![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
Team Udayavani, Nov 9, 2022, 7:00 PM IST
ಬೆಂಗಳೂರು :“ಯತ್ನಾಳ್ ನಮ್ಮ ಪಕ್ಷದ ನಾಯಕರಲ್ಲ” ಎಂದಿದ್ದ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಯತ್ನಾಳ್ರ ಜತೆ ರಹಸ್ಯ ಮಾತುಕತೆ ಮಾಡಿದ್ದಾರೆ.ಇಂತಹ ಸದಾರಮೆ ನಾಟಕ ಬಿಜೆಪಿಗೆ ಮಾತ್ರ ಸಾಧ್ಯವೇನೋ! ಎಂದು ರಾಜ್ಯ ಕಾಂಗ್ರೆಸ್ ಸರಣಿ ಟ್ವೀಟ್ ಗಳನ್ನು ಮಾಡಿದೆ.
ಬಿ.ಯಸ್. ಯಡಿಯೂರಪ್ಪ ಅವರಿಗೆ ಮಸಿ ಬಳಿಯಲು ಬಿಜೆಪಿಯೇ ಯತ್ನಾಳರನ್ನು ಮುಂದೆ ಬಿಟ್ಟಿದೆಯೇ? ಇದು ತೊಟ್ಟಿಲನ್ನೂ ತೂಗುತ್ತಾ, ಮಗುವನ್ನೂ ಚಿವುಟುವ ಆಟವೇ? ಎಂದು ಬಿಜೆಪಿಯನ್ನು ಪ್ರಶ್ನಿಸಿದೆ.
ಯತ್ನಾಳರನ್ನು ಗಂಭೀರವಾಗಿ ಪರಿಗಣಿಸಬೇಕಿಲ್ಲ, ಅವರು ನಮ್ಮ ಪಕ್ಷದ ನಾಯಕರಲ್ಲ ಎಂದಿದ್ದ ಅರುಣ್ ಸಿಂಗ್ ಈಗ ಅದೇ ಯತ್ನಾಳರೊಂದಿಗೆ ಗಂಭೀರವಾಗಿ ರಹಸ್ಯ ಮಾತುಕತೆ ನಡೆಸಿರುವುದೇಕೆ? ಆ ರಹಸ್ಯ ಏನು? ಬಿಎಸ್ ವೈ ಮೇಲೆ ಇನ್ನಷ್ಟು ದಾಳಿಯ ಸಂಚು ರೂಪಿಸುವುದೇ? ಸಿಎಂ ಹುದ್ದೆಯ ಬಲವಾದ ಆಕಾಂಕ್ಷಿಯಾಗಿರುವ ಯತ್ನಾಳರ ಆಸೆ ಈಡೇರಿಸುವ ಭೇಟಿಯೇ? ಯತ್ನಾಳರೊಂದಿಗೆ ಖಾಸಾ ಖಾಸಾ ಮಾತುಕತೆ ನಡೆಸಿರುವ ಅರುಣ್ ಸಿಂಗ್ ಅವರೇ,ಬಿಜೆಪಿಗೆ ಯತ್ನಾಳ್ ನೀಡಿದ ‘ಬ್ಲಾಕ್ಮೇಲ್ ಜನತಾ ಪಾರ್ಟಿ’ ಎಂಬ ಹೆಸರನ್ನು ಒಪ್ಪುವಿರಾ? ಎಂದು ಟ್ವೀಟ್ ಗಳಲ್ಲಿ ಪ್ರಶ್ನಿಸಿದೆ.
ಸಿಎಂ ಹುದ್ದೆಗೆ 2,500 ಕೋಟಿ ರೂ ಸಲ್ಲಿಸಬೇಕು ಎಂಬ ಹೇಳಿಕೆ ಅನುಮೋದಿಸುತ್ತೀರಾ?ಹಣ ನೀಡಿ ಮಂತ್ರಿಯಾದವರಿದ್ದಾರೆ ಎಂಬ ಯತ್ನಾಳ್ ಆರೋಪ ಒಪ್ಪುವಿರಾ? ಎಂದು ಇನ್ನೊಂದು ಟ್ವೀಟ್ ನಲ್ಲಿ ಪ್ರಶ್ನಿಸಿದೆ.
Karnataka BJP: ಬಿಜೆಪಿ ಹೈಕಮಾಂಡ್ ಗೆ ರಾಜ್ಯ ಬಿಜೆಪಿ ನುಂಗಲಾರದ ತುತ್ತು?
By Poll: ಅಯೋಧ್ಯೆ ಸೋಲಿಗೆ ಸೇಡು ತೀರಿಸಿಕೊಂಡ ಯೋಗಿ- ಮಿಲ್ಕಿಪುರ್ ಬಿಜೆಪಿ ತೆಕ್ಕೆಗೆ
Delhi Polls Results 2025:ದೆಹಲಿಯಲ್ಲಿ ಸತತ 3ನೇ ಅವಧಿಗೂ ಕಾಂಗ್ರೆಸ್ ಶೂನ್ಯ ಸಂಪಾದನೆ!?
Delhi Assembly Election: ದೆಹಲಿ ಮತ ಎಣಿಕೆ ಆರಂಭ; ಯಾರ ಪಾಲಾಗಲಿದೆ ದಿಲ್ಲಿಯ ಗದ್ದುಗೆ?
Delhi Election: ದಿಲ್ಲಿಯಲ್ಲಿಂದು ಮತದಾನ: ಕುರ್ಚಿಗಾಗಿ ತ್ರಿಕೋನ ಕದನ
Surathkal: ಆರು ಬಾರಿಯ ಚಾಂಪಿಯನ್, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Sulya: ಪೈಪ್ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
You seem to have an Ad Blocker on.
To continue reading, please turn it off or whitelist Udayavani.