Women’s ಟೇಬಲ್‌ ಟೆನಿಸ್‌: ಕ್ವಾರ್ಟರ್‌ ಫೈನಲ್‌ಗೆ ಭಾರತ ತಂಡ

ರೊಮೇನಿಯಾ ವಿರುದ್ಧ ಮಣಿಕಾ, ಶ್ರೀಜಾ, ಅರ್ಚನಾ ತಂಡಕ್ಕೆ ಜಯ

Team Udayavani, Aug 5, 2024, 10:29 PM IST

1-ak

ಪ್ಯಾರಿಸ್‌: ಒಲಿಂಪಿಕ್ಸ್‌ ಮಹಿಳಾ ಟೇಬಲ್‌ ಟೆನಿಸ್‌ ತಂಡ ಸ್ಪರ್ಧೆಯಲ್ಲಿ ಭಾರತ ಮೊದಲ ಬಾರಿಗೆ ಕ್ವಾರ್ಟರ್‌ ಫೈನಲ್‌ ತಲುಪಿ ದಾಖಲೆ ಬರೆದಿದೆ. ಸೋಮವಾರದ ಸ್ಪರ್ಧೆಯಲ್ಲಿ ಕನ್ನಡತಿ ಅರ್ಚನಾ ಗಿರೀಶ್‌ ಕಾಮತ್‌, ಮಣಿಕಾ ಬಾತ್ರಾ ಮತ್ತು ಶ್ರೀಜಾ ಅಕುಲಾ ಅವರನ್ನೊಳಗೊಂಡ ತಂಡ ರೊಮೇನಿಯಾ ವಿರುದ್ಧ 3-2 ಅಂತರದ ಜಯ ಸಾಧಿಸಿತು.
ಒಟ್ಟು 5 ಸುತ್ತುಗಳ ಸ್ಪರ್ಧೆಯಲ್ಲಿ ಭಾರತ ಆರಂಭಿಕ 2 ಪಂದ್ಯಗಳನ್ನು ಗೆದ್ದು 2-0 ಮುನ್ನಡೆ ಸಾಧಿಸಿತು. ಆದರೆ ತಿರುಗಿ ಬಿದ್ದ ರೊಮೇನಿಯಾ ಮುಂದಿನೆರಡು ಪಂದ್ಯಗಳನ್ನು ಗೆದ್ದು 2-2 ಸಮಬಲ ಸಾಧಿಸುವಲ್ಲಿ ಯಶಸ್ವಿಯಾಯಿತು. ನಿರ್ಣಾಯಕ ಪಂದ್ಯದಲ್ಲಿ ಮಣಿಕಾ ಬಾತ್ರಾ ಭಾರತದ ಗೆಲುವನ್ನು ಸಾರಿದರು.

ಮೊದಲ ಡಬಲ್ಸ್‌ನಲ್ಲಿ ಕರಾವಳಿ ಮೂಲದ ಕನ್ನಡತಿ ಅರ್ಚನಾ ಕಾಮತ್‌-ಶ್ರೀಜಾ ಅಕುಲಾ ಸೇರಿಕೊಂಡು ಅಡಿನಾ ಡಿಯಾಕೊನು-ಎಲಿಜಬೆತ ಸಮರಾ ಜೋಡಿ ವಿರುದ್ಧ 11-9, 12-10, 11-7 ಅಂತರದ ಜಯ ಸಾಧಿಸಿದರು. ಮುಂದಿನ ಪಂದ್ಯದಲ್ಲಿ ಮಣಿಕಾ ಬಾತ್ರಾ 11-5, 11-7, 11-7 ಅಂತರದಿಂದ ಬರ್ನಾಡೆಟ್‌ ಸೋಕ್ಸ್‌ ವಿರುದ್ಧ ಗೆದ್ದರು.

3ನೇ ಪಂದ್ಯದಲ್ಲಿ ಎಲಿಜಬೆತ್‌ ಸಮರಾ ವಿರುದ್ಧ ಶ್ರೀಜಾ ಸೋಲು ಕಾಣಬೇಕಾಯಿತು. ಅಂತರ 11-8, 4-11, 11-7, 6-11. 4ನೇ ಪಂದ್ಯದಲ್ಲಿ ಅರ್ಚನಾಗೆ ಅದೃಷ್ಟ ಒಲಿಯಲಿಲ್ಲ. ಅವರು ಬರ್ನಾಡೆಟ್‌ ಸೋಕ್ಸ್‌ ವಿರುದ್ಧ 5-11, 11-8, 7-11 ಅಂತರದಿಂದ ಸೋತರು. ರೊಮೇನಿಯಾ ಹೋರಾಟವನ್ನು ಸಮಬಲಕ್ಕೆ ತರುವಲ್ಲಿ ಯಶಸ್ವಿಯಾಗಿತ್ತು. ನಿರ್ಣಾಯಕ ಪಂದ್ಯದಲ್ಲಿ ಮಣಿಕಾ ಬಾತ್ರಾ ಭಾರತದ ಪಾಲಿನ ಆಪತಾºಂಧವರಾಗಿ ಮೂಡಿಬಂದರು. ಅವರು ಅಡಿನಾ ಡಿಯಾಕೊನು ವಿರುದ್ಧ 11-5, 11-9, 11-9 ಮೇಲುಗೈ ಸಾಧಿಸಿದರು.

* ಪುರುಷರ ಟಿಟಿ, ಚೀನ ಎದುರಾಳಿ
ಟೇಬಲ್‌ ಟೆನಿಸ್‌ ತಂಡ ವಿಭಾಗದಲ್ಲಿ ಭಾರತದ ಪುರುಷರು ಸೋಮವಾರ ಚೀನವನ್ನು ಎದುರಿಸಲಿದೆ. ಶರತ್‌ ಕಮಲ್‌, ಮಾನವ್‌ ಥಾಕರ್‌, ಹರ್ಮೀತ್‌ ದೇಸಾಯಿ ಭಾರತ ತಂಡದಲ್ಲಿದ್ದಾರೆ.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sanjay Sing WFI

Vinesh Phogat ತೀರ್ಪು ನಮ್ಮ ಪರ ಬರುವ ನಿರೀಕ್ಷೆ;ಅದು ವೈಯಕ್ತಿಕ ಪದಕವಲ್ಲ: ಸಂಜಯ್ ಸಿಂಗ್

America

Paris Olympics: ಅಮೆರಿಕಕ್ಕೆ ಬಂತು ಒಲಿಂಪಿಕ್ಸ್‌  ಧ್ವಜ

emanual

Paris: 2036ರ ಒಲಿಂಪಿಕ್ಸ್‌ ಭಾರತ ನಡೆಸ‌ಬಲ್ಲದು: ಫ್ರಾನ್ಸ್‌ ಅಧ್ಯಕ್ಷ

Paris-ind

Paris Olympics 2024ಕ್ಕೆ ವರ್ಣರಂಜಿತ ವಿದಾಯ

IOA shrugs off Vinish Phogat issue; What did PT Usha say?

IOA; ವಿನೀಶ್‌ ಫೋಗಾಟ್‌ ವಿಚಾರದಲ್ಲಿ ತಣ್ಣಗೆ ನುಣುಚಿಕೊಂಡಿತಾ ಐಒಎ?; ಪಿಟಿ ಉಷಾ ಹೇಳಿದ್ದೇನು?

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.