![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 17, 2023, 10:39 AM IST
ಇಸ್ಲಾಮಾಬಾದ್:ಭಾರತದೊಂದಿಗಿನ ಮೂರು ಯುದ್ಧದಿಂದಾಗಿ ಜನರಿಗೆ ಹೆಚ್ಚು ಬಡತನ, ದುಃಖ ಮತ್ತು ನಿರುದ್ಯೋಗ ಹೆಚ್ಚಾಗಲು ಕಾರಣವಾಗಿದ್ದು, ಈ ಹಿನ್ನೆಲೆಯಲ್ಲಿ ಭಾರತ ಮತ್ತು ಪಾಕಿಸ್ತಾನವು ಕಾಶ್ಮೀರ ಸಮಸ್ಯೆಯನ್ನು ಮಾತುಕತೆ ಮೂಲಕ ಪರಿಹರಿಸಿಕೊಳ್ಳಬೇಕು ಎಂದು ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ತಿಳಿಸಿದ್ದಾರೆ.
ಇದನ್ನೂ ಓದಿ:‘ಮಿಸ್ ಮಂಗಳೂರು’ ಕಿರೀಟ ಮುಡಿಗೇರಿಸಿದ ಕಾಫಿನಾಡಿನ ಪ್ರತಿಭೆ ಸುಷ್ಮಾ ಎಸ್. ಶೆಟ್ಟಿ
“ಕಾಶ್ಮೀರದಂತಹ ಜ್ವಲಂತ ಗಂಭೀರವಾದ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವ ನಿಟ್ಟಿನಲ್ಲಿ ಪ್ರಾಮಾಣಿಕ ಮಾತುಕತೆ ಮೂಲಕವೇ ಬಗೆಹರಿಸಿಕೊಳ್ಳಬೇಕು ಎಂಬುದು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈ ಸಂದೇಶದ ಮೂಲಕ ಮನವಿ ಮಾಡಿಕೊಳ್ಳುತ್ತಿರುವುದಾಗಿ ಷರೀಫ್ ಖಾಸಗಿ ವಾಹಿನಿಗೆ ನೀಡಿದ್ದ ಸಂದರ್ಶನದಲ್ಲಿ ತಿಳಿಸಿರುವುದಾಗಿ ವರದಿಯಾಗಿದೆ.
ಜಮ್ಮು-ಕಾಶ್ಮೀರದಲ್ಲಿ ಭಾರತ ಮಾನವಹಕ್ಕು ಉಲ್ಲಂಘಿಸುತ್ತಿದ್ದು, ಅಲ್ಪಸಂಖ್ಯಾತರಿಗೆ ಕಿರುಕುಳ ನೀಡುತ್ತಿರುವುದಾಗಿ ಷರೀಫ್ ಆರೋಪಿಸಿದ್ದು, ಈ ಕೃತ್ಯವನ್ನು ನಿಲ್ಲಿಸುವ ಮೂಲಕ ಭಾರತ ಮಾತುಕತೆಗೆ ಸಿದ್ಧವಾಗಿದೆ ಎಂಬ ಸಂದೇಶವನ್ನು ಜಾಗತಿಕವಾಗಿ ರವಾನಿಸಬೇಕಾಗಿದೆ ಎಂದು ಷರೀಫ್ ತಿಳಿಸಿದ್ದಾರೆ.
“ಭಾರತ ಮತ್ತು ಪಾಕಿಸ್ತಾನ ನೆರೆಹೊರೆಯ ದೇಶಗಳಾಗಿವೆ. ನಾವು ಒಟ್ಟಿಗೆ ಬಾಳಬೇಕಾಗಿದೆ. ಶಾಂತಿಯುತವಾಗಿ ಬದುಕುವುದು, ಪ್ರಗತಿ ಸಾಧಿಸುವುದು ಅಥವಾ ಜಗಳವಾಡುವುದು ನಮಗೆ ಬಿಟ್ಟಿದ್ದು, ಇದರಿಂದ ಸಮಯ ವ್ಯರ್ಥ ಮತ್ತು ಸಂಪನ್ಮೂಲ ಕೂಡಾ ನಷ್ಟವಾದಂತೆ” ಎಂದು ಷರೀಫ್ ಹೇಳಿದ್ದಾರೆ.
ನಾವು ಭಾರತದ ಜೊತೆ ಮೂರು ಯುದ್ಧಗಳನ್ನು ಮಾಡಿದ್ದೇವೆ. ಆದರೆ ಇದರಿಂದ ನಮ್ಮ ಜನರಿಗೆ ಹೆಚ್ಚಿನ ದುಃಖ, ಬಡತನ ಮತ್ತು ನಿರುದ್ಯೋಗವನ್ನು ತಂದೊಡ್ಡಿತ್ತು. ಇದರಿಂದ ನಾವು ಪಾಠ ಕಲಿತಿದ್ದೇವೆ. ನಮ್ಮ ನಿಜವಾದ ಸಮಸ್ಯೆಗಳನ್ನು ಪರಿಹರಿಸಲು ಶಕ್ತರಾಗಿದ್ದೇವೆ ಎಂದು ಷರೀಫ್ ದುಬೈ ಮೂಲದ ಅಲ್ ಅರೇಬಿಯಾ ಟಿವಿ ಜೊತೆ ಮಾತನಾಡುತ್ತ ತಿಳಿಸಿರುವುದಾಗಿ ವರದಿಯಾಗಿದೆ.
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
ರಷ್ಯಾ-ಉಕ್ರೇನ್ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.