![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 29, 2021, 8:27 PM IST
ನವದೆಹಲಿ: ಪಂಜಾಬ್ ರಾಜಕೀಯ ಬಿಕ್ಕಟ್ಟಿನ ವಿಚಾರವಾಗಿ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿರುವ ಅದೇ ಪಕ್ಷದ ಹಿರಿಯ ಕಪಿಲ್ ಸಿಬಲ್ ಮನೆ ಎದುರು ಪ್ರತಿಭಟನೆ ನಡೆಸಿದೆ.
ಇಂದು ಸಂಜೆ ಮನೆ ಎದುರು ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಸಿಬಲ್ ಅವರ ಕಾರಿನ ಮೇಲೆ ಕಲ್ಲು ಹಾಗೂ ಟೊಮೊಟೊ ತೂರಿದ್ದಾರೆ. Get well soon kapil sibal ಎನ್ನುವ ಫೋಸ್ಟರ್ ಗಳನ್ನು ಹಿಡಿದು ಪ್ರತಿಭಟನೆ ನಡೆಸಿದ್ದಾರೆ.
ಪಂಜಾಬ್ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ಒಳ ಜಗಳದ ಕುರಿತು ಇಂದು ಸಿಬಲ್ ಅವರು ಆಕ್ರೋಶ ಹೊರಹಾಕಿದ್ದರು. “ಕಾಂಗ್ರೆಸ್ ನಲ್ಲಿ ಈಗ ಚುನಾಯಿತ ಅಧ್ಯಕ್ಷರಿಲ್ಲ. ಯಾರು ಕರೆಗಳನ್ನು ತೆಗೆದುಕೊಳ್ಳುತ್ತಿದ್ದಾರೆ? ಪಕ್ಷದಲ್ಲಿ ಯಾರು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂಬುದು ನಮಗೆ ಗೊತ್ತಿಲ್ಲ” ಎಂದು ಅವರು ನುಡಿದಿದ್ದರು.
ಪಂಜಾಬ್ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ಜಗಳದ ಲಾಭವನ್ನು ಪಾಕ್ ಪಡೆಯಲಿದೆ. ಇದನ್ನು ಕಾಂಗ್ರೆಸ್ ಅರ್ಥ ಮಾಡಿಕೊಂಡು ಒಗ್ಗಟ್ಟಿನಿಂದ ಇರಬೇಕೆಂದು ಸಲಹೆ ನೀಡಿದ್ದರು.
ಸಿಬಲ್ ಅವರ ಈ ಹೇಳಿಕೆ ವಿರುದ್ಧ ಕಾಂಗ್ರೆಸ್ನ ಯುವ ಘಟಕ ಪ್ರತಿಭಟನೆ ನಡೆಸಿದೆ. “ನೀವು ಪಕ್ಷ ಬಿಟ್ಟು ಹೊರಗೆ ನಡೆಯಿರಿ”ಎಂದು ಆಗ್ರಹಿಸಿದ ಪ್ರತಿಭಟನಾಕಾರರು, “ರಾಹುಲ್ ಗಾಂಧಿ ಜಿಂದಾಬಾದ್” ಎಂದು ಘೋಷಣೆ ಕೂಗಿದ್ದಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.