![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 26, 2022, 2:42 PM IST
ಕೈವ್: ಉಕ್ರೇನ್ ರಾಜಧಾನಿ ಕೈವ್ ಕಡೆಗೆ ಬರುತ್ತಿದ್ದ ರಷ್ಯಾದ ಮಿಲಿಟರಿ ಬೆಂಗಾವಲು ಪಡೆಯನ್ನು ತಡೆಯಲು ಉಕ್ರೇನಿಯನ್ ವ್ಯಕ್ತಿಯೊಬ್ಬರು ಪ್ರಯತ್ನಿಸುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
ಮಾಸ್ಕೋ ಮತ್ತು ಕೈವ್ ನಡುವಿನ ಉದ್ವಿಗ್ನತೆಯ ನಡುವೆ ಈ ಘಟನೆ ನಡೆದಿದೆ. ರಷ್ಯಾದ ಪಡೆಗಳು ಉಕ್ರೇನಿಯನ್ ರಾಜಧಾನಿಗೆ ಮುತ್ತಿಗೆ ಹಾಕಿದ್ದು, ಭಾರೀ ಹೋರಾಟ ನಡೆಯುತ್ತಿದೆ ಎಂದು ವರದಿಗಳು ಹೇಳಿವೆ.
ವೀಡಿಯೊದಲ್ಲಿ, ಆ ವ್ಯಕ್ತಿ ರಷ್ಯಾದ ಟ್ಯಾಂಕ್ಗಳು ಸಾಲುಗಟ್ಟಿ ರಾಜಧಾನಿ ಕೈವ್ ಗೆ ಆಗಮಿಸಿದಾಗ ವ್ಯಕ್ತಿ ಮುಂದೆ ನಿಂತಿರುವುದನ್ನು ಕಾಣಬಹುದು.
ಈತನ್ಮಧ್ಯೆ, ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ರಷ್ಯಾದ ಪಡೆಗಳು ಕೈವ್ ನಗರವನ್ನು ನಾಶ ಮಾಡಲು ಪ್ರಯತ್ನಿಸುತ್ತವೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಉಕ್ರೇನ್ ವಿಚಾರದಲ್ಲಿ ಭಾರತದ ವಿದೇಶಾಂಗ ನೀತಿ ವಿಫಲ : ಕಾಂಗ್ರೆಸ್ ಟೀಕೆ
“ನಾನು ಮುಕ್ತವಾಗಿ ಹೇಳಬೇಕಿದೆ. ಈ ರಾತ್ರಿ ಹಗಲಿಗಿಂತಲೂ ಹೆಚ್ಚು ಕಷ್ಟಕರವಾಗಿರುತ್ತದೆ. ನಮ್ಮ ರಾಜ್ಯದ ಅನೇಕ ನಗರಗಳು ದಾಳಿಗೆ ಒಳಗಾಗಿವೆ” ಎಂದು ಝೆಲೆನ್ಸ್ಕಿ ದೇಶವನ್ನುದ್ದೇಶಿಸಿ ವೀಡಿಯೊ ಭಾಷಣದಲ್ಲಿ ಹೇಳಿದರು.
✊?Українець кидається під ворожу техніку, щоб окупанти не проїхали pic.twitter.com/cZ29kknqhB
— НВ (@tweetsNV) February 25, 2022
ಎಲ್ಲಿಗೂ ಹೋಗಲ್ಲ: ರಷ್ಯಾದ ಪಡೆಗಳು ಕೀವ್ ನಗರವನ್ನು ಸುತ್ತುವರಿದಿದ್ದರೂ, ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಅಮೆರಿಕ ಸರ್ಕಾರದ ‘ಸ್ಥಳಾಂತರಿಸುವ ಪ್ರಸ್ತಾಪ’ವನ್ನು ತಿರಸ್ಕರಿಸಿದ್ದಾರೆ. ಅಧ್ಯಕ್ಷ ಝೆಲೆನ್ಸ್ಕಿ ತನ್ನ ದೇಶದಲ್ಲೇ ಉಳಿಯಲು ಮತ್ತು ಹೋರಾಡಲು ಇಚ್ಛಿಸಿದ್ದಾರೆ.
“ಹೋರಾಟ ಇಲ್ಲಿದೆ; ನನಗೆ ಮದ್ದುಗುಂಡುಗಳು ಬೇಕು, ಸವಾರಿ ಅಲ್ಲ” ಎಂದು ಝೆಲೆನ್ಸ್ಕಿ ಹೇಳಿದರು ಎಂದು ಅಮೆರಿಕದ ಹಿರಿಯ ಗುಪ್ತಚರ ಮೂಲನ್ನು ಉಲ್ಲೇಖಿಸಿ ಎಪಿ ವರದಿ ಮಾಡಿದೆ.
ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಉಕ್ರೇನ್ ಸರ್ಕಾರವನ್ನು ಉರುಳಿಸಲು ಮತ್ತು ಅದನ್ನು ತಮ್ಮದೇ ಆದ ಆಡಳಿತದೊಂದಿಗೆ ಸೇರಿಸಲು ನಿರ್ಧರಿಸಿದ್ದಾರೆ ಎಂಬ ಗುಪ್ತಚರ ವರದಿ ಆಧಾರದ ಮೇಲೆ ಝೆಲೆನ್ಸ್ಕಿಗೆ ಅಮೆರಿಕ ಹೇಳಿದೆ.
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
ರಷ್ಯಾ-ಉಕ್ರೇನ್ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.