![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 16, 2021, 8:47 AM IST
ಕೈರೋ: ಅಫ್ಘಾನಿಸ್ಥಾನದಲ್ಲಿ ನಮ್ಮ ಯುದ್ಧ ಅಂತ್ಯವಾಗಿದೆ. ಇನ್ನು ಮುಂದೆ ಅಂತಾರಾಷ್ಟ್ರೀಯ ಸಮುದಾಯದ ಜೊತೆ ಶಾಂತಿ ಸಂಬಂಧ ಬಯಸುವುದಾಗಿ ತಾಲಿಬಾನ್ ವಕ್ತಾರ ಹೇಳಿದ್ದಾರೆ.
ತಾಲಿಬಾನ್ ವಕ್ತಾರ ಮೊಹಮ್ಮದ್ ನಯೀಮ್ ಅವರು ಅಲ್ ಜಜೀರಾ ಟಿವಿಗೆ ನೀಡಿದ ಸಂದರ್ಶನದಲ್ಲಿ ತಾಲಿಬಾನ್ ಪ್ರತ್ಯೇಕವಾಗಿ ಬದುಕಲು ಬಯಸುವುದಿಲ್ಲ ಮತ್ತು ನಿಯಮಾವಳಿಗಳು ಮತ್ತು ಆಡಳಿತದ ರೂಪ ಶೀಘ್ರದಲ್ಲೇ ಸ್ಪಷ್ಟವಾಗುತ್ತದೆ ಎಂದು ಹೇಳಿದರು.
ಶರಿಯಾ ಕಾನೂನಡಿಯಲ್ಲೇ ತಾಲಿಬಾನ್ ಮಹಿಳಾ ಮತ್ತು ಅಲ್ಪಸಂಖ್ಯಾತರ ಹಕ್ಕುಗಳನ್ನು ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಗೌರವಿಸುತ್ತದೆ ಎಂದು ನಯೀಮ್ ಹೇಳಿದ್ದಾರೆ.
ಇದನ್ನೂ ಓದಿ:ತಾಲಿಬಾನ್ ತರ ಯೋಚಿಸಿದರೆ ,ಮಟ್ಟ ಹಾಕುವುದಕ್ಕೂ ಗೊತ್ತಿದೆ : ಭರತ್ ಶೆಟ್ಟಿ ವೈ
ತಾಲಿಬಾನ್ ಶಾಂತಿಯುತ ಸಂಬಂಧಗಳನ್ನು ಹೊಂದಲು ಬಯಸುತ್ತದೆ ಮತ್ತು ವಿದೇಶಗಳೊಂದಿಗೆ ಈಗಾಗಲೇ ತೆರೆದಿರುವ ಹಲವಾರು ಸಂವಹನ ಮಾರ್ಗಗಳನ್ನು ಅಭಿವೃದ್ಧಿಪಡಿಸಲು ಉತ್ಸುಕವಾಗಿದೆ. ಯಾವುದೇ ಸಮಸ್ಯೆಗಳನ್ನು ಬಗೆಹರಿಸಲು ನಮ್ಮೊಂದಿಗೆ ಚರ್ಚಿಸುವಂತೆ ನಾವು ಎಲ್ಲಾ ದೇಶಗಳು ಮತ್ತು ಘಟಕಗಳನ್ನು ಕೇಳಿ ಕೊಳ್ಳುತ್ತೇವೆಎಂದು ತಾಲಿಬಾನ್ ವಕ್ತಾರ ಸಂದರ್ಶನದಲ್ಲಿ ಹೇಳಿದರು.
ರವಿವಾರ ತಾಲಿಬಾನ್ ಉಗ್ರರು ಕಾಬೂಲ್ ಪ್ರವೇಶಿಸಿದ್ದಾರೆ. ಈ ಮೂಲಕ ಇಡೀ ದೇಶವೇ ಉಗ್ರರ ಪಾಲಾಗಿದ್ದು, 20 ವರ್ಷಗಳ ಬಳಿಕ ಮತ್ತೆ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಶಕೆ ಆರಂಭವಾಗಿದೆ. ತಾಲಿಬಾನ್ ಕಾಬೂಲ್ ಪ್ರವೇಶಿಸುತ್ತಿದ್ದಂತೆ ಅಫ್ಘಾನ್ ಅಧ್ಯಕ್ಷ ಅಶ್ರಫ್ ಘನಿ ದೇಶ ಬಿಟ್ಟು ಪರಾರಿಯಾಗಿದ್ದಾರೆ. ಈ ಬಗ್ಗೆ ಮಾತನಾಡಿದ ವಕ್ತಾರ ನಯೀಮ್, “ಘನಿ ತಪ್ಪಿಸಿಕೊಳ್ಳುವುದನ್ನು ನಾವು ನಿರೀಕ್ಷೆ ಮಾಡಿರಲಿಲ್ಲ. ಆತನ ಆಪ್ತರು ಕೂಡ ಅದನ್ನು ನಿರೀಕ್ಷಿಸಿರಲಿಲ್ಲ” ಎಂದು ಹೇಳಿದರು.
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
ರಷ್ಯಾ-ಉಕ್ರೇನ್ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.