Olympics ಟಾರ್ಗೆಟ್!?; ಅತ್ಲೀಟ್ ಗಳಿದ್ದ 2 ರೈಲುಗಳು ಪ್ಯಾರಿಸ್‌ ಮಾರ್ಗದಲ್ಲೇ ನಿಲುಗಡೆ

ವ್ಯಾಪಕವಾದ ಪ್ರಯಾಣದ ಅವ್ಯವಸ್ಥೆಗೆ ಕಾರಣ...ಭದ್ರತಾ ದೋಷವೇ?

Team Udayavani, Jul 26, 2024, 9:30 PM IST

parils olympics

ಪ್ಯಾರಿಸ್‌: ಒಲಿಂಪಿಕ್ಸ್‌ ಉದ್ಘಾಟನ ಸಮಾರಂಭಕ್ಕೆ ಕೆಲವೇ ಗಂಟೆಗಳಿಗೆ ಮುನ್ನ ಪ್ಯಾರಿಸ್‌ನಲ್ಲಿ ಕೋಲಾಹಲ ಸೃಷ್ಟಿಯಾಗಿತ್ತು. ಪ್ಯಾರಿಸ್‌ ಅನ್ನು ಸಂಪರ್ಕಿಸುವ ಅತಿವೇಗದ ರೈಲ್ವೆ ಮಾರ್ಗಗಳಿಗೆ (ಟಿಜಿವಿ) ದುಷ್ಕರ್ಮಿಗಳು ಬೆಂಕಿ ಹಾಕಿದ್ದರಿಂದ ಇಡೀ ಪ್ಯಾರಿಸ್‌ ಸಂಪರ್ಕ ಕಡಿತಗೊಂಡಿತ್ತು. 8 ಲಕ್ಷ ಮಂದಿ ಪ್ರಯಾಣಿಕರು ಅತಂತ್ರಗೊಂಡಿದ್ದರು. ಒಲಿಂಪಿಕ್ಸ್‌ ಹಿನ್ನೆಲೆಯಲ್ಲಿ ಲಂಡನ್‌ನಿಂದ ಪ್ಯಾರಿಸ್‌ಗೆ ಬರಬೇಕಿದ್ದ ರೈಲು ಕೂಡ ರದ್ದುಗೊಂಡಿತು. ಘಟನೆ ನಡೆದ ಕೂಡಲೇ ಫ್ರಾನ್ಸ್‌ ರೈಲ್ವೇ ಇಲಾಖೆ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡು ಹಲವು ಮಾರ್ಗಗಳನ್ನು ದುರಸ್ತಿಗೊಳಿಸಿತು.

ಈ ಘಟನೆಗೆ ಯಾರು ಹೊಣೆ ಎಂದು ಖಚಿತವಾಗಿಲ್ಲ. ಫ್ರಾನ್ಸ್‌ನ ಕಾನೂನು ಸಚಿವಾಲಯದ ಪ್ರಕಾರ ಅರಾಜಕವಾದಿಗಳು ಅಥವಾ ತೀವ್ರ ಎಡಪಂಥೀಯರು ಈ ಕೃತ್ಯ ಎಸಗಿರುವ ಸಾಧ್ಯತೆಯಿದೆ. ಪ್ಯಾರಿಸ್‌ ಒಲಿಂಪಿಕ್ಸ್‌ ಉದ್ಘಾಟನಾ ಸಮಾರಂಭವನ್ನು ಹಾಳುಗೆಡವುವ ದುರುದ್ದೇಶದಿಂದಲೇ ಈ ಕೃತ್ಯ ಮಾಡಲಾಗಿದೆ ಎಂದು ಶಂಕಿಸಲಾಗಿದೆ.

ಮುಖ್ಯವಾಗಿ ಪ್ಯಾರಿಸ್‌ನ ಗೇರ್‌ ಡು ನಾರ್ಡ್‌ ಎಂಬ ಪ್ರಮುಖ ರೈಲ್ವೇ ನಿಲ್ದಾಣಕ್ಕೆ ಹೋಗುವ ಮಾರ್ಗದಲ್ಲೇ ಬೆಂಕಿ ಕಾಣಿಸಿಕೊಂಡಿತ್ತು. ಇದರಿಂದ ನೂರಾರು ರೈಲುಗಳು ರದ್ದಾದವು. ಪ್ರಯಾಣಿಕರು ನಿಲ್ದಾಣದಲ್ಲಿ ಹತಾಶರಾಗಿ ಕುಳಿತುಕೊಂಡಿದ್ದರು. ಇಡೀ ಯೂರೋಪ್‌ನಲ್ಲಿ ಗರಿಷ್ಠ ಪ್ರಯಾಣಿಕರಿಂದ ತುಂಬಿಕೊಂಡಿರುವ ರೈಲ್ವೇ ನಿಲ್ದಾಣವೆಂಬ ಹೆಗ್ಗಳಿಕೆಯಿರುವ ಗೇರ್‌ ಡು ನಾರ್ಡ್‌ ಅಪಾಯಕ್ಕೆ ತುತ್ತಾಗಿದ್ದರಿಂದ ಒಲಿಂಪಿಕ್ಸ್‌ ಸಂಘಟಕರು, ಭದ್ರತಾ ಸಿಬಂದಿ ಕಂಗಲಾದರು.

ಗೇರ್‌ ಡು ನಾರ್ಡ್‌ ಫ್ರಾನ್ಸ್‌ ಪೂರ್ವ, ಪಶ್ಚಿಮ, ಉತ್ತರ ಭಾಗಗಳನ್ನು ಸಂಪರ್ಕಿಸುತ್ತದೆ. ಅಲ್ಲೇ ಮುಖ್ಯ ದಾಳಿಯಾಗಿದೆ. ಇದರ ಪರಿಣಾಮ ಲಂಡನ್‌ನ ಯೂರೋಸ್ಟಾರ್‌ ನಿಲ್ದಾಣದಿಂದ ಪ್ಯಾರಿಸ್‌ಗೆ ಹೊರಟಿದ್ದ ಪ್ರಯಾಣಿಕರು ತೊಂದರೆಗೊಳಗಾದರು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sanjay Sing WFI

Vinesh Phogat ತೀರ್ಪು ನಮ್ಮ ಪರ ಬರುವ ನಿರೀಕ್ಷೆ;ಅದು ವೈಯಕ್ತಿಕ ಪದಕವಲ್ಲ: ಸಂಜಯ್ ಸಿಂಗ್

America

Paris Olympics: ಅಮೆರಿಕಕ್ಕೆ ಬಂತು ಒಲಿಂಪಿಕ್ಸ್‌  ಧ್ವಜ

emanual

Paris: 2036ರ ಒಲಿಂಪಿಕ್ಸ್‌ ಭಾರತ ನಡೆಸ‌ಬಲ್ಲದು: ಫ್ರಾನ್ಸ್‌ ಅಧ್ಯಕ್ಷ

Paris-ind

Paris Olympics 2024ಕ್ಕೆ ವರ್ಣರಂಜಿತ ವಿದಾಯ

IOA shrugs off Vinish Phogat issue; What did PT Usha say?

IOA; ವಿನೀಶ್‌ ಫೋಗಾಟ್‌ ವಿಚಾರದಲ್ಲಿ ತಣ್ಣಗೆ ನುಣುಚಿಕೊಂಡಿತಾ ಐಒಎ?; ಪಿಟಿ ಉಷಾ ಹೇಳಿದ್ದೇನು?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.