ಕೈಯಲ್ಲಿ ನಿತ್ಯಾನಂದನ ಟ್ಯಾಟೋ, ಮನದಲ್ಲಿ ನಿತ್ಯನ ಧ್ಯಾನ: ಯಾರು ಈಕೆ ವಿಜಯಪ್ರಿಯಾ?


Team Udayavani, Mar 2, 2023, 10:15 AM IST

TDY-2

ಹೊಸದಿಲ್ಲಿ: ಸ್ವಯಂ ಘೋಷಿತ ದೇವ ಮಾನವ ನಿತ್ಯಾನಂದ ನಿರ್ಮಿಸಿಕೊಂಡಿರುವ “ಯುನೈಟೆಡ್‌ ಸ್ಟೇಟ್ಸ್‌ ಆಫ್ ಕೈಲಾಸ’ರಾಷ್ಟ್ರದ ಪ್ರತಿನಿಧಿ ಸ್ವಿಜರ್‌ಲ್ಯಾಂಡ್‌ನ‌ ಜಿನಿವಾದಲ್ಲಿ ಕಳೆದ ವಾರ ನಡೆದ ವಿಶ್ವಸಂಸ್ಥೆಯ ಸಭೆಯಲ್ಲಿ ಭಾಗವಹಿಸಿ ,ಭಾರತದಿಂದ ನಿತ್ಯಾನಂದನಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ನಿತ್ಯಾನಂದನ ಪ್ರತಿನಿಧಿಗಳು ಆರೋಪಿಸಿದ್ದರು.

ನಿತ್ಯಾನಂದನ ಪರವಾಗಿ ಧ್ವನಿ ಎತ್ತಿದ “ಯುನೈಟೆಡ್‌ ಸ್ಟೇಟ್ಸ್‌ ಆಫ್ ಕೈಲಾಸ’ರಾಷ್ಟ್ರದ ಪ್ರತಿನಿಧಿಗಳಲ್ಲಿ ಒಬ್ಬಾಕೆಯ ಪೋಟೋ ಸೋಶಿಯಲ್‌ ಮೀಡಿಯಾದಲ್ಲಿ ಗಮನ ಸೆಳೆದಿತ್ತು. ಅಪ್ಪಟ ಹಿಂದೂ ಮಹಿಳೆಯಂತೆ ಸೀರೆಯುಟ್ಟು, ಸಂಪ್ರದಾಯವನ್ನು ಅನುಸರಿಸುವಂತೆ, ನಿತ್ಯಾನಂದನ ಪಟ್ಟ ಶಿಷ್ಯೆಯಂತೆ ಕಾಣುತ್ತಿದ್ದ ಮಹಿಳೆಯ ಹೆಸರು  ವಿಜಯಪ್ರಿಯಾ ನಿತ್ಯಾನಂದ.

ಮಹಿಳೆಯರಿಗೆ ಕಿರುಕುಳ, ಕಿಡ್ನ್ಯಾಪ್‌ ನಂತಹ ಪ್ರಕರಣದಲ್ಲಿ ಹೆಸರು ಕೇಳಿ ಬಂದ ಸ್ವಯಂ ಘೋಷಿತ ದೇವ ಮಾನವ ನಿತ್ಯಾನಂದ ಸದ್ಯ ತಮ್ಮದೇ ದೇವ ಲೋಕ “ಯುನೈಟೆಡ್‌ ಸ್ಟೇಟ್ಸ್‌ ಆಫ್ ಕೈಲಾಸʼದಲ್ಲಿದ್ದಾರೆ. ಈ ಕೈಲಾಸಕ್ಕೆ ಅಪಾರ ಭಕ್ತರು, ಹಿಂಬಾಲಕರಿದ್ದಾರೆ. ಆಯಾ ದೇಶದಲ್ಲಿ ಇದಕ್ಕೆ ಪ್ರತಿನಿಧಿಗಳೂ ಇದ್ದಾರೆ.

ವಿಶ್ವಸಂಸ್ಥೆ ವತಿಯಿಂದ ಆಯೋಜಿಸಲಾಗಿದ್ದ ಆರ್ಥಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಹಕ್ಕುಗಳ ಮಹಾಸಭೆಯಲ್ಲಿ“ಯುನೈಟೆಡ್‌ ಸ್ಟೇಟ್ಸ್‌ ಆಫ್ ಕೈಲಾಸʼ ಪ್ರತಿನಿಧಿಗಳು ಭಾಗಿಯಾಗಿದ್ದರು. ಈ ವೇಳೆ  ಭಾರತದಿಂದ ನಿತ್ಯಾನಂದನಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಪ್ರತಿನಿಧಿ ಆರೋಪಿದ್ದರು. ಜತೆಗೆ ಹಿಂದೂಗಳಿಗಾಗಿ ಸ್ಥಾಪಿಸಲಾಗಿರುವ ಮೊದಲ ಸಾರ್ವಭೌಮ ರಾಷ್ಟ್ರ ಎಂದಿದ್ದರು.

ಹೀಗೆ ಅಂದವರು ವಿಜಯಪ್ರಿಯಾ ನಿತ್ಯಾನಂದ ಎಂದು ಕರೆಸಿಕೊಳ್ಳುವ ಮಹಿಳೆ. ಈ ಮಹಿಳೆಯ ಫೋಟೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಯಾರು ಈ ವಿಜಯಪ್ರಿಯಾ ನಿತ್ಯಾನಂದ:   ಫೇಸ್‌ ಬುಕ್‌ ಖಾತೆಯಲ್ಲಿ ಈಕೆ ಕೈಲಾಸದ ಖಾಯಂ ರಾಯಭಾರಿ ಎಂದು ಬರೆದುಕೊಂಡಿದ್ದಾರೆ. ಅಮೆರಿಕದ ವಾಷಿಂಗ್ಟನ್‌ ಡಿಸಿಯಲ್ಲಿ ವಾಸ ಎನ್ನುವುದನ್ನು ಬರೆದುಕೊಂಡಿದ್ದಾಳೆ. ಫೇಸ್‌ ಬುಕ್‌ ನಲ್ಲಿ ಭಾರತೀಯ ಹೆಣ್ಣಿನಂತೆ ಸೀರೆಯುಟ್ಟ ಫೋಟೋದೊಂದಿಗೆ ವೆಸ್ಟರ್ನ್‌ ಮಾದರಿಯ ಫೋಟೋ ಈಕೆ ಹಂಚಿಕೊಂಡಿದ್ದಾರೆ. ಕೈಯಲ್ಲಿ ನಿತ್ಯಾನಂದನ ಟ್ಯಾಟೋ ಹಾಕಿಕೊಂಡಿದ್ದಾರೆ. ನಿತ್ಯಾನಂದನ ಪ್ರತಿಯೊಂದು ಧಾರ್ಮಿಕ ಸೆಷನ್ಸ್‌ ಗಳನ್ನು ಹಂಚಿಕೊಂಡಿದ್ದಾರೆ.

ವಿಜಯಪ್ರಿಯಾ ನಿತ್ಯಾನಂದ ಅವರು ಈ “ಯುನೈಟೆಡ್‌ ಸ್ಟೇಟ್ಸ್‌ ಆಫ್ ಕೈಲಾಸ” ಪರವಾಗಿ ಹಲವಾರು ಸಂಸ್ಥೆಗಳೊಂದಿಗೆ ಮಾಡುವ ಒಪ್ಪಂದಗಳನ್ನು ನೋಡಿಕೊಳ್ಳುತ್ತಾರೆ ಎಂದು ʼಕೈಲಾಸʼದ ವೆಬ್‌ ಸೈಟ್‌ ನಲ್ಲಿ ಉಲ್ಲೇಖಿಸಲಾಗಿದೆ.

ಹಲವು ದೇಶಗಳ ಪ್ರತಿನಿಧಿಗಳೊಂದಿಗೆ ವಿಜಯಪ್ರಿಯಾ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ವಿಶ್ವದ ಹಲವಾರು ದೇಶಗಳಲ್ಲಿ ರಾಯಭಾರಿ ಕಚೇರಿಗಳು ಮತ್ತು ಎನ್‌ಜಿಒಗಳನ್ನು ʼಕೈಲಾಸʼ ತೆರೆದಿದೆ ಎಂದು ವಿಜಯಪ್ರಿಯಾ ಹೇಳಿದ್ದಾರೆ.

ಕೈಲಾಸದ ಮುಖ್ಯಸ್ಥೆ ಮುಕ್ತಿಕಾ ಆನಂದ, ಕೈಲಾಸದ ಸಂತ ಲೂಯಿಸ್ ಮುಖ್ಯಸ್ಥೆ ಸೋನಾ ಕಾಮ, ಕೈಲಾಸದ ಯುಕೆಯ ಮುಖ್ಯಸ್ಥೆ ನಿತ್ಯಾ ಆತ್ಮದಯಕಿ, ಕೈಲಾಸದ ಫ್ರಾನ್ಸ್ ಮುಖ್ಯಸ್ಥೆ ನಿತ್ಯ ವೆಂಕಟೇಶಾನಂದ, ಕೈಲಾಸ ಸ್ಲೋವೇನಿಯನ್ ಮಾ ಪ್ರಿಯಾಂಪರ ನಿತ್ಯಾನಂದ ಮುಂತಾದ ಪ್ರತಿನಿಧಿಗಳು ಕೂಡ ಭಾಗಿಯಾಗಿದ್ದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.