ಸತ್ತ 9 ವರ್ಷದ ಬಳಿಕ ತಂದೆ ಬರೆದ ಪತ್ರ ಪತ್ತೆ:ಮಕ್ಕಳಿಗೆ ಹೇಳಿದ ಸಂದೇಶವೇನು?; ಪೋಸ್ಟ್ ವೈರಲ್‌

ಪತ್ರ ನೋಡಿ ನೆಟ್ಟಿಗರೇ ಭಾವುಕರಾದ್ರು!

Team Udayavani, Aug 20, 2022, 11:31 AM IST

4-letter-1

ವಾಷಿಂಗ್ಟನ್‌ : ಜೇನುಸಾಕಣೆ ಮಾಡುತ್ತಿದ್ದ ವ್ಯಕ್ತಿಯೊಬ್ಬರು ತಮ್ಮ ಮಕ್ಕಳಿಗೆ ಬರೆದ ಪತ್ರವೊಂದು ಅವರು ಸತ್ತ ಒಂಬತ್ತು ವರ್ಷಗಳ ಬಳಿಕ ದೊರೆತಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಈ ಪತ್ರ ವೈರಲ್ ಆಗಿದೆ.

ಆಮಿ ಕ್ಲೂಕಿ ಎಂಬಾಕೆ ತನ್ನ ತಂದೆ ರಿಕ್ ಸುಮಾರು ಒಂಬತ್ತು ವರ್ಷಗಳ ಹಿಂದೆ ಮಕ್ಕಳಿಗೆ ಬರೆದ ಪತ್ರವೊಂದನ್ನು ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿದ್ದು ಇದೀಗ ಭಾರಿ ಸುದ್ದಿ ಮಾಡುತ್ತಿದೆ.

ರಿಕ್‌ ಅವರು ಶ್ವಾಸಕೋಶದ ಕ್ಯಾನ್ಸರ್‌ನಿಂದಾಗಿ 9 ವರ್ಷಗಳ ಹಿಂದೆ ನಿಧನರಾಗಿದ್ದರು.  ಆದರೆ, ಸಾವನ್ನಪ್ಪುವ ಮುನ್ನ ಜೇನು ಸಾಕಾಣಿಕೆಯ ಸಲಕರಣೆಯೊಂದರಲ್ಲಿ ಮಕ್ಕಳಿಗೆ ಪತ್ರವೊಂದನ್ನು ಬರೆದಿಟ್ಟಿದ್ದರು. ಒಂದಿಲ್ಲೊಂದು ದಿನ ತಮ್ಮ ಮಕ್ಕಳಿಗೆ ಈ ಪತ್ರ ಲಭ್ಯವಾಗುತ್ತದೆ ಎಂಬ ಆಶಾಭಾವನೆ ಹೊಂದಿದ್ದರು. ಕಡೆಗೂ ಈ ಪತ್ರ 16 ವರ್ಷದ ತನ್ನ ತಮ್ಮ ಜೇನು ಸಾಕಾಣಿಕೆ ಕೃಷಿಯಲ್ಲಿ ತೊಡಗಿಕೊಂಡಾಗ ಲಭ್ಯವಾಗಿದೆ ಎಂದು ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಟಿಪ್ಪಣಿಯು ಹೀಗೆ ಹೇಳಿದೆ: “ಜೇನುಸಾಕಣೆಯ ಬಗ್ಗೆ ಕುತೂಹಲ ಹೊಂದಿರುವ ನನ್ನ ಮಕ್ಕಳಲ್ಲಿ ಒಬ್ಬರು ಈ ಪತ್ರವನ್ನು ಕಂಡುಕೊಂಡಿದ್ದಾರೆ ಎಂದು ನಾನು ಭಾವಿಸುತ್ತೇನೆ. ಜೇನುಸಾಕಣೆಯು ವಾಸ್ತವವಾಗಿ ತುಂಬಾ ಸುಲಭ ಮತ್ತು ನೀವು ಆನ್‌ಲೈನ್‌ನಲ್ಲಿ ಎಲ್ಲವನ್ನೂ ಕಲಿಯಬಹುದು. ಜೇನುನೊಣಗಳು ಕೇವಲ ಜೇನುತುಪ್ಪಕ್ಕಿಂತ ಹೆಚ್ಚಿನ ಉತ್ಪನ್ನಗಳನ್ನು ತಯಾರಿಸುತ್ತವೆ ಮತ್ತು ಹವ್ಯಾಸವಾಗಿ, ಇದು ಹೆಚ್ಚುವರಿ ಆದಾಯದ ಮೂಲವಾಗಿದೆ. ಆದ್ದರಿಂದ ಭಯಪಡಬೇಡಿ, ಧೈರ್ಯದಿಂದಿರಿ. ತಂದೆಯನ್ನು ಪ್ರೀತಿಸಿ.” ಎಂದು ಪತ್ರದಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ 9 ಮಂದಿ ಹಿಂದೂ ಕಾರ್ಯಕರ್ತರ ವಿರುದ್ದ ಎಫ್‌ಐಆರ್

ಈ ನೋಟ್ ಅನ್ನು ಮಿಸ್ ಕ್ಲೂಕಿ ತಮ್ಮ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ ಮತ್ತು “ನನ್ನ ತಂದೆ ಬರೆದ ಪತ್ರ ಅವರ ಸಾವಿನ ಒಂಬತ್ತು ವರ್ಷಗಳ ನಂತರ ಜೇನುನೊಣಗಳನ್ನು ಸಾಕುವ ಉಪಕರಣಗಳಲ್ಲಿ ಕಂಡುಬಂದಿದೆ. ಆದರೆ ಇವತ್ತು ನಮ್ಮೊಂದಿಗೆ ಅವರಿಲ್ಲ” ಎಂದು ಶೀರ್ಷಿಕೆಯಲ್ಲಿ ಮಗಳು ಬರೆದಿದ್ದಳು. ನಂತರ, ಅದೇ ಟ್ವೀಟ್ ನಲ್ಲಿ ಅವಳು ತನ್ನ ತಂದೆಯೊಂದಿಗೆ ಮೋಟಾರು ಬೈಕ್ ನಲ್ಲಿ ಕುಳಿತಿರುವ ಫೋಟೋವೊಂದನ್ನು ಸಹ ಹಂಚಿಕೊಂಡಿದ್ದಾಳೆ. “ಈ ಪೋಸ್ಟ್ ಇಷ್ಟೊಂದು ಗಮನ ಸೆಳೆಯುತ್ತದೆ ಎಂದು ನಾನು ನಿರೀಕ್ಷಿಸಿರಲಿಲ್ಲ, ಆದರೆ ನನ್ನ ತಂದೆ ಇದ್ದರೆ ಇದನ್ನು ಮೆಚ್ಚುತ್ತಿದ್ದರು ಎಂದು ನಾನು ಭಾವಿಸುತ್ತೇನೆ” ಎಂದು ಅವರು ಪೋಸ್ಟ್ ನಲ್ಲಿ ಬರೆದಿದ್ದಾರೆ.

ಟಾಪ್ ನ್ಯೂಸ್

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

ರಷ್ಯಾ-ಉಕ್ರೇನ್‌ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ

ರಷ್ಯಾ-ಉಕ್ರೇನ್‌ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.