Pak: ಪ್ರಿಯಕರನ ಜತೆ ಮದುವೆಗೆ ನಿರಾಕರಣೆ; ಕುಟುಂಬದ 13 ಸದಸ್ಯರಿಗೆ ವಿಷವಿಕ್ಕಿ ಕೊಂದ ಯುವತಿ
Team Udayavani, Oct 8, 2024, 12:05 PM IST
ಕರಾಚಿ: ತಾನು ಇಷ್ಟಪಟ್ಟ ಹುಡುಗನ ಜತೆ ವಿವಾಹವಾಗಲು ನಿರಾಕರಿಸಿದ ಮನೆಯವರ ಮೇಲೆ ಯುವತಿಯೊಬ್ಬಳು ಕೋಪದಲ್ಲಿ ಮಾಡಬಾರದ ಕೃತ್ಯವನ್ನು ಮಾಡಿ ಜೈಲು ಸೇರಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿರುವುದು ವರದಿಯಾಗಿದೆ.
ಪಾಕಿಸ್ತಾನದ ಖೈರಪುರ ಸಮೀಪದ ಹೈಬತ್ ಖಾನ್ ಬ್ರೋಹಿ ಗ್ರಾಮದಲ್ಲಿ ಆಗಸ್ಟ್ 19 ರಂದು ಈ ಘಟನೆ ಸಂಭವಿಸಿದ್ದು, ಭಾನುವಾರ (ಅ.6ರಂದು) ಯುವತಿಯನ್ನು ಪೊಲೀಸರು ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಬಂಧಿಸಿರುವುದಾಗಿ ವರದಿಯಾಗಿದೆ.
ಏನಿದು ಘಟನೆ?: ಯುವತಿ ಯುವಕನೊಬ್ಬನನ್ನು ಇಷ್ಟಪಡುತ್ತಿದ್ದಳು. ಆತನೊಂದಿಗೆ ವಿವಾಹವಾಗುವ ನಿಟ್ಟಿನಲ್ಲಿ ಈ ವಿಚಾರವನ್ನು ತನ್ನ ಮನೆಯವರಿಗೆ ತಿಳಿಸಿದ್ದಾಳೆ. ಆದರೆ ಅಪ್ಪ- ಅಮ್ಮ ಸೇರಿದಂತೆ ಕುಟುಂಬಸ್ಥರೆಲ್ಲರೂ ಯುವತಿಯ ಪ್ರೀತಿಯನ್ನು ನಿರಾಕರಿಸಿದ್ದಾರೆ.
ಇದೇ ಕೋಪದಲ್ಲಿದ್ದ ಯುವತಿ ತನ್ನ ಪ್ರಿಯಕರನ ಜೊತೆ ಸಂಚು ರೂಪಿಸಿ ಮನೆಯರೆಲ್ಲರಿಗೂ ಊಟದಲ್ಲಿ ವಿಷ ಬೆರೆಸಿದ್ದಾಳೆ. ಊಟ ಸೇವಿಸಿದ ಕುಟುಂಬದ 13 ಮಂದಿಗೆ ಕೆಲವೇ ನಿಮಿಷದಲ್ಲಿ ಅನಾರೋಗ್ಯ ಕಾಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದರೆ ಯುವತಿಯ ಅಪ್ಪ – ಅಮ್ಮ ಸೇರಿದಂತೆ ಕುಟುಂಬದ 13 ಮಂದಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಮರಣೋತ್ತರ ಪರೀಕ್ಷೆ ನಡೆಸಿದಾಗ 13 ಮಂದಿ ವಿಷಪೂರಿತ ಆಹಾರದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸುದೀರ್ಘವಾಗಿ ತನಿಖೆ ನಡೆಸಿದಾಗ ಮನೆಯಲ್ಲಿ ರೊಟ್ಟಿ ಮಾಡಲು ಬಳಸುವ ಗೋಧಿಗೆ ಯುವತಿ ಮತ್ತು ಆಕೆಯ ಪ್ರಿಯಕರ ವಿಷ ಹಾಕಿರುವುದು ಗೊತ್ತಾಗಿದೆ. ಈ ವಿಚಾರ ಗೊತ್ತಾದ ಬಳಿಕ ಪೊಲೀಸರು ಯುವತಿಯನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel-Hamas War:ಹಮಾಸ್ ದಾಳಿಗೆ 1 ವರ್ಷ-ಇಸ್ರೇಲ್ ಮೇಲೆ ಹೆಜ್ಬುಲ್ಲಾ ದಾಳಿ, ಪ್ರತಿದಾಳಿ
Explosion: ಕರಾಚಿ ಏರ್ ಪೋರ್ಟ್ ಬಳಿ ಭೀಕರ ಸ್ಫೋಟ: ಇಬ್ಬರು ಚೀನಾ ಪ್ರಜೆಗಳು ಮೃತ್ಯು
Lebanon ಪೇಜರ್ ಸ್ಫೋ*ಟಕ್ಕೆ ಮೊಸಾದ್ 2 ವರ್ಷದ ಯೋಜನೆ ಹೇಗಿತ್ತು?
Canada: ವೇಟರ್ ಕೆಲಸಕ್ಕೆ 3,000 ಭಾರತೀಯ ವಿದ್ಯಾರ್ಥಿಗಳ ಕ್ಯೂ!
Pakistan; ರಾಜಕೀಯ ಅಸ್ಥಿರತೆಯ ಬಿರುಗಾಳಿ: ಇಮ್ರಾನ್ ಪರ ಭಾರೀ ಪ್ರತಿಭಟನೆ,ಹಿಂಸೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
RG Kar Hospital: ಕಿರಿಯ ವೈದ್ಯರ ಮುಷ್ಕರ ಬೆಂಬಲಿಸಿ ಹಿರಿಯ ವೈದ್ಯರಿಂದ ಸಾಮೂಹಿಕ ರಾಜೀನಾಮೆ
Haryana: ಕೇವಲ 210 ದಿನ ಸಿಎಂ ಆದರೂ ನಯಾಬ್ ಸಿಂಗ್ ಸೈನಿ ಹರ್ಯಾಣದ ʼನವಾಬʼನಾಗಿದ್ದು ಹೇಗೆ?
Sagara: ಎಲೆಲೆ, ಎಲೆ ಕೀಟ; ಅಪರೂಪಕ್ಕೆ ಕಂಡ ನೋಟ!
Manipal: ಮಣ್ಣಪಳ್ಳ ಕೆರೆಯೊಡಲಿಗೆ ತ್ಯಾಜ್ಯ;ಡಸ್ಟ್ಬಿನ್ ಅಳವಡಿಕೆ ಮಾಡಿದ್ದರೂ ಉಪಯೋಗ ಶೂನ್ಯ
Mumtaz Ali Case: ಪ್ರಮುಖ ಆರೋಪಿ ರೆಹಮತ್ ಸೇರಿ ಮೂವರನ್ನು ಬಂಧಿಸಿದ ಸಿಸಿಬಿ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.