![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Aug 12, 2023, 4:08 PM IST
ಹೊಸದಿಲ್ಲಿ: ಒಡಿಶಾದ ಆಡಳಿತಾರೂಢ ಬಿಜೆಡಿ ದೆಹಲಿ ಸೇವಾ ಮಸೂದೆಯನ್ನು ಬೆಂಬಲಿಸಿದ ನಂತರ, ವಿರೋಧ ಪಕ್ಷಗಳ ಇಂಡಿಯಾ(I.N.D.I.A) ಒಕ್ಕೂಟದ ಅವಿಶ್ವಾಸ ನಿರ್ಣಯವನ್ನು ವಿರೋಧಿಸಿದ ತಕ್ಷಣವೇ, ಕೇಂದ್ರ ಗೃಹ ಸಚಿವ ಅಮಿತ್ ಶಾ ಒಡಿಶಾಗೆ ಬಂದಿದ್ದು, ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರನ್ನು ಶ್ಲಾಘಿಸಿದ್ದಾರೆ.
ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಒಡಿಶಾದಲ್ಲಿ ಹೋರಾಟವು ತೀವ್ರವಾಗಿರುತ್ತದೆಯೇ ಅಥವಾ ಸ್ನೇಹಪರವಾಗಿರುತ್ತದೆಯೇ ಎಂದು ರಾಜಕೀಯ ವಿಶ್ಲೇಷಕರು ಲೆಕ್ಕಾಚಾರ ಮಾಡಲು ಪ್ರಾರಂಭಿಸಿದ್ದಾರೆ.
ಪುರಿಯ ಬಿಜೆಡಿ ಸಂಸದ ಪಿನಾಕಿ ಮಿಶ್ರಾ ಕೂಡ ಲೋಕಸಭೆಯಲ್ಲಿ ಪ್ರಧಾನಿ ಮತ್ತು ಕೇಂದ್ರ ಗೃಹ ಸಚಿವರ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಆದರೂ, ಪಕ್ಷ ತನ್ನ ರಾಜಕೀಯ ಒಲವುಗಳಲ್ಲಿ ನಿಲುವು ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
“ಒಳ್ಳೆಯ ಕೆಲಸ ಮಾಡುತ್ತಿರುವವರನ್ನು ಹೊಗಳುವುದರಲ್ಲಿ ತಪ್ಪೇನಿಲ್ಲ. ನಾವು ಜನಪರ ಅಜೆಂಡಾಗಳನ್ನು ಬೆಂಬಲಿಸುತ್ತೇವೆ ಮತ್ತು ಜನವಿರೋಧಿಗಳನ್ನು ವಿರೋಧಿಸುತ್ತೇವೆತಮ್ಮ ಪಕ್ಷದ ನಿಲುವನ್ನು ಸ್ಪಷ್ಟಪಡಿಸಿದ ಅವರು, ನಾವು ನಮ್ಮ ಸ್ವಂತ ಬಲದ ಮೇಲೆ ಚುನಾವಣೆಯನ್ನು ಎದುರಿಸುತ್ತೇವೆ. ಮೈತ್ರಿಯ ಪ್ರಶ್ನೆಯೇ ಇಲ್ಲ ಎಂದು ಬಿಜೆಡಿ ಶಾಸಕ ಪರಶುರಾಮ್ ಧಾಡಾ ಹೇಳಿದ್ದಾರೆ.
“ರಾಜಕೀಯದಲ್ಲಿ ಏನನ್ನೂ ಊಹಿಸುವುದು ತುಂಬಾ ಕಷ್ಟ, ಕೇಂದ್ರ ನಾಯಕತ್ವವು ಮೈತ್ರಿ ಬಗ್ಗೆ ನಿರ್ಧರಿಸುತ್ತದೆ ಮತ್ತು ನಾವು ಸರಿಯಾದ ಸಮಯದಲ್ಲಿ ಘೋಷಣೆ ಮಾಡುತ್ತೇವೆ” ಎಂದು ಕೇಂದ್ರ ಸಚಿವ ಅಶ್ವಿನಿ ಕೆ.ಚೌಬೆ ಹೇಳಿದ್ದಾರೆ.
ಈ ಬಗ್ಗೆ ಬಿಜೆಪಿ ಸಂಸದ ಸುರೇಶ್ ಪೂಜಾರಿ ಅವರು ಪ್ರತಿಕ್ರಿಯಿಸಿ “ಒಡಿಶಾದ ಅಭಿವೃದ್ಧಿ ಮತ್ತು ಬಡತನ ನಿರ್ಮೂಲನೆ ಯೋಜನೆಗಳ ಅನುಷ್ಠಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆಯವರೆಗೆ ಒಪ್ಪಿಕೊಳ್ಳದಿದ್ದ ಬಡತನ ನಿರ್ಮೂಲನೆ ಯೋಜನೆಗಳ ಅನುಷ್ಠಾನಕ್ಕೆ ಉದಾರವಾಗಿ ಸಹಾಯ ಮಾಡುತ್ತಿದ್ದಾರೆ ಎಂದು ಬಿಜೆಡಿ ಒಪ್ಪಿಕೊಂಡಿದೆ ಎಂದು ಹೇಳಿದ್ದಾರೆ.
ಮತ್ತೊಂದೆಡೆ, ಬಿಜೆಪಿ ಮತ್ತು ಬಿಜೆಡಿ ನಡುವಿನ ಬಾಂಧವ್ಯ ಕೇಂದ್ರ ತನಿಖಾ ಸಂಸ್ಥೆಗಳ ಭಯದಿಂದ ನಿರ್ಮಾಣವಾಗಿದೆ ಕಾಂಗ್ರೆಸ್ ಆರೋಪಿಸಿದೆ.
2019ರ ಲೋಕಸಭಾ ಚುನಾವಣೆಯಲ್ಲಿ ಒಡಿಶಾದ ಒಟ್ಟು 21 ಸ್ಥಾನಗಳ ಪೈಕಿ ಬಿಜೆಪಿ 8 ಸ್ಥಾನಗಳಲ್ಲಿ, ಬಿಜೆಡಿ 12 ಸ್ಥಾನಗಳನ್ನು, ಕಾಂಗ್ರೆಸ್ 1 ಸ್ಥಾನದಲ್ಲಿ ಮಾತ್ರ ಗೆಲುವು ಸಾಧಿಸಿತ್ತು.
Karnataka BJP: ಬಿಜೆಪಿ ಹೈಕಮಾಂಡ್ ಗೆ ರಾಜ್ಯ ಬಿಜೆಪಿ ನುಂಗಲಾರದ ತುತ್ತು?
By Poll: ಅಯೋಧ್ಯೆ ಸೋಲಿಗೆ ಸೇಡು ತೀರಿಸಿಕೊಂಡ ಯೋಗಿ- ಮಿಲ್ಕಿಪುರ್ ಬಿಜೆಪಿ ತೆಕ್ಕೆಗೆ
Delhi Polls Results 2025:ದೆಹಲಿಯಲ್ಲಿ ಸತತ 3ನೇ ಅವಧಿಗೂ ಕಾಂಗ್ರೆಸ್ ಶೂನ್ಯ ಸಂಪಾದನೆ!?
Delhi Assembly Election: ದೆಹಲಿ ಮತ ಎಣಿಕೆ ಆರಂಭ; ಯಾರ ಪಾಲಾಗಲಿದೆ ದಿಲ್ಲಿಯ ಗದ್ದುಗೆ?
Delhi Election: ದಿಲ್ಲಿಯಲ್ಲಿಂದು ಮತದಾನ: ಕುರ್ಚಿಗಾಗಿ ತ್ರಿಕೋನ ಕದನ
You seem to have an Ad Blocker on.
To continue reading, please turn it off or whitelist Udayavani.