Modi ಜತೆಗಿನ ಝೆಲೆನ್ಸ್ಕಿ ಇನ್‌ಸ್ಟಾಗ್ರಾಮ್ ಪೋಸ್ಟ್‌ಗೆ ಮಿಲಿಯನ್‌ಗಿಂತಲೂ ಹೆಚ್ಚು ಲೈಕ್‌ಗಳು

ಹಿಂದೆ ಮೋದಿ ನಡೆಯನ್ನು ತೀವ್ರವಾಗಿ ಆಕ್ಷೇಪಿಸಿದ್ದ ಝೆಲೆನ್ಸ್ಕಿ!!!

Team Udayavani, Aug 23, 2024, 9:01 PM IST

1-zz

ಕೀವ್ : ಯುದ್ಧ ಪೀಡಿತ ಉಕ್ರೇನ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ತೆಗದುಕೊಂಡ ಫೋಟೋವೊಂದನ್ನು ಉಕ್ರೇನ್ ಅಧ್ಯಕ್ಷ ವ್ಲಾದಿಮಿರ್ ಝೆಲೆನ್ಸ್ಕಿ ಅವರು ಇನ್‌ಸ್ಟಾಗ್ರಾಮ್ ನಲ್ಲಿ ಶುಕ್ರವಾರ ಪೋಸ್ಟ್ ಮಾಡಿದ್ದಾರೆ. ಅಪ್‌ಲೋಡ್ ಮಾಡಿದ ಕೆಲವೇ ಗಂಟೆಗಳಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಅತ್ಯಧಿಕ ಮೆಚ್ಚುಗೆಗಳನ್ನು ಪಡೆದುಕೊಂಡಿದ್ದು ಫೋಟೋ ವೈರಲ್ ಆಗಿದೆ.

ಈ ಹಿಂದೆ ಮೋದಿಯವರೊಂದಿಗಿನ ಝೆಲೆನ್ಸ್ಕಿಯವರ ಪೋಸ್ಟ್ ಅತಿ ಹೆಚ್ಚು 7.8 ಲಕ್ಷ ಲೈಕ್‌ಗಳನ್ನು ಹೊಂದಿತ್ತು ಎಂದು ಮೂಲಗಳು ಗಮನಿಸಿದ್ದು, ಇಂದಿನ ಪೋಸ್ಟ್ ಕೆಲವೇ ಗಂಟೆಗಳಲ್ಲಿ 1 ಮಿಲಿಯನ್ ಲೈಕ್‌ಗಳನ್ನು ದಾಟಿದೆ.

ಪ್ರಧಾನ ಮಂತ್ರಿ ಮೋದಿ ಅವರು ಪೋಸ್ಟ್ ನ ಭಾಗವಾಗಿರುವುದು ವಿಶ್ವ ನಾಯಕರು ಸ್ವೀಕರಿಸುವ ಸಾಮಾಜಿಕ ಮಾಧ್ಯಮದಲ್ಲಿ ತೊಡಗಿಸಿಕೊಳ್ಳುವಿಕೆಗಳಲ್ಲಿನ ಏರುಗತಿಯನ್ನು ಇದು ತೋರಿಸುತ್ತದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: Prime Modi ಉಕ್ರೇನ್ ನೊಂದಿಗೆ ಭಾರತವಿದೆ… : 4 ಒಪ್ಪಂದಗಳಿಗೆ ಸಹಿ

ಉಕ್ರೇನ್ ಮತ್ತು ರಷ್ಯಾ ನಡುವೆ ನಡೆಯುತ್ತಿರುವ ಸಂಘರ್ಷಕ್ಕೆ ಪರಿಹಾರ ಕಂಡುಕೊಳ್ಳಲು ಪರಸ್ಪರ ಮಾತುಕತೆಯಲ್ಲಿ ತೊಡಗಿಸಿಕೊಳ್ಳುವ ಅಗತ್ಯವಿದೆ ಎಂದು ಹೇಳಿದ್ದಾರೆ. ಶಾಂತಿ ಮತ್ತು ಸ್ಥಿರತೆಗೆ ಕೊಡುಗೆ ನೀಡಲು ಸಹಾಯ ಮಾಡುವ ನವೀನ ಪರಿಹಾರವನ್ನು ಅಭಿವೃದ್ಧಿಪಡಿಸಲು ಎಲ್ಲಾ ಪಾಲುದಾರರ ನಡುವೆ ಪ್ರಾಯೋಗಿಕವಾಗಿ ಭಾಗಿಯಾಗುವಿಕೆಯ ಅಗತ್ಯವನ್ನು ಮೋದಿ ಪುನರುಚ್ಚರಿಸಿದ್ದಾರೆ.

“ಭಾರತ ಮತ್ತು ಉಕ್ರೇನ್ ನಡುವಿನ ಸಂವಾದ ಮತ್ತು ಸಂಬಂಧವನ್ನು ಬಲಪಡಿಸಲು ನಮ್ಮ ಸಭೆಯ ಆದ್ಯತೆಯಾಗಿದೆ” ಎಂದು ಝೆಲೆನ್ಸ್ಕಿ ಹೇಳಿದ್ದಾರೆ.

ಹಿಂದೆ ಆಕ್ಷೇಪಿಸಿದ್ದ ಝೆಲೆನ್ಸ್ಕಿ

ಕಳೆದ ಒಂದು ತಿಂಗಳ ಹಿಂದೆ ಪ್ರಧಾನಿ ಮೋದಿ ರಷ್ಯಾ ಪ್ರವಾಸದ ವೇಳೆ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರನ್ನು ಅಪ್ಪಿಕೊಂಡಿದ್ದರು.ಈಗ ಅವರನ್ನು ಅಪ್ಪಿಕೊಂಡಿದ್ದಾರೆ. ಪುಟಿನ್ ಅವರನ್ನು ಅಪ್ಪಿಕೊಂಡಿದ್ದಾಗ ಝೆಲೆನ್ಸ್ಕಿ ಟೀಕಾ ಪ್ರಹಾರ ನಡೆಸಿದ್ದರು. ‘ಉಕ್ರೇನ್‌ನ ಮಕ್ಕಳ ಆಸ್ಪತ್ರೆಯ ಮೇಲೆ ರಷ್ಯಾ ಕ್ಷಿಪಣಿ ದಾಳಿ ನಡೆಸಿದ ದಿನವೇ ಪುಟಿನ್ ಅವರನ್ನು ಮೋದಿ ತಬ್ಬಿಕೊಂಡಿರುವುದು ದೊಡ್ಡ ನಿರಾಶೆ ಮತ್ತು ಶಾಂತಿ ಪ್ರಯತ್ನಗಳಿಗೆ ವಿನಾಶಕಾರಿ ಹೊಡೆತ ಎಂದು ಹೇಳಿದ್ದರು.

ತಪ್ಪಾಗಿ ಅರ್ಥೈಸಿಕೊಂಡಿದ್ದರು
ಉಕ್ರೇನ್ ನಲ್ಲಿ ಮಾಧ್ಯಮಗಳು ಪ್ರಶ್ನಿಸಿದಾಗ ಪ್ರತಿಕ್ರಿಯಿಸಿದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ‘ಪ್ರಧಾನಿ ಮೋದಿ ಮತ್ತು ಪುಟಿನ್ ನಡುವಿನ ಸೌಹಾರ್ದತೆಯನ್ನು ಪಾಶ್ಚಿಮಾತ್ಯರು ತಪ್ಪಾಗಿ ಅರ್ಥೈಸಿಕೊಂಡಿದ್ದರು. ಪಾಶ್ಚಿಮಾತ್ಯ ಜನರಿಗೆ ಅರ್ಥವಾಗದ ಸಾಂಸ್ಕೃತಿಕ ಅಂತರವಿದೆ. ಇಂದು ಝೆಲೆನ್ಸ್ಕಿ ಪ್ರಧಾನಿ ಮೋದಿಯವರನ್ನು ತಬ್ಬಿಕೊಂಡಿದ್ದಾರೆ” ಎಂದು ಪ್ರತಿಕ್ರಿಯೆ ನೀಡಿದರು.

ಟಾಪ್ ನ್ಯೂಸ್

Subhra-Swamy

Mangaluru Visit: ಇಂದು ಡಾ. ಸುಬ್ರಮಣಿಯನ್‌ ಸ್ವಾಮಿ ಮಂಗಳೂರಿಗೆ

aane

Sulya: ಆಲೆಟ್ಟಿ: ಕಾಡಾನೆ ದಾಳಿ ಪ್ರದೇಶಕ್ಕೆ ಅರಣ್ಯಾಧಿಕಾರಿ ಭೇಟಿ

Mangaluru-BjP

Nagamangala Riots: ಕದ್ರಿ: ಗಣೇಶೋತ್ಸವ ಸಮಿತಿಗಳ ಒಕ್ಕೂಟದಿಂದ ಪ್ರತಿಭಟನೆ

udUdupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

Udupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

PROTEST

Udupi: ನಾಗಮಂಗಲ ಘಟನೆ ಖಂಡಿಸಿ ವಿವಿಧೆಡೆ ಪ್ರತಿಭಟನೆ

Tulunadu-utsava

Mangaluru: ತುಳುನಾಡ ಉತ್ಸವ ಪಿಲಿಕುಳ ಕಂಬಳ: ಬೆಂಗಳೂರಿನಲ್ಲಿ ಸಭೆ

police

Udupi: ನಾಪತ್ತೆಯಾಗಿದ್ದ ಬಾಲಕನ ರಕ್ಷಣೆ, ಮಕ್ಕಳ ರಕ್ಷಣ ಘಟಕಕ್ಕೆ ಹಸ್ತಾಂತರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Actor James Hollcroft: ಕೆಲ ದಿನಗಳ ಹಿಂದಷ್ಟೇ ನಾಪತ್ತೆಯಾಗಿದ್ದ ನಟ ಶವವಾಗಿ ಪತ್ತೆ

PM Modi ಚೀನವನ್ನು ಸರಿಯಾಗಿ ನಿಭಾಯಿಸಿಲ್ಲ: ರಾಹುಲ್‌ ಗಾಂಧಿ

PM Modi ಚೀನವನ್ನು ಸರಿಯಾಗಿ ನಿಭಾಯಿಸಿಲ್ಲ: ರಾಹುಲ್‌ ಗಾಂಧಿ

Kamala Harris: ಪುಟಿನ್‌ ನಿಮ್ಮನ್ನೇ ತಿಂದು ತೇಗುತ್ತಿದ್ದರು: ಟ್ರಂಪ್‌ಗೆ ಕಮಲಾ ತಿರುಗೇಟು!

Kamala Harris: ಪುಟಿನ್‌ ನಿಮ್ಮನ್ನೇ ತಿಂದು ತೇಗುತ್ತಿದ್ದರು: ಟ್ರಂಪ್‌ಗೆ ಕಮಲಾ ತಿರುಗೇಟು!

1-ssss

US Presidential debate; ಟ್ರಂಪ್-ಕಮಲಾ ಮುಖಾಮುಖಿ: ಬಾಣಕ್ಕೆ ಪ್ರತಿಬಾಣ

Americaದಲ್ಲಿ ಭಾರತ ವಿರೋಧಿ Lawmaker ಇಲ್ಹಾನ್‌ ಭೇಟಿಯಾದ ರಾಹುಲ್-‌ ಯಾರೀಕೆ?

Americaದಲ್ಲಿ ಭಾರತ ವಿರೋಧಿ Lawmaker ಇಲ್ಹಾನ್‌ ಭೇಟಿಯಾದ ರಾಹುಲ್-‌ ಯಾರೀಕೆ?

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

Subhra-Swamy

Mangaluru Visit: ಇಂದು ಡಾ. ಸುಬ್ರಮಣಿಯನ್‌ ಸ್ವಾಮಿ ಮಂಗಳೂರಿಗೆ

aane

Sulya: ಆಲೆಟ್ಟಿ: ಕಾಡಾನೆ ದಾಳಿ ಪ್ರದೇಶಕ್ಕೆ ಅರಣ್ಯಾಧಿಕಾರಿ ಭೇಟಿ

congress

Haryana ಚುನಾವಣೆ: 89 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಕಣಕ್ಕೆ, ಸಿಪಿಎಂಗೆ 1 ಸ್ಥಾನ

suicide (2)

Kanpur:ಮಹಿಳೆಯ ಬೆತ್ತಲೆ, ರುಂಡವಿಲ್ಲದ ಮೃತದೇಹ ಪತ್ತೆ

1bbb

Baahubali; ನೆರೆ ನೀರಲ್ಲಿ ತಲೆ ಮೇಲೆ ಬೈಕ್‌ ಹೊತ್ತು ನಡೆದ ‘ಬಾಹುಬಲಿ’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.