![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Sep 28, 2021, 6:23 PM IST
ನವದೆಹಲಿ : ಜೆಎನ್ಯು ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ಹಯ್ಯಾ ಕುಮಾರ್ ಅವರು ರಾಹುಲ್ ಗಾಂಧಿ ಸಮ್ಮುಖದಲ್ಲಿ ನವದೆಹಲಿಯಲ್ಲಿ ಇಂದು( ಸೆ.28) ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕೃತವಾಗಿ ಸೇರ್ಪಡೆಯಾದರು.
ಪಕ್ಷ ಸೇರ್ಪಡೆಯ ಬಳಿಕ ಮಾಧ್ಯಮಗಳಿಗೆ ಮಾತನಾಡಿದ ಅವರು, ಒಂದು ರಾಜಕೀಯ ಪಕ್ಷ ಎನ್ನುವ ಕಾರಣಕ್ಕೆ ನಾನು ಕಾಂಗ್ರೆಸ್ ಸೇರುತ್ತಿಲ್ಲ. ಬದಲಾಗಿ ಇದು ದೇಶದ ಅಂತ್ಯಂತ ಹಳೆಯ ಹಾಗೂ ಪ್ರಜಾಪ್ರಭುತ್ವದ ಪಕ್ಷ. ನಾನು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇರಿಸಿಕೊಂಡವನು. ಕೇವಲ ನಾನು ಮಾತ್ರವಲ್ಲ ದೇಶದ ಸಾಕಷ್ಟು ಜನರು ಕಾಂಗ್ರೆಸ್ ಇಲ್ಲದೆ ದೇಶ ಉಳಿಯುವುದಿಲ್ಲ ಎಂದು ನಂಬಿದವರಿದ್ದಾರೆ ಎಂದರು.
ಕಾಂಗ್ರೆಸ್ ಪಕ್ಷವು ದೊಡ್ಡ ಹಡಗಿನಂತಿದೆ. ಅದನ್ನು ಉಳಿಸಿದರೆ, ಮಹಾತ್ಮ ಗಾಂಧಿಯವರ ಏಕತೆ, ಭಗತ್ ಸಿಂಗ್ ಅವರ ಧೈರ್ಯ ಮತ್ತು ಬಿಆರ್ ಅಂಬೇಡ್ಕರ್ ಅವರ ಸಮಾನತೆಯ ಕಲ್ಪನೆಯನ್ನು ಸಹ ರಕ್ಷಿಸಿದಂತಾಗುತ್ತದೆ. ಅದಕ್ಕಾಗಿ ನಾನು ಈ ಪಕ್ಷವನ್ನು ಸೇರಿದೆ ಎಂದು ಕನ್ಹಯ್ಯಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಗುಜರಾತ್ ನ ಪಕ್ಷೇತರ ಶಾಸಕ ಜಿಗ್ನೇಶ್ ಮೇವಾನಿ ಮಾತನಾಡಿ, ಕಾರಣಾಂತರಗಳಿಂದ ನಾನು ಅಧಿಕೃತವಾಗಿ ಕಾಂಗ್ರೆಸ್ ಸೇರಲು ಆಗುತ್ತಿಲ್ಲ. ಆದರೆ, ಈ ಪಕ್ಷಕ್ಕೆ ನನ್ನ ಬೆಂಬಲ ಮುಂದುವರೆಯುತ್ತದೆ. ಹಾಗೂ ಮುಂದಿನ ಚುನಾವಣೆಯನ್ನು ಕಾಂಗ್ರೆಸ್ ಪಕ್ಷದ ಮೂಲಕ ಎದುರಿಸುತ್ತೇನೆ ಎಂದರು.
ಇನ್ನು ಕನ್ಹಯ್ಯಾ ಹಾಗೂ ಜಿಗ್ನೇಶ್ ಕಾಂಗ್ರೆಸ್ ಸೇರಲಿದ್ದಾರೆ ಎನ್ನುವ ಸುದ್ದಿ ಕಳೆದ ಕೆಲ ದಿನಗಳಿಂದ ಕೇಳಿ ಬರುತ್ತಿತ್ತು. ಅಕ್ಟೋಬರ್ 2 ರಂದು ಇಬರಿಬ್ಬರು ‘ಕೈ’ ಹಿಡಿಯಲಿದ್ದಾರೆ ಎನ್ನಲಾಗುತ್ತಿತ್ತು. ಅದಕ್ಕೂ ಮುನ್ನವೇ ಕನ್ಹಯ್ಯಾ ಕಾಂಗ್ರೆಸ್ ಸೇರಿದ್ದು, ಜಿಗ್ನೇಶ್ ಮುಂದಿನ ಚುನಾವಣೆ ವೇಳೆ ಪಕ್ಷ ಸೇರುವುದಾಗಿ ಹೇಳಿದ್ದಾರೆ.
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.