Wrestling Quarter-Final; ನೋವಿನಿಂದಾಗಿ ಗೆಲ್ಲುವ ಪಂದ್ಯ ಸೋತು ಕಣ್ಣೀರಿಟ್ಟ ನಿಶಾ ದಹಿಯಾ

ಸ್ಕೀಟ್‌ ಮಿಶ್ರ ಡಬಲ್ಸ್‌ನಲ್ಲಿ 1 ಅಂಕದಿಂದ ತಪ್ಪಿದ ಕಂಚು ; ಭಾರತಕ್ಕೆ ನೋವಿನ ಕ್ಷಣ

Team Udayavani, Aug 5, 2024, 10:18 PM IST

1-ccc

ಪ್ಯಾರಿಸ್‌: ಈ ಬಾರಿಯ ಒಲಿಂಪಿಕ್ಸ್‌ನಲ್ಲಿ ಭಾರತದ ಕುಸ್ತಿ ಅಭಿಯಾನದ ಮೊದಲ ದಿನವೇ ಭಾರತಕ್ಕೆ ನೋವಿನ ಕ್ಷಣ ಎದುರಾಯಿತು. ಪದಕ ಗೆಲ್ಲುವ ಅವಕಾಶವಿದ್ದರೂ ನಿಶಾ ದಹಿಯಾ ಬಲಗೈಯ ತೀವ್ರ ತೀವ್ರ ನೋವಿನಿಂದಾಗಿ ಪಂದ್ಯವನ್ನು ಬಿಟ್ಟುಕೊಟ್ಟರು. ನೋವಿಗೆ ತುತ್ತಾಗಿದ್ದರೂ ಜಿದ್ದಿಗೆ ಬಿದ್ದು ಹೋರಾಡಿ ಭಾರೀ ಮೆಚ್ಚುಗೆ ಪಡೆದರು. ಸೋಲಿನ ಬಳಿಕ ಕಣ್ಣೀರಿಟ್ಟರು.

ಅರ್ಹತಾ ಸುತ್ತಿನ ಪಂದ್ಯದಲ್ಲಿ ನಿಶಾ ಉಕ್ರೇನ್‌ನ ಸೋವಾ ರಿಜ್ಕೋ ಟೆಟಿಯಾನಾ ವಿರುದ್ಧ 6-4 ಅಂಕಗಳ ಅಂತರದಿಂದ ಜಯಗಳಿಸಿ ಕ್ವಾರ್ಟರ್‌ ಫೈನಲ್‌ಗೆ ಬಂದಿದ್ದರು.

ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ ಉತ್ತರ ಕೊರಿಯಾದ ಪಾಕ್‌ ಸೋಲ್‌ ಗಮ್‌ ಅವರನ್ನು ಎದುರಿಸಿದ ನಿಶಾ 6 ಅಂಕಗಳ ಮುನ್ನಡೆ ಸಾಧಿಸಿದ್ದರು. 2 ಅಂಕ ಬಿಟ್ಟುಕೊಟ್ಟ ಬಳಿಕ ಮತ್ತೆರಡು ಅಂಕ ಗಳಿಸಿ 8-2 ಅಂತದಿಂದ ಮುನ್ನಡೆ ಗಳಿಸಿಕೊಂಡರು.ನಂತರ ದುರಂತ ಎಂಬಂತೆ ಬಲಗೈನ ತೀವ್ರ ನೋವಿಗೆ ಗುರಿಯಾಗಿ 3 ಬಾರಿ ಚಿಕಿತ್ಸೆ ಪಡೆದುಕೊಂಡರು.

ಛಲ ಬಿಡದೇ ಹೋರಾಡಿದ ನಿಶಾ ಕೊನೆಯ 30 ಸೆಕೆಂಡ್‌ಗಳಲ್ಲಿ ರಿ 8 ಅಂಕಗಳನ್ನು ಬಿಟ್ಟುಕೊಟ್ಟು ಪಂದ್ಯವನ್ನೂ 10-8 ಅಂಕಗಳ ಅಂತರದಿಂದ ಬಿಟ್ಟುಕೊಟ್ಟರು. ನಿಶಾ ಗಾಯದ ಲಾಭದಿಂದಾಗಿ ಪಾಕ್‌ ಸೋಲ್‌ ಗಮ್‌ ಸುಲಭವಾಗಿ ಜಯಗಳಿಸಿ ಸೆಮಿಫೈನಲ್‌ ಪ್ರವೇಶಿಸಿದರು. ನಿಶಾ ಸೆಮಿಫೈನಲ್‌ ಪ್ರವೇಶಿಸಿದ್ದಾರೆ ಒಂದು ಪದಕ ಖಚಿತವಾಗುತ್ತಿತ್ತು.

ಇದನ್ನೂ ಓದಿ: Olympics; ಲಕ್ಷ್ಯ ಸೇನ್ ಕಂಚು ಕಸಿದುಕೊಂಡ ‘ನೋವು’: ಭಾರಿ ನಿರಾಸೆ

1 ಅಂಕದಿಂದ ತಪ್ಪಿದ ಕಂಚು

ಸ್ಕೀಟ್‌ ಮಿಶ್ರ ಡಬಲ್ಸ್‌ನಲ್ಲಿ ಭಾರತದ ಶೂಟರ್‌ಗಳಾದ ಮಹೇಶ್ವರಿ ಚೌಹಾಣ್‌-ಅನಂತ್‌ಜೀತ್‌ ಸಿಂಗ್‌ ನರೂಕಾ 1 ಅಂಕದಿಂದ ಕಂಚಿನ ಪದಕ ತಪ್ಪಿಸಿಕೊಂಡರು. ಚೀನ ವಿರುದ್ಧ 43-44 ಅಂತರದ ಸೋತರು.

ಭಾನುವಾರ ನಡೆದ ಅರ್ಹತಾ ಸುತ್ತಿನಲ್ಲಿ 146 ಅಂಕಗಳನ್ನು ಗಳಿಸಿ 4ನೇ ಸ್ಥಾನ ಪಡೆದುಕೊಂಡಿದ್ದ ಭಾರತ ತಂಡ ಕಂಚಿನ ಪದಕದ
ಹೋರಾಟದಲ್ಲಿ ಆರಂಭದಿಂದಲೂ ಉತ್ತಮ ಪೈಪೋಟಿ ನೀಡಿತು. 4ನೇ ಸುತ್ತಿನಲ್ಲಿ ನರೂಕ 1 ಅಂಕ ಬಿಟ್ಟುಕೊಟ್ಟ ಕಾರಣ ಹಿನ್ನಡೆ ಅನುಭವಿಸಿತು. ಕ ಚೀನಾದ ಶೂಟರ್‌ಗಳಾದ ಯಿಟಿಂಗ್‌ ಜಿಯಾಂಗ್‌-ಜಿಯಾನ್ಲಿನ್‌ ಲ್ಯು ಎಲ್ಲಾ ಅಂಕಗಳನ್ನು ಗಳಿಸಿಕೊಂಡು 44 ಅಂಕ ಸಂಪಾದಿಸಿ ಪದಕ ಗೆದ್ದರು.

ಟಾಪ್ ನ್ಯೂಸ್

1-aaaaaaaaa

Train; ಕೆಟ್ಟು ನಿಂತ ‘ವಂದೇ ಭಾರತ್‌’ ಎಳೆದು ತಂದ ಗೂಡ್ಸ್‌ ರೈಲಿನ ಎಂಜಿನ್‌!

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

uUdupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗUdupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗ

Udupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗ

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sanjay Sing WFI

Vinesh Phogat ತೀರ್ಪು ನಮ್ಮ ಪರ ಬರುವ ನಿರೀಕ್ಷೆ;ಅದು ವೈಯಕ್ತಿಕ ಪದಕವಲ್ಲ: ಸಂಜಯ್ ಸಿಂಗ್

America

Paris Olympics: ಅಮೆರಿಕಕ್ಕೆ ಬಂತು ಒಲಿಂಪಿಕ್ಸ್‌  ಧ್ವಜ

emanual

Paris: 2036ರ ಒಲಿಂಪಿಕ್ಸ್‌ ಭಾರತ ನಡೆಸ‌ಬಲ್ಲದು: ಫ್ರಾನ್ಸ್‌ ಅಧ್ಯಕ್ಷ

Paris-ind

Paris Olympics 2024ಕ್ಕೆ ವರ್ಣರಂಜಿತ ವಿದಾಯ

IOA shrugs off Vinish Phogat issue; What did PT Usha say?

IOA; ವಿನೀಶ್‌ ಫೋಗಾಟ್‌ ವಿಚಾರದಲ್ಲಿ ತಣ್ಣಗೆ ನುಣುಚಿಕೊಂಡಿತಾ ಐಒಎ?; ಪಿಟಿ ಉಷಾ ಹೇಳಿದ್ದೇನು?

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

1-aaaaaaaaa

Train; ಕೆಟ್ಟು ನಿಂತ ‘ವಂದೇ ಭಾರತ್‌’ ಎಳೆದು ತಂದ ಗೂಡ್ಸ್‌ ರೈಲಿನ ಎಂಜಿನ್‌!

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Pilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿPilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿ

Pilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.