪತ್ತೆ ಹಚ್ಚಲಾಗದ ಯಾತ್ರಾರ್ಥಿಗಳನ್ನು ಮೆಕ್ಕಾದಲ್ಲಿ ಸಮಾಧಿ ಮಾಡಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ಮೃತರಲ್ಲಿ ಈಜಿಪ್ಟ್ ನಾಗರಿಕರೇ ಹೆಚ್ಚು:
ಬಿಸಿಲಿನ ತಾಪಕ್ಕೆ ಮೆಕ್ಕಾದಲ್ಲಿ ಮೃತಪಟ್ಟವರಲ್ಲಿ 660ಕ್ಕೂ ಹೆಚ್ಚು ಈಜಿಪ್ಟ್ ನಾಗರಿಕರು ಸೇರಿದ್ದಾರೆ ಎಂದು ಕೈರೋದಲ್ಲಿ ಸೌದಿ ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ. ಇವರಲ್ಲಿ 31 ಮಂದಿಯನ್ನು ಹೊರತುಪಡಿಸಿ ಎಲ್ಲರೂ ಅನಧಿಕೃತ ಯಾತ್ರಿಗಳು. ಸೌದಿ ಅರೇಬಿಯಾದಲ್ಲಿ ಹಲವಾರು ಅನಧಿಕೃತ ಹಜ್ ಯಾತ್ರಾರ್ಥಿಗಳು ಸಾವನ್ನಪ್ಪಿದ ನಂತರ, ಅನಧಿಕೃತ ಯಾತ್ರಿಕರಿಗೆ ಸೌದಿ ಅರೇಬಿಯಾಕ್ಕೆ ಪ್ರಯಾಣಿಸಲು ಸಹಾಯ ಮಾಡುತ್ತಿದ್ದ 16 ಟ್ರಾವೆಲ್ ಏಜೆನ್ಸಿಗಳ ಪರವಾನಗಿಯನ್ನು ಈಜಿಪ್ಟ್ ರದ್ದುಗೊಳಿಸಿದೆ. ಅಡಿಕ್ರಿಗಳ ಮಾಹಿತಿ ಪ್ರಕಾರ ಮೆಕ್ಕಾದ ಅಲ್-ಮುಯಿಸ್ಸಾಮ್ ಪ್ರದೇಶದಲ್ಲಿ ಇರುವ ತುರ್ತು ಸಂಕೀರ್ಣದಲ್ಲಿ ಹೆಚ್ಚಿನ ಸಾವು ಸಂಭವಿಸಿವೆ ಎಂದು ಹೇಳಿದ್ದಾರೆ.

ಈ ವರ್ಷ ಈಜಿಪ್ಟ್ ಮೆಕ್ಕಾಕ್ಕೆ 50 ಸಾವಿರಕ್ಕೂ ಹೆಚ್ಚು ಅಧಿಕೃತ ಯಾತ್ರಿಕರನ್ನು ಕಳುಹಿಸಿದೆ.

ಮೃತರಲ್ಲಿ ಹೆಚ್ಚುನವರು ಕಾಲ್ನಡಿಗೆ ಮಾಡಿದವರು:
ಸೌದಿ ಅಧಿಕಾರಿಗಳು ನೋಂದಣಿ ಮಾಡದೇ ಬರುತ್ತಿರುವ ಯಾತ್ರಿಕರ ಮೇಲೆ ಕಠಿಣ ಕ್ರಮ ಕೈಗೊಂಡಿದ್ದರೂ ಇದರ ಹೊರತಾಗಿಯೂ, ಹೆಚ್ಚಿನ ಸಂಖ್ಯೆಯ ಈಜಿಪ್ಟ್ ಯಾತ್ರಿಕರು ಮೆಕ್ಕಾ ಮತ್ತು ಅದರ ಸುತ್ತಮುತ್ತಲಿನ ಪವಿತ್ರ ಸ್ಥಳಗಳನ್ನು ತಲುಪುವಲ್ಲಿ ಯಶಸ್ವಿಯಾದರು. ಈ ಯಾತ್ರಾರ್ಥಿಗಳಲ್ಲಿ ಹೆಚ್ಚಿನವರು ಕಾಲ್ನಡಿಗೆಯಲ್ಲಿ ಮೆಕ್ಕಾವನ್ನು ತಲುಪಿದರು, ಇದರಿಂದಾಗಿ ಅವರು ಬಿಸಿಲಿನ ಶಾಖದಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

ಮೃತರು ಯಾವ ದೇಶಕ್ಕೆ ಸೇರಿದವರು:
ಮಾಧ್ಯಮ ವರದಿಯ ಪ್ರಕಾರ ಮೃತರಲ್ಲಿ ಈಜಿಪ್ಟ್ ನ 660, ಇಂಡೋನೇಷ್ಯಾದ 165, ಭಾರತದ 98 ಯಾತ್ರಿಕರು ಮತ್ತು ಜೋರ್ಡಾನ್, ಟ್ಯುನಿಷಿಯಾ, ಮೊರಾಕೊ, ಅಲ್ಜೀರಿಯಾ ಮತ್ತು ಮಲೇಷ್ಯಾದ ಡಜನ್ಗಟ್ಟಲೆ ಯಾತ್ರಿಕರು ಸೇರಿದ್ದಾರೆ.

ಇದನ್ನೂ ಓದಿ: Russia: ಡಾಗೆಸ್ತಾನ್‌ನಲ್ಲಿ ಭಯೋತ್ಪಾದಕರ ದಾಳಿ, ಪಾದ್ರಿ, ಪೊಲೀಸರು ಸೇರಿ 15 ಮಂದಿ ಮೃತ್ಯು

ಟಾಪ್ ನ್ಯೂಸ್

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

Ullal: ಟಿಪ್ಪರ್‌ ಅಪಘಾತ; ಗಾಯಾಳು ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

Ullal: ಟಿಪ್ಪರ್‌ ಅಪಘಾತ; ಗಾಯಾಳು ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ…  ಆರನೇ ಮಹಡಿಯಿಂದ ಬಿದ್ದು ಮೃತಪಟ್ಟ

Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ… ಆರನೇ ಮಹಡಿಯಿಂದ ಬಿದ್ದು ಮೃತ್ಯು

Bengaluru Crime: ಹವಾ ತೋರಿಸಲು ಹೋಗಿ ಹೆಣವಾದ!

Bengaluru Crime: ಹವಾ ತೋರಿಸಲು ಹೋಗಿ ಹೆಣವಾದ!

Arrested: ನಕಲಿ ಎ.ಕೆ.47 ಗನ್‌ ಬಳಸಿದ್ದ ರೀಲ್‌ ಶೋಕಿಲಾಲ ಬಂಧನ

Arrested: ನಕಲಿ ಎ.ಕೆ.47 ಗನ್‌ ಬಳಸಿದ್ದ ರೀಲ್‌ ಶೋಕಿಲಾಲ ಬಂಧನ

ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್

ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್

Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು

Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

Australia;ಇನ್ನು ವಿದ್ಯಾರ್ಥಿ ಶುಲ್ಕ ದುಪ್ಪಟ್ಟು: ಭಾರತೀಯರಿಗೂ ಸಂಕಷ್ಟ

arrested

POK ರಾವಲ್‌ಕೋಟ್‌ ಜೈಲಿಂದ 18 ಕೈದಿಗಳು ಪರಾರಿ!

1-kim-un-jang

North Korea; ದಕ್ಷಿಣ ಕೊರಿಯ ಹಾಡು ಕೇಳಿದ ಯುವಕನ ಶಿರಚ್ಛೇದ!

joe-bidden

US; ಹೆಚ್ಚು ಕೆಲಸ ಮಾಡಿದರೆ ಅಧ್ಯಕ್ಷ ಬೈಡೆನ್‌ಗೆ ಆಯಾಸ?

rishi-sunak

Election:ಬ್ರಿಟನ್‌ ಪಿಎಂ ಸುನಕ್‌ ಟೆಂಪಲ್‌ ರನ್‌!

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್‌; ಯುವಕನ ವಿರುದ್ಧ ಎಫ್ಐಆರ್‌

Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್‌; ಯುವಕನ ವಿರುದ್ಧ ಎಫ್ಐಆರ್‌

BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ

BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ

Missing Case: ನಾಪತ್ತೆಯಾಗಿದ್ದ ಕಾನ್‌ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ

Missing Case: ನಾಪತ್ತೆಯಾಗಿದ್ದ ಕಾನ್‌ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

Ullal: ಟಿಪ್ಪರ್‌ ಅಪಘಾತ; ಗಾಯಾಳು ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

Ullal: ಟಿಪ್ಪರ್‌ ಅಪಘಾತ; ಗಾಯಾಳು ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.