Vinesh Phogat ; ಸಾಧನೆಗಿಂತ ‘ರೋಧನೆ’ಯೇ ಹೆಚ್ಚು ಸುದ್ದಿಯಾಗುತ್ತಿದೆ!

ಸಿನಿಮಾವಾಗಲಿದೆಯೇ ಹೋರಾಟದ ಕಥೆ? ನೋವಿನಲ್ಲಿ ನೆರವಾಗದವರ ಪ್ರಶಂಸೆ ಈಗೇಕೆ ಎನ್ನುತ್ತಿದ್ದಾರೆ..!!

ವಿಷ್ಣುದಾಸ್ ಪಾಟೀಲ್, Aug 7, 2024, 4:00 PM IST

1–VP

ಅಧಿಕಾರದಲ್ಲಿ ಬೇರೂರಿದ್ದ ಪ್ರಭಾವಿ ರಾಜಕಾರಣಿಯೊಬ್ಬರ ಮೇಲೆ ಗಂಭೀರ ಆರೋಪ ಮಾಡಿ ಬೀದಿಗಿಳಿದು ಹೋರಾಟಕ್ಕಿದ ಕ್ರೀಡಾಪಟುವೊಬ್ಬಾಕೆ ಪ್ಯಾರಿಸ್ ಒಲಂಪಿಕ್ಸ್ ನಲ್ಲಿ ಇಡೀ ವಿಶ್ವದ ಗಮನ ಸೆಳೆದಿದ್ದಾರೆ. ಚತುರ್ವಾರ್ಷಿಕ ಜಗತ್ತಿನ ಅತೀ ದೊಡ್ಡ ಕ್ರೀಡಾಕೂಟದಲ್ಲಿ ನೂರಾರು ಕ್ರೀಡೆಗಳಲ್ಲಿ ಪದಕ ಗೆದ್ದವರೆಲ್ಲರೂ ಸಾಧಕರೇ, ಆದರೆ ಬದುಕಿನಲ್ಲಿ ಹೋರಾಟದ ಹಾದಿ ಹಿಡಿದು ಛಲ, ರೊಚ್ಚು ಮತ್ತು ಕಿಚ್ಚಿನಿಂದ ಗೆಲುವಿನ ಹಾದಿ ತುಳಿದು ಬಂಗಾರದ ಪದಕಕ್ಕಾಗಿ ಹೋರಾಟಕ್ಕಿಳಿಯುವ ವೇಳೆ ಅನರ್ಹಗೊಂಡು ದೊಡ್ಡ ಮಟ್ಟದಲ್ಲಿ ಅನುಕಂಪ ಗಿಟ್ಟಿಸಿಕೊಂಡು ಪ್ರಶಂಸೆಗೊಳಗಾಗುತ್ತಿರುವುದು ಭಾರತದ ಕುಸ್ತಿ ಪಟು ವಿನೇಶ್ ಫೋಗಟ್!.

ಮೂರು ಕಂಚಿನ ಪದಕ ಗೆದ್ದು ಇನ್ನೂ ಕೆಲವು ಪದಕಗಳನ್ನು ಸಣ್ಣ ಅಂತರದಲ್ಲಿ ಕಳೆದುಕೊಂಡು ದೊಡ್ಡ ನಿರೀಕ್ಷೆ ಇಟ್ಟುಕೊಂಡಿರುವ ಭಾರತಕ್ಕೆ ಫೈನಲ್ ತಲುಪಿ ಬಂಗಾರದ ಭರವಸೆ ಮೂಡಿಸಿದ್ದರು ವಿನೇಶ್ ಫೋಗಟ್. ಅವರು ದೈತ್ಯ ಪ್ರತಿಭೆಗಳಿಗೆ ಸೋಲುಣಿಸಿ ಫೈನಲ್ ಗೆ ಲಗ್ಗೆ ಇಟ್ಟಿರುವುದು ಸಣ್ಣ ಸಾಧನೆಯೇನಲ್ಲ.

ಬೆಳ್ಳಿ ಕೈಯಲ್ಲಿಟ್ಟುಕೊಂಡು ಹಗಲು ರಾತ್ರಿ ಎನ್ನದೆ ದೇಹ ದಂಡಿಸಿ ಚಿನ್ನದ ಪದಕಕ್ಕಾಗಿ ಸೆಣಸಲು ಇನ್ನೇನು ಕೆಲವು ಗಂಟೆಗಳು ಉಳಿದಿದ್ದ ವೇಳೆ ದುಃಸ್ವಪ್ನವೋ ಎಂಬಂತೆ ಮಾಡಿದ ತೂಕದಲ್ಲಿ 150 ಗ್ರಾಂ ಹೆಚ್ಚು ಇದ್ದ ಕಾರಣಕ್ಕೆ ಅನರ್ಹ ಎನ್ನುವ ಪಟ್ಟ ಬಂದೊದಗಿದ್ದು ಸಿಡಿಲೆರಗಿದ ಅನುಭವ ನೀಡಿತು. ಜಿದ್ದಿನ ಹೋರಾಟಕ್ಕೆ ಸಿದ್ದವಾಗಿದ್ದ ಗಟ್ಟಿಗಿತ್ತಿ ನಿರ್ಲಜ್ಜೀಕರಣದಿಂದ ಕುಸಿದು ಆಸ್ಪತ್ರೆಗೆ ಹೋಗಬೇಕಾದುದು ಭಾರತದ ಕ್ರೀಡಾ ಇತಿಹಾಸದಲ್ಲಿ ಒಂದು ಹೃದಯವಿದ್ರಾವಕ, ದುರಂತ ದಿನವಾಗಿ ಉಳಿಯಲಿದೆ.

ಮನೆಯಲ್ಲೇ ಕುಸ್ತಿ ಅಖಾಡ

ವಿನೇಶ್ ಅವರು ಕುಸ್ತಿಪಟು ರಾಜ್‌ಪಾಲ್ ಫೋಗಟ್ ಅವರ ಪುತ್ರಿ. ಕುಸ್ತಿಪಟುಗಳಾದ ಗೀತಾ ಮತ್ತು ಬಬಿತಾ ಅವರ ಸೋದರಸಂಬಂಧಿ. ಕಾಮನ್‌ವೆಲ್ತ್ ಗೇಮ್ಸ್‌ನ 55 ಕೆಜಿ ವಿಭಾಗದಲ್ಲಿ ಆಕೆಯ ಸೋದರ ಸಂಬಂಧಿಗಳು ಚಿನ್ನ ಗೆದ್ದಿದ್ದರು.

ಆಮಿರ್ ಖಾನ್‌ ಅವರ ‘ದಂಗಲ್’  ಇನ್ನೊಂದು ಸರಣಿ?

2016 ರಲ್ಲಿ ಬಿಡುಗಡೆಯಾಗಿದ್ದ ನಿತೇಶ್ ತಿವಾರಿ ನಿರ್ದೇಶನದ ಕುಸ್ತಿ ಕಥಾ ಹಂದರದ, ಅಮೀರ್ ಖಾನ್ ಮತ್ತು ಕಿರಣ್ ರಾವ್ ಅವರ ಪ್ರೊಡಕ್ಷನ್ಸ್ ನಲ್ಲಿ ದಿ ವಾಲ್ಟ್ ಡಿಸ್ನಿ ಕಂಪನಿ ಇಂಡಿಯಾ ಅಡಿಯಲ್ಲಿ ಸಿದ್ಧಾರ್ಥ್ ರಾಯ್ ಕಪೂರ್ ಅವರೊಂದಿಗೆ ನಿರ್ಮಿಸಿದ್ದರು. ಚಿತ್ರದಲ್ಲಿ ಅಮೀರ್ ಖಾನ್ ಮಹಾವೀರ್ ಸಿಂಗ್ ಫೋಗಟ್ ಎಂಬ ಹವ್ಯಾಸಿ ಕುಸ್ತಿಪಟುವಾಗಿ ತೆರೆಯ ಮೇಲೆ ಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಪುತ್ರಿಯರಾದ ಗೀತಾ ಫೋಗಟ್ ಮತ್ತು ಬಬಿತಾ ಕುಮಾರಿ ಅವರನ್ನು ಭಾರತದ ಮೊದಲ ವಿಶ್ವ ದರ್ಜೆಯ ಮಹಿಳಾ ಕುಸ್ತಿಪಟುಗಳಾಗಲು ತರಬೇತಿ ನೀಡುವುದು ಕಥಾ ಹಂದರವಾಗಿತ್ತು.

ಸದ್ಯ ‘ದಂಗಲ್’ ಚಿತ್ರದ ಇನ್ನೊಂದು ಸೀಕ್ವೆಲ್ ಬರಬೇಕು ಎಂದು ಸಾಮಾಜಿಕ ತಾಣದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಬಾಲಿವುಡ್ ನಿಂದ ಯಾರು ಚಿತ್ರ ನಿರ್ಮಾಣಕ್ಕೆ ಮುಂದಾಗಲಿದ್ದಾರೆ ಎನ್ನುವುದು ಇನ್ನಷ್ಟೇ ತಿಳಿದು ಬರಬೇಕಿದೆ.

ಪ್ರಶಂಸೆ ಈಗೇಕೆ ಎನ್ನುತ್ತಿದ್ದಾರೆ..!!
ಭಾರತೀಯ ಕುಸ್ತಿ ಫೆಡರೇಷನ್ ನಲ್ಲಿ ಲೈಂಕಿಕ ಕಿರುಕುಳ ನೀಡಲಾಗುತ್ತಿದೆ ಎಂದು ಬಿಜೆಪಿ ಸಂಸದ, ಫೆಡರೇಷನ್ ಅಧ್ಯಕ್ಷರಾಗಿದ್ದ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಬೀದಿಗಿಳಿದು ಹೋರಾಟ ಆರಂಭಿಸಿದ್ದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಪದಕಗಳನ್ನು ಗೆದ್ದಿದ್ದ ಕ್ರೀಡಾಳುಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದು ಕೇಂದ್ರ ಸರಕಾರಕ್ಕೆ ಭಾರೀ ಮುಜುಗರ ಉಂಟು ಮಾಡಿತ್ತು. ಹಲವು ಸಂಘಟನೆಗಳು ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದವು.

ವಿನೇಶ್ ಫೋಗಟ್, ಸಾಕ್ಷಿ ಮಲಿಕ್, ಬಜರಂಗ್ ಪುನಿಯಾ, ಸಂಗೀತಾ ಫೋಗಟ್, ಸತ್ಯವರ್ತ್ ಕಡಿಯನ್, ಸೋಮವೀರ್ ರಾಠಿ ಮೊದಲಾದವರು ಮುಂಚೂಣಿಯಲ್ಲಿದ್ದರು.

ಬರೆದ ಪತ್ರವೂ ವೈರಲ್
ಹೋರಾಟಕ್ಕಿಳಿದ ವೇಳೆ ವಿನೇಶ್ ಫೋಗಟ್ ಅವರು ನ್ಯಾಯ ಕೇಳಿ ಕೇಂದ್ರ ಕ್ರೀಡಾ ಸಚಿವರಾಗಿದ್ದ ಅನುರಾಗ್ ಠಾಕೂರ್ ಅವರಿಗೆ ಬರೆದ ಪತ್ರವೂ ಸದ್ಯ ವೈರಲ್ ಆಗುತ್ತಿದೆ. ಹಲವಾರು ಮಂದಿ ಸಾಮಾಜಿಕ ತಾಣದಲ್ಲಿ ಸೆಮಿ ಫೈನಲ್ ನಲ್ಲಿ ವಿನೇಶ್ ಸಾಧಿಸಿದ್ದ ಗೆಲುವು ‘ಸತ್ಯಕ್ಕೆ ಸಂದ ಜಯ’ ಎಂದು ನೇರವಾಗಿ ಬ್ರಿಜ್ ಭೂಷಣ್ ಅವರ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದರು. ನಿರಂತರವಾಗಿ ಆಯ್ಕೆಯಾಗುತ್ತಿದ್ದ ಬ್ರಿಜ್ ಭೂಷಣ್ ಅವರಿಗೆ ಹೋರಾಟದ ಬಿಸಿ ಮುಟ್ಟಿದ ಪರಿಣಾಮವಾಗಿ ಕೈಸರ್ ಗಂಜ್ ಕ್ಷೇತ್ರದ ಟಿಕೆಟ್ ತಪ್ಪಿತ್ತು, ಆದರೆ ಪುತ್ರನಿಗೆ ಟಿಕೆಟ್ ಕೊಟ್ಟು ಗೆಲ್ಲಿಸಿಕೊಳ್ಳುವಲ್ಲಿ ಬಿಜೆಪಿ ಯಶಸ್ವಿಯಾಗಿತ್ತು.

ಸಾಮಾಜಿಕ ತಾಣದಲ್ಲಿ ಭಾರೀ ಚರ್ಚೆ
ಮಹಿಳೆಯರ 50 ಕೆಜಿ ಫ್ರೀಸ್ಟೈಲ್‌ ವಿಭಾಗದಲ್ಲಿ ಸ್ಪರ್ಧಿಸಿದ್ದ ಒಂದೇ ದಿನ ಮೂರು ಗೆಲುವು ಸಾಧಿಸಿ ಬೆರಗು ಮೂಡಿಸಿದ್ದರು. ಪ್ರಿ ಕ್ವಾರ್ಟರ್‌ ಫೈನಲ್‌ನಲ್ಲಿ ಹಾಲಿ ಚಾಂಪಿಯನ್‌, ವಿಶ್ವದ ನಂ.1 ರೆಸ್ಲರ್‌ ಜಪಾನ್‌ನ ಯೂಯಿ ಸುಸಾಕಿ ವಿರುದ್ಧ ಗೆದ್ದು ಪದಕದ ಭರವಸೆ ಮೂಡಿಸಿದ್ದರು. ಆ ಬಳಿಕ ಕ್ವಾರ್ಟರ್‌ ಫೈನಲ್‌ನಲ್ಲಿ ಉಕ್ರೇನ್‌ನ ಒಕ್ಸಾನಾ ಲಿವೆಚ್‌ ವಿರುದ್ಧ ಗೆದ್ದು, ರಾತ್ರಿ ನಡೆದ ಸೆಮಿಫೈನಲ್‌ನಲ್ಲಿ ಕ್ಯೂಬಾದ ಯುಸ್ನೆಲಿಸ್‌ ಗುಜ್ಮಾನ್‌ ಅವರನ್ನು 5-0 ಅಂತರದಿಂದ ಮಣಿಸಿ ಚಿನ್ನದ ಸ್ಪರ್ಧೆಗೆ ಸಜ್ಜಾಗಿದ್ದರು.

ಒಲಿಂಪಿಕ್ಸ್‌ ಫೈನಲ್‌ ಪ್ರವೇಶಿಸಿದ ಭಾರತದ ಮೊದಲ ವನಿತಾ ಕುಸ್ತಿಪಟು ಎಂಬ ಹೆಗ್ಗಳಿಗೆಗೂ ಭಾಜನರಾಗಿದ್ದರು. ಆದರೆ ಅನರ್ಹತೆ ಎನ್ನುವುದು ಕನಸೆಲ್ಲವೂ ಭೂಕುಸಿತದಲ್ಲಿ ಕೊಚ್ಚಿ ಹೋದ ಪರ್ವತದಂತಾಯಿತು.

ಒಂದಿಡೀ  ದಿನ ಭಾರೀ ಸುದ್ದಿಯಾಗಿದ್ದ ವಿನೇಶ್ ಪರ ಭಾರೀ ಬೆಂಬಲ ಸಾಮಾಜಿಕ ತಾಣದಲ್ಲಿ ವ್ಯಕ್ತವಾಗಿತ್ತು. ಇದರೊಂದಿಗೆ ಆಕೆಯ ಹೋರಾಟದ ಹಾದಿಯ ಫೋಟೋಗಳೂ ವೈರಲ್ ಆಗಿದ್ದವು. ಆಕೆಯನ್ನು ಬೀದಿಯಲ್ಲೇ ಭದ್ರತಾ ಸಿಬಂದಿಗಳು ಎಳೆದೊಯ್ಯುತ್ತಿದ್ದ ದೃಶ್ಯ ಹೆಚ್ಚು ಸುದ್ದಿಯಾಗಿತ್ತು, ಮಾತ್ರವಲ್ಲದೆ ಈಕೆಯೇ ಒಲಂಪಿಕ್ಸ್ ಕುಸ್ತಿ ಸ್ಪರ್ಧೆಯಲ್ಲಿ ಫೈನಲ್ ತಲುಪಿದ್ದಾ ಎನ್ನುವ ಪ್ರಶ್ನೆಗಳನ್ನೂ ಎತ್ತಲಾಗಿತ್ತು.

53 ಕೆಜಿ ವಿಭಾಗದಲ್ಲಿ ಆಡುತ್ತಿದ್ದರು!
ವಿನೇಶ್ ಹಿಂದೆ ವಿಶ್ವ ಚಾಂಪಿಯನ್ ಶಿಪ್ ನಲ್ಲಿ 53 ಕೆಜಿ ವಿಭಾಗದಲ್ಲಿ ಆಡಿ 2 ಕಂಚಿನ ಪದಕ ಗೆದ್ದಿದ್ದರು. 2018 ರಲ್ಲಿ ಜಕಾರ್ತಾ ಏಷ್ಯನ್ ಗೇಮ್ಸ್ ನಲ್ಲಿ 50 ಕೆ.ಜಿ ವಿಭಾಗದಲ್ಲಿ ಆಡಿ ಚಿನ್ನ ಗೆದ್ದಿದ್ದರು. 2014 ರಲ್ಲಿ ದಕ್ಷಿಣ ಕೊರಿಯಾದ ಇಂಚಿಯಾನ್ ನಲ್ಲಿ 48 ಕೆ.ಜಿ ವಿಭಾಗದಲ್ಲಿ ಕಂಚು ಗೆದ್ದಿದ್ದರು. ಕಾಮನ್ವೆಲ್ತ್ ಗೇಮ್ಸ್ ನಲ್ಲಿ 2014, 2018, 2022ರಲ್ಲಿ 48.50 ಮತ್ತು 53 ಕೆಜಿ ವಿಭಾಗದಲ್ಲಿ ಆಡಿ ಮೂರು ಚಿನ್ನದ ಪದಕ ಗೆದ್ದ ದಾಖಲೆ ಬರೆದಿದ್ದಾರೆ. ಏಷ್ಯನ್ ಚಾಂಪಿಯನ್‌ಶಿಪ್‌ಗಳಲ್ಲಿ 53 ಕೆಜಿ ವಿಭಾಗದಲ್ಲಿ ಮೂರು ಕಂಚು, 51 ಕೆಜಿ ವಿಭಾಗದಲ್ಲಿ ಒಂದು ಕಂಚು, 55 ಕೆಜಿ ವಿಭಾಗದಲ್ಲಿ, 50 ಕೆಜಿ ಮತ್ತು 48 ಕೆಜಿ ವಿಭಾಗದಲ್ಲಿ ಆಡಿ ಮೂರು ಬೆಳ್ಳಿಯ ಪದಕ ಗೆದ್ದಿದ್ದರು. 2021 ರಲ್ಲಿ 53 ಕೆಜಿ ವಿಭಾಗದಲ್ಲಿ ಚಿನ್ನದ ಪದಕ ಗೆದಿದ್ದರು. ಮೊದಲ ಒಲಂಪಿಕ್ಸ್ ಪದಕ ನಿರೀಕ್ಷೆಯಲ್ಲಿದ್ದ ವೇಳೆ ಅನರ್ಹತೆ ಎನ್ನುವ ಮಾನದಂಡ ಅಡ್ಡಿಯಾಗಿದೆ. ಛಲಗಾತಿ ಮುಂದಿನ ದಿನಗಳಲ್ಲಿ ಇನ್ನಷ್ಟು ಸಾಧನೆ ಮಾಡಲಿದ್ದಾರೆ ಎನ್ನುವ ಆಶಯ, ಶುಭಾಶಯಗಳನ್ನು ಸದ್ಯಕ್ಕೆ ಎಲ್ಲ ಭಾರತೀಯರೂ ಸಲ್ಲಿಸುತ್ತಿದ್ದಾರೆ. ಅಂತಾರಾಷ್ಟ್ರೀಯ ಒಲಂಪಿಕ್ಸ್ ಸಮಿತಿ ಯಾವ ನಿರ್ಧಾರ ಕೈಗೊಳ್ಳಲಿದೆ ಎನ್ನುವ ನಿರೀಕ್ಷೆಯಲ್ಲೂ ಇದ್ದಾರೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Harmanpreet Singh: ಹಾರ್ಮೋನಿಯಂ ಹುಚ್ಚಿದ್ದ ಹಳ್ಳಿಯ ಹುಡುಗ ಇದೀಗ ಹಾಕಿ ಸೂಪರ್‌ ಸ್ಟಾರ್‌

Harmanpreet Singh: ಹಾರ್ಮೋನಿಯಂ ಹುಚ್ಚಿದ್ದ ಹಳ್ಳಿಯ ಹುಡುಗ ಇದೀಗ ಹಾಕಿ ಸೂಪರ್‌ ಸ್ಟಾರ್‌

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

ಈ ಹಳ್ಳಿಯಲ್ಲಿ ಪ್ರತಿಯೊಬ್ಬ ಪುರುಷನು ಎರಡು ಬಾರಿ ಮದುವೆಯಾಗುತ್ತಾನಂತೆ! ಕಾರಣವೂ ವಿಚಿತ್ರ

ಈ ಹಳ್ಳಿಯಲ್ಲಿ ಪ್ರತಿಯೊಬ್ಬ ಪುರುಷನು ಎರಡು ಬಾರಿ ಮದುವೆಯಾಗುತ್ತಾನಂತೆ! ಕಾರಣವೂ ವಿಚಿತ್ರ

smi irani

Smriti Irani ದೆಹಲಿ ಬಿಜೆಪಿಯಲ್ಲಿ ಸಕ್ರಿಯ: ”ಸಿಎಂ ಫೇಸ್” ಆಗಿ ಕೇಳಿ ಬರುತ್ತಿರುವ ಹೆಸರು!

International Day of Democracy: “ವಿಶ್ವ ಪ್ರಜಾಪ್ರಭುತ್ವ” ಆತ್ಮಾವಲೇೂಕನ ದಿನ

International Day of Democracy: “ವಿಶ್ವ ಪ್ರಜಾಪ್ರಭುತ್ವ” ಆತ್ಮಾವಲೇೂಕನ ದಿನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.